Home Archive by category kundapura (Page 4)

ಮೀನು ಖರೀದಿಗೆ ಬಹಿಷ್ಕಾರ ಹಾಕಿ ಮಹಿಳೆಯರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಯಶ ಕಾಣದು: ಸದಾನಂದ ಉಪ್ಪಿನಕುದ್ರು

ಕುಂದಾಪುರ: ಗಂಗೊಳ್ಳಿಯಲ್ಲಿ ಗೋ ಹತ್ಯೆಯನ್ನು ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯ ಬಳಿಕ ಇಲ್ಲಿನ ಮೀನುಗಾರ ಮಹಿಳೆಯರಿಂದ ಮೀನು ಖರೀದಿ ಬಹಿಷ್ಕರಿಸಿದ ಅನ್ಯಧರ್ಮೀಯರ ನಡೆಯನ್ನು ಖಂಡಿಸಿ ಭಾನುವಾರ ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗ ಮೋರ್ಚಾ ವತಿಯಿಂದ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿ ಮಾಡುವ ಮೂಲಕ ಮೀನುಗಾರ ಮಹಿಳೆಯರಿಗೆ ಆತ್ಮಸ್ಥೈರ್ಯ

ಕೇಂದ್ರದ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿಗೆ ಖಂಡನೆ: ಕುಂದಾಪುರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಕುಂದಾಪುರ: ಕೊರೋನಾ ಮಹಾಮಾರಿಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆಯೇ ಸಂಪೂರ್ಣ ಹದಗೆಟ್ಟು ಹೋಗಿದೆ. ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ಪರದಾಟ ನಡೆಸುತ್ತಿರುವ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿ ತರುವ ಮೂಲಕ ರೈತರನ್ನು, ಕಾರ್ಮಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ.ಶಂಕರ್ ಆರೋಪಿಸಿದರು. ಅವರು ಕೃಷಿ ಕಾಯ್ದೆ, ವಿದ್ಯುತ್ ಮಸೂದೆ, ಕಾರ್ಮಿಕರ

ಆತಂಕ ಸೃಷ್ಟಿಸಿದ ಚಾಲಕ: ಬರೋಬ್ಬರಿ ನಾಲ್ಕು ಕಿ.ಮೀ ತನಕ ಬ್ಯಾರಿಕೇಡ್ ಎಳೆದೊಯ್ದ ಕಂಟೇನರ್!

ಕುಂದಾಪುರ: ವಿಪರೀತ ಮದ್ಯ ಸೇವಿಸಿದ ಚಾಲಕನೋರ್ವ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಯದ್ವಾತದ್ವ ಕಂಟೇನರ್ ಚಲಾಯಿಸಿ ಕೆಲಹೊತ್ತು ಆತಂಕ ಸೃಷ್ಠಿಸಿದ ಘಟನೆ ತಾಲೂಕಿನ ಮುಳ್ಳಿಕಟ್ಟೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಕುರುಚಲು ಹುಲ್ಲು ಸಾಗಿಸುತ್ತಿದ್ದ ಛತ್ತೀಸ್ ಗಡ ಮೂಲದ ನೋಂದಣಿಯ ಕಂಟೇನರ್ ಚಾಲಕ ವಿಪರೀತವಾಗಿ ಮದ್ಯ ಸೇವಿಸಿ ಕಂಟೇನರ್ ಚಲಾಯಿಸಿದ ಪರಿಣಾಮ ಮುಳ್ಳಿಕಟ್ಟೆ ಜಂಕ್ಷನ್ ನಲ್ಲಿ ಇತ್ತೀಚೆಗಷ್ಟೇ ಹೊಸದಾಗಿ ಅಳವಡಿಸಲಾಗಿದ್ದ ಬ್ಯಾರಿಕೇಡ್ ಅನ್ನು ಬರೋಬ್ಬರಿ

ಬ್ರಹ್ಮಾವರದಲ್ಲಿ ಆಂಬುಲೆನ್ಸ್ ಟಯರ್ ಸ್ಪೋಟ: ತಪ್ಪಿದ ಭಾರೀ ದುರಂತ

ಕುಂದಾಪುರ: ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಂಬುಲೆನ್ಸ್ ನ ಟಯರ್ ಸ್ಪೋಟಗೊಂಡ ಪರಿಣಾಮ ಆಂಬುಲೆನ್ಸ್ ರಸ್ತೆ ವಿಭಾಜಕವೇರಿ ಆವರಣಗೋಡೆಗೆ ಢಿಕ್ಕಿ ಹೊಡೆದ ಘಟನೆ ಬ್ರಹ್ಮಾವರ ತಾಲೂಕಿನ ಮಾಬುಕಳ ಸೇತುವೆಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಉತ್ತರಕನ್ನಡ ಮೂಲದ ಅನಾರೋಗ್ಯಪೀಡಿತ ಮಗುವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದ ಆಂಬುಲೆನ್ಸ್‌ನ ಟಯರ್ ಏಕಾಏಕಿ ಸ್ಪೋಟಗೊಂಡಿದ್ದು ಚಾಲಕನ ನಿಯಂತ್ರಣ ತಪ್ಪಿ

ಸೌಪರ್ಣಿಕಾ ನದಿಗೆ ಕಾಲು ಜಾರಿ ಬಿದ್ದು ತಾಯಿ, ಮಗು ಸಾವು

ಕುಂದಾಪುರ: ನದಿದಂಡೆಯಲ್ಲಿ ವಾಯು ವಿಹಾರ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮಗ ಕಾಲು ಜಾರಿ ನದಿಗೆ ಬಿದ್ದಿದ್ದು, ಆತನನ್ನು ರಕ್ಷಿಸಲೆಂದು ನದಿಗೆ ಹಾರಿದ ತಾಯಿ ಹಾಗೂ ಮಗ ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಧಾರುಣ ಘಟನೆ ಶನಿವಾರ ನಾಡ ಗ್ರಾಮದ ಚುಂಗಿಗುಡ್ಡೆಯಲ್ಲಿ ಸಂಭವಿಸಿದೆ. ನಾಡ ಗ್ರಾಮದ ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೋಸಿರಿಯಾ (34) ಹಾಗೂ ಪುತ್ರ ಶಾನ್ ರಿಚ್ಚಿ (11) ಸಾವನ್ನಪ್ಪಿದವರು. ರೋಸಿರಿಯಾ ಅವರು ಹಿಂದೆ ಕುವೈಟ್‌ನಲ್ಲಿ ಜೆಟ್

ಆನೆಗುಡ್ಡೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಸಹಸ್ರ ನಾರಿಕೇಳ ಗಣಯಾಗ

ಕುಂದಾಪುರ: ಕೊರೋನಾ ಭೀತಿಯ ನಡುವೆಯೂ ಗಣೇಶ ಚತುರ್ಥಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ, ಸಂಭ್ರಮದಿಂದ ನಡೆದಿದ್ದು, ಭಕ್ತರು ಸಂಕಷ್ಟಹರ ವಿನಾಯಕನ ಪೂಜೆಯಲ್ಲಿ ಪಾಲ್ಗೊಂಡರು. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮುಂಜಾನೆಯಿಂದಲೇ ಭಕ್ತರ ದಂಡು ಕಂಡುಬಂದಿತ್ತು. ಬೆಳಿಗ್ಗೆನಿಂದಲೇ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ದೇವಾಲಯದ ಒಳಗೆ ಗಣಪನ ದರ್ಶನಕ್ಕೆ ಮಾತ್ರವೇ ಅವಕಾಶ ಕಲ್ಪಿಸಲಾಯಿತು. ಅರ್ಚಕರಿಂದ

ಗ್ರಾಹಕರ ಬಳಿ ಮ್ಯಾನೇಜರ್ ಉಡಾಫೆ ವರ್ತನೆ ಆರೋಪ: ಹಟ್ಟಿಯಂಗಡಿ ಬ್ಯಾಂಕ್ ಗೆ ಮುತ್ತಿಗೆ ಹಾಕಿ ಆಕ್ರೋಶ

ಕುಂದಾಪುರ: ಮಗಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಶಿಕ್ಷಣ ಸಾಲ ಕೇಳಲು ಹೋದಾಗ ಮ್ಯಾನೇಜರ್ ಸಮರ್ಪಕ ಮಾಹಿತಿ ನೀಡದೇ ಉಡಾಫೆಯಾಗಿ ನಡೆದುಕೊಂಡಿದ್ದಾರೆಂದು ಆರೋಪಿಸಿ ಹಟ್ಟಿಯಂಗಡಿ ಕರ್ನಾಟಕ ಬ್ಯಾಂಕಿಗೆ ಆಗಮಿಸಿದ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು. ಹಟ್ಟಿಯಂಗಡಿ ನಿವಾಸಿ ನಾಗರಾಜ ಪೂಜಾರಿ ಎನ್ನುವವರು ತಮ್ಮ ಮಗಳ ಉನ್ನತ ವಿದ್ಯಾಭ್ಯಾಸದ ಸಲುವಾಗಿ ಎಜುಕೇಶನ್ ಲೋನ್ ಕೇಳಲು ಮಂಗಳವಾರ ಕರ್ನಾಟಕ ಬ್ಯಾಂಕ್ ಹಟ್ಟಿಯಂಗಡಿ ಶಾಖೆಗೆ ತೆರಳಿದ್ದರು. ಈ ವೇಳೆ ಬ್ಯಾಂಕ್ ಮ್ಯಾನೇಜರ್

ಗಾಳಿ ಮಳೆಯಿಂದಾಗಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್‌ಗೆ ಹಾನಿ

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಅರಬ್ಬಿ‌ ಸಮುದ್ರದಲ್ಲಿ ‌ಬಾರಿ ಗಾಳಿ ಮಳೆಯಾಗಿದ್ದು, ಕುಂದಾಪುರದಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಈ ಗಾಳಿ ಮಳೆಗೆ ಸಿಲುಕಿ‌‌ ಹಾನಿಗೊಳಗಾದ ಘಟನೆ ‌ನಡೆದಿದೆ. ಕುಂದಾಪುರ ತಾಲೂಕಿನ ಕಂಚಗೋಡಿನ ಹೊಸಪೇಟೆ ನಿವಾಸಿಯಾದ ನಾಗ ಖಾರ್ವಿಯವರಿಗೆ ಸೇರಿದ ಯಕ್ಷೇಶ್ವರಿ ಅನುಗ್ರಹ ದೋಣಿಯು ಗಾಳಿ ಮಳೆಗೆ ಸಿಲುಕಿ‌‌  ದೋಣಿ ಮುಳುಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂಜಿನ್

ಕಾರ್ಮಿಕರ ಬೆವರಿನ ಹಣ ಲೂಟಿ ಮಾಡಲು ಬಿಡೆವು: ಸುರೇಶ್ ಕಲ್ಲಾಗರ್

ಕುಂದಾಪುರ: ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿ ಆರೊಂಭಗೊಂಡ ದಿನದಿಂದಲೂ ಯಾವ ಸರ್ಕಾವೂ ಕಟ್ಟಡ ಕಾರ್ಮಿಕರ ಹಣದ ಮೇಲೆ ಕಣ್ಣು ಹಾಕಿಲ್ಲ. ಆದರೆ ಇದೀಗ ಆಡಳಿತಕ್ಕೆ ಬಂದಿರುವ ಬಿಜೆಪಿ ಸರ್ಕಾರ ಕಟ್ಟಡ ಕಾರ್ಮಿಕರ ಹಣವನ್ನು ಲೂಟಿ ಮಾಡಲು ಮುಂದಾಗಿದೆ. ಬರೋಬ್ಬರಿ ಎರಡು ಸಾವಿರದ ಅರವತ್ತಾರು ಕೋಟಿ ರೂ. ಹಣವನ್ನು ವಿವಿಧ ಯೋಜನೆಗಳಿಗೆ ಮಂಜೂರು ಮಾಡಲು ತಯಾರಿ ನಡೆಸುತ್ತಿದೆ. ಕಾರ್ಮಿಕರ ಬೆವರಿನ ಹಣ ಲೂಟಿ ಮಾಡಲು ನಾವು ಬಿಡುವುದಿಲ್ಲ ಎಂದು ತಾಲೂಕು ಕಟ್ಟಡ ಮತ್ತು ಇತರೆ

ಅಧಿಕಾರಿಗಳು ಲಂಚದ ಪ್ರವೃತ್ತಿಯಿಂದ‌ ಹೊರಬರಬೇಕು: ಸಂಸದ ಬಿವೈ ರಾಘವೇಂದ್ರ

ಕುಂದಾಪುರ:  ಬೈಂದೂರು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ದಾಖಲೆ ಮೊತ್ತದ ಅನುದಾನ ಬಿಡುಗಡೆಯಾಗುತ್ತಿದೆ. ಆದರೆ ಇಲಾಖಾಧಿಕಾರಿಗಳ ಕೆಲಸದ ವೇಗ ನಿರೀಕ್ಷಿತ ಮಟ್ಟದಲ್ಲಿ ಇರದ ಕಾರಣ ಅನುಷ್ಠಾನ ಕುಂಠಿತವಾಗುತ್ತಿದೆ. ಕಂದಾಯ ಇಲಾಖೆಯಲ್ಲಿ ಹಣ ನೀಡದೆ ಕೆಲಸ ಆಗುವುದಿಲ್ಲ. ಅಧಿಕಾರಿಗಳು ಈ ಪ್ರವೃತ್ತಿಯಿಂದ ಹೊರಬರಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಬೈಂದೂರಿನಲ್ಲಿ ಬುಧವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ