ದಿನಾಂಕ 20..10..2022ರಂದು ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ನಡೆದ ನಗೆ ಹಬ್ಬ ,ಸಾಂಸ್ಕೃತಿಕ ಕರ್ಯಕ್ರಮ , ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ನಾಡಿನ ಮಹಿಳಾ ಸಾಧಕರಿಗೆ ನೀಡುವ ಕೆಂಪೇಗೌಡರ ತಾಯಿ ಕೆಂಪಮ್ಮ ನವರ ಹೆಸರಿನಲ್ಲಿ ನೀಡುವ ಕೆಂಪಮ್ಮ ರಾಜ್ಯ ಪ್ರಶಸ್ತಿ ಶಾಂತಾ ಪುತ್ತೂರು ರವರಿಗೆ ಶಿಕ್ಷಣ ಹಾಗೂ ಸಾಹಿತ್ಯ ಸೇವೆಗಾಗಿ ಲಭಿಸಿದೆ.ಶಾಂತಾ
ಎಡ್ ವಿದೌಟ್ ರಿಲೀಜನ್ ಆಂಡ್ ಟ್ರಸ್ಟ್( ರಿ), ಮತ್ತು ದಕ್ಷಿಣ ಕನ್ನಡ ವಿಚಾರವಾದಿಗಳ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಇಂದು 25-10-2022 ಮಂಗಳೂರು ನಗರದ ಲೇಡಿಹಿಲ್ ಬಳಿ ಸಾಮೂಹಿಕವಾಗಿ ಸೂರ್ಯಗ್ರಹಣವನ್ನು ವೀಕ್ಷಿಸಲಾಯಿತು. ಗ್ರಹಣದ ಸಮಯ ಆಹಾರ ಸೇವನೆ ಮಾಡುವುದರಿಂದ ಮನುಷ್ಯನ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂಬ ಮೂಢನಂಬಿಕೆಯ ವಿರುದ್ಧ ವೈಜ್ಞಾನಿಕ ಮನೋಭಾವನೆ ಬೆಳೆಸುವ ಸಲುವಾಗಿ ವಿಚಾರವಾದಿ ವೇದಿಕೆಯ ಕಾರ್ಯಕರ್ತರು ಸಾರ್ವಜನಿಕವಾಗಿ ಆಹಾರಗಳನ್ನು ಸೇವಿಸಿ
ದಕ್ಷಿಣ ಕನ್ನಡ ಜಿಲ್ಲಾ ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಗೂಡುದೀಪ ಸಂಗಮ – ದೀಪಾವಳಿ ಸಂಭ್ರಮ ಎನ್ನುವ ಹೆಸರಿನಲ್ಲಿ ಗೂಡುದೀಪ ಸ್ಪರ್ಧೆಯನ್ನು ಅ.29ರಂದು ಕುತ್ತಾರಿನ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾದ ಜೀವನ್ ಕುಮಾರ್ ತೊಕ್ಕೊಟ್ಟು ಹೇಳಿದ್ರು. ಈ ಕುರಿತು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ವಿವಿಧ ಸೇವಾ ಚಟುವಟಿಕೆಗಳು, ಪರಿಸರ ಸಂರಕ್ಷಣೆಗಾಗಿ
ಬೆಂಗಳೂರಿನ ಖ್ಯಾತ ಮೊಡೆಲ್ ಹಾಗೂ ಮಹಿಳಾ ಉದ್ಯಮಿ ಶ್ವೇತಾ ಮೌರ್ಯ ಅವರು ಸಿಂಗಾಪುರದಲ್ಲಿ ನಡೆಯುತ್ತಿರುವ ಮಿಸೆಸ್ ವರ್ಲ್ಡ್ ವೈಡ್ 2022 ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. 35 ದೇಶಗಳ ಸ್ಪರ್ಧಿಗಳು ಈ ಸ್ಪರ್ಧೆಯಲ್ಲಿ ಭಾಗಹಿಸುತ್ತಿದ್ದಾರೆ. ಬುಧವಾರದಂದು ಮೊದಲ ಸುತ್ತಿನ ಸ್ಪರ್ಧೆ ಆರಂಭಗೊಳ್ಳಲಿದ್ದು, ಅಕ್ಟೋಬರ್ 30 ರಂದು ಅಂತಿಮ ಸುತ್ತಿನ ಸ್ಪರ್ಧೆ ನಡೆಯಲಿದೆ. ಭಾರತದ ಪ್ರಮುಖ ನಗರಗಳಲ್ಲಿ ನಡೆಯುವ ಸಾಮಾಜಿಕ ಕಾಳಜಿಯ ಮ್ಯಾರಾಥಾನ್
ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಆಶ್ರಯ, ಮಂಗಳೂರು ತಾಲೂಕು ವಾಲಿಬಾಲ್ ಸಂಸ್ಥೆ ಇವರ ಸಹಯೋಗದೊಂದಿಗೆ, ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಬಾಲಕಿ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟದ ಜಿಲ್ಲಾ ಚಾಂಪಿಯನ್ ಶಿಪ್ ಅ.29ರಂದು ನಗರದ ಮಂಗಳಾ ಸ್ಟೇಡಿಯಂ ವಾಲಿಬಾಲ್ ಅಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಬಿ.ಎಸ್. ಸತೀಶ್ ಕುಮಾರ್ ಹೇಳಿದರು. ಈ ಕುರಿತು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಪುತ್ತೂರು: ಸುಮಾರು ರೂ. 30ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಚೆನ್ನಾವರ ಮುಹಿಯುದ್ದಿನ್ ಜುಮಾ ಮಸೀದಿಯ ಖಿದ್ಮತುಲ್ ಇಸ್ಮಾಂ ಜಮಾಅತ್ ಕಮಿಟಿಗೊಳಪಟ್ಟ ಸಿರಾಜುಲ್ ಉಲೂಂ ಮದ್ರಸದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಅ. 27ರಂದು ನಡೆಯಲಿದೆ ಎಂದು ಮಸೀದಿ ಕಮಿಟಿ ಅಧ್ಯಕ್ಷ ಶಾಫಿ ಚೆನ್ನಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಪುತ್ತೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನೂತನ ಮದ್ರಸ ಕಟ್ಟಡವನ್ನು ಸಯ್ಯದ್ ಬರ್ರುಸ್ಸಾದಾತ್ ಇಬ್ರಾಹಿಂ
ಇತ್ತೀಚೆಗೆ ಪುತ್ತೂರಿನ ಕಾಣಿಯೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯ ಸೇರಿದ ಇಬ್ಬರು ವ್ಯಾಪಾರಕ್ಕೆ ಹೋದಾಗ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ವಿವಿಧ ಕ್ಷೇತ್ರದಲ್ಲಿ ಕಾನೂನಿನ ಸಂಪರ್ಣ ವಿಫಲತೆಯನ್ನು ನಾನು ಖಂಡಿಸುತ್ತೇನೆ. ಯುವಕರು ತಮ್ಮ ಹೊಟ್ಟೆಪಾಡಿಗಾಗಿ ಹಳ್ಳಿಗೆ ಹೋಗಿ ವ್ಯಾಪಾರ ಮಾಡುತ್ತಿದ್ದಾರೆ.
ದೀಪವು ಮನೆ ಮತ್ತು ಬದುಕನ್ನು ಬೆಳಗುತ್ತದೆ. ದೀಪಾವಳಿಯಲ್ಲಿ ಅಗ್ನಿಗೆ ವಿಶೇಷ ಸ್ಥಾನವಿದ್ದು, ಪಂಚಭೂತಗಳಲ್ಲಿ ಒಂದಾಗಿರುವ ಅಗ್ನಿಯೂ ಕೆಟ್ಟದನ್ನು ಭಸ್ಮಗೊಳಿಸಿ, ಸುಂದರ ಜೀವನ ರೂಪಿಸಲು ಸಹಕಾರಿ ಎಂದು ಮಂಗಳೂರು ವಿಭಾಗ ಕಾರ್ಯವಾಹ ವಾದಿರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು ಅವರು ಭಾನುವಾರ ಸಂಜೆ ರಾಷ್ಟಿ್ಯ ಸ್ವಯಂ ಸೇವಕ ಸಂಘದ ವತಿಯಿಂದ ಕಂದಾವರ ಪ್ರಿಯಾಂಕ ನಗರದ ಸೇವಾ ಬಸ್ತಿಯ ನಾಗರಿಕರಿಗೆ ದೀಪಾವಳಿ ಹಿಂದಿನ ದಿನದ ನೀರು ತುಂಬಿಸುವ ಕಾರ್ಯಕ್ರಮಕ್ಕೆ ದೇವಸ್ಥಾನದ
ಮೂಡುಬಿದಿರೆ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಮಹಿಳಾ ಘಟಕ ಶಿರ್ತಾಡಿ ಇವುಗಳ ಆಶ್ರಯದಲ್ಲಿ ಬ್ರಹ್ಮ ಶ್ರೀ ನಾರಾಯಣಗುರುಗಳ 168ನೇ ಗುರುಜಯಂತಿ ಆಚರಣಿಯ ಪ್ರಯುಕ್ತ 25ನೇ ವರ್ಷದ ಗುರುಪೂಜೆ ಮತ್ತು ಬೃಹತ್ ಶೋಭಾಯಾತ್ರೆಯು ಭಾನುವಾರ ಶಿರ್ತಾಡಿಯಲ್ಲಿ ನಡೆಯಿತು. ಗುರುಪೂಜೆಯ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಇಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ
ವೃದ್ಧರೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯವಾಗಿ ಆಸ್ಪತ್ರೆಗೆ ಸೇರಿದ್ಧ ಅವರು ಚಿಕಿತ್ಸೆ ಪಲಕಾರಿಯಾಗದೆ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ಎಂಬಲ್ಲಿ ನಡೆದಿದೆ.ಉಚ್ಚಿಲ ನಿವಾಸಿ ನಾರಾಯಣ ಪೂಜಾರಿ(82) ಮೃತ ದುರ್ಧೈವಿ ಆಗಿದ್ದು, ಶುಕ್ರವಾರ ಸಂಜೆ ರಸ್ತೆ ದಾಟುತ್ತಿರುವಾಗ ಕೇರಳಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ನಾರಾಯಣ ಪೂಜಾರಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಲಕಾರಿಯಾಗಿದೆ




























