ಕಾಸರಗೋಡು : ಕಾಸರಗೋಡು ಲೋಕ ಸಭಾ ಕ್ಷೇತ್ರದಲ್ಲಿ ಒಂದು ತಿಂಗಳ ಹಿಂದೆಯೇ ಪ್ರಚರಣಾ ರಂಗಕ್ಕಿಳಿದ ಸಿಪಿಎಂ ಅಭ್ಯರ್ಥಿ ಯ ಬೆನ್ನಲ್ಲೇ ಇದೀಗ ಬಿಜೆಪಿ ಯ ಮಹಿಳಾ ಅಭ್ಯರ್ಥಿ ಎಂ ಎಲ್ ಅಶ್ವಿನಿಯ ಅನಿರೀಕ್ಷಿತ ಎಂಟ್ರಿ.ಅಭ್ಯರ್ಥಿ ಯಾರೆಂದು ಈ ತನಕ ಘೋಷಣೆ ಆಗದಿದ್ದರೂ ಯು ಡಿ ಎಫ್ ಅಭ್ಯರ್ಥಿ ನಾನೇ ಎಂಬ ಸ್ವಯಂ ಘೋಷಣೆಯೊಂದಿಗೆ ಸದ್ರಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕೂಡಾ
ಮಂಜೇಶ್ವರದ ರಾಗಂ ಜಂಕ್ಷನಿನಲ್ಲಿ ರಾ.ಹೆದ್ದಾರಿ ದಾಟಲು ಸುರಕ್ಷಿತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದೆ. ಮಾಡು ಇಲ್ಲವೇ ಮಡಿ ಎಂಬ ಧ್ಯೇಯದಲ್ಲಿ ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವ ಭಿತ್ತಿ ಪತ್ರ ಎಲ್ಲೆಡೆ ರಾರಾಜಿಸುತ್ತಿರುವುದು ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದೆ. ಹೆದ್ದಾರಿ ದಾಟಲು ಯಾವುದಾದರೂ ಪರ್ಯಾಯ ವ್ಯವಸ್ಥೆ
ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ಶ್ರೀ ಗಾಯತ್ರೀ ದೇವಿ ಹಾಗೂ ಭಗವಾನ್ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮವು ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಶ್ರೀಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕರಾದ ಬ್ರಹ್ಮಶ್ರೀ ಕಮಲಾದೇವೀ ಪ್ರಸಾದ ಆಸ್ರಣ್ಣರವರ ಆಚಾರ್ಯತ್ವದಲ್ಲಿ ದಿ. 22.02.2024 ಗುರುವಾರದಂದು, ಚಂಡಿಕಾ ಹೋಮ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ
ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಮತ್ತು ಫೋಟೋಗ್ರಾಫರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುವ ಕುರಿತು ಕಣಿಪುರ ಶ್ರೀ ಗೋಪಾಲ ಕೃಷ್ಣ ದೇವರು ಶ್ರೀ ಮಹಾಗಣಪತಿ ದೇವರು ಶ್ರೀ ವನ ಶಾಸ್ತಾರ ದೇವರ ನವೀಕರಣ ಪುನಃ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಪುನಃ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೆ ತಾರೀಕು 16/02/2024 ದಿಂದ ತಾರೀಕು 29/02/2024 ಗುರುವಾರ ವರೆಗೆ ನಡೆಯಲಿದ್ದು ಈ ಸಂದರ್ಭದಲ್ಲಿ ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಮತ್ತು ಫೋಟೋಗ್ರಾಫರ್ ಹಾಗೂ ಸಾಮಾಜಿಕ
ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ. ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ ಜೀವನದಿಂದಲ್ಲೇ ಸಂಘದ ಸ್ವಯಂಸೇವಕರು, ಕಾರ್ಯಕರ್ತರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿಯ ನಂತರ
ಗೆಳೆಯರ ಬಳಗದಿಂದ ದಡ್ಡಂಗಡಿ ಪ್ರಣಾಮ್ ಭಂಡಾರಿ ಸ್ಮರಣಾರ್ಥ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಜ.28ರಂದು ಬಾಳಿಯೂರು ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಬೆಳಿಗ್ಗೆ 9.30 ರಿಂದ 1 ಗಂಟೆಯವರೆಗೆ ನಡೆಯಲಿದೆ, ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ, ಆರೋಗ್ಯ ತಪಾಸಣೆ, ಗಂಟಲು, ಕಿವಿ,
ಮಂಜೇಶ್ವರದ ಶ್ರೀಮತ್ ಅನಂತೇಶ್ವರ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಕುಮಾರಿ ಅಪರ್ಣಾ .ಪಿ ಅವರು ಕೊಲ್ಲಂನಲ್ಲಿ ಜರುಗಿದ ಕೇರಳ ಶಾಲಾ ಕಲೋತ್ಸವದಲ್ಲಿ ಕಥಕ್ಕಳಿ ಸಂಗೀತ ಹುಡುಗಿಯರ ವಿಭಾಗದಲ್ಲಿ, ಇಂಗ್ಲೀಷ್ ಕಥಾರಚನೆಯಲ್ಲಿ ಎ ಗ್ರೇಡ್ ನೊಂದಿಗೆ ಶಾಲೆಗೆ ಹಾಗೂ ಕಾಸರಗೋಡು ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾಳೆ. ಸತತ ಪ್ರಯತ್ನ, ಕಲಿಯಬೇಕೆಂಬ ಹಠ, ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮಲಯಾಳಂ ಕಥಕ್ಕಳಿ ಸಂಗೀತವನ್ನು ನಿರರ್ಗಳವಾಗಿ ಹಾಡಿ
: ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ (MLA AKM Ashraf) ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಒಂದು ವರ್ಷ ಸಜೆ ವಿಧಿಸಿದೆ.2015ರಲ್ಲಿ ನವೆಂಬರ್ 25 ರಂದು ಮಂಜೇಶ್ವರ ಬ್ಲಾಕ್ ಪಂಚಾಯತ್ ಕಾನ್ಪರೆನ್ಸ್ ಹಾಲ್ನಲ್ಲಿ ಚುನಾವಣೆ ಕುರಿತು ಹಿಯರಿಂಗ್ ನಡೆಯುತ್ತಿದ್ದ ಸಂದರ್ಭದಲ್ಲಿ ಮತದಾರನೋರ್ವನ ಅರ್ಜಿಯಲ್ಲಿ ಲೋಪ ಇರುವ ಕಾರಣ ಬದಿಗಿರಿಸಿದ್ದರು. ಇದರಿಂದ ಕೋಪಗೊಂಡ ಕೆಎಂ ಅಶ್ರಫ್ ಮತ್ತಿತರರು ಅಂದಿನ
ಕಾಸರಗೋಡು: ಉಪ್ಪಳ ಮಂಗಲ್ಪಾಡಿ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆ, ಪಂಚಾಯತ್ ಗೆ ಬೀಗ ಹಾಕಿದ ಪಂಚಾಯತ್ ಸದಸ್ಯ ಉಪ್ಪಳದ ಮಂಗಲ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆಯ ಹಿನ್ನೆಲೆಯಲ್ಲಿ ಪಂಚಾಯತ್ ಗೆ ಬೀಗ ಹಾಕಿದ ಘಟನೆ ನಡೆದಿದೆ. ಮಂಗಲ್ಪಾಡಿ ಪಂಚಾಯತ್ ಆಫೀಸ್ನಲ್ಲಿ ಹಲವಾರು ದಿನಗಳಿಂದ ಉದ್ಯೋಗಸ್ತರ ಕೊರತೆ ಇದ್ದು,ಮೊನ್ನೆ ಬಿಜೆಪಿ ಪಂಚಾಯತ್ ಸಮಿತಿ ವತಿಯಿಂದ ಸೂಚನಾ ಪ್ರತಿಭಟನೆ ನಡೆದರು ಈ ಬಗ್ಗೆ ತಮಗೇನು ಗೊಡವೆ ಇಲ್ಲದ ರೀತಿಯಲ್ಲಿ ವರ್ತಿಸುತ್ತಿರುವ