Home Archive by category moodabidre (Page 5)

ಪಾಲಡ್ಕ : ಯುವಕನಿಂದ ಮಹಿಳೆಗೆ ಕತ್ತಿಯಿಂದ ಇರಿತ; ಆರೋಪಿ ಪೊಲೀಸ್ ವಶಕ್ಕೆ

ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಶನಿವಾರ ನಡೆದಿದೆ. ವಣ೯ಬೆಟ್ಟುವಿನ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ ಸಂಜೀವಿ (ನಯನಾ ನಾಯ್ಕ್) ಇರಿತಕ್ಕೊಳಗಾದ ಎಂದು ಮಹಿಳೆ ಎಂದು ಗುರುತಿಸಲಾಗಿದ್ದು ಅವರ ತಲೆ,

ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ವಾಲಿಬಾಲ್ ಆಳ್ವಾಸ್ ಕಾಲೇಜಿಗೆ 17ನೇ ಬಾರಿ ಪ್ರಶಸ್ತಿ

ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆÀದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್‌ಗಳ ಅಂತರದಿAದ ಗೆದ್ದು ಚಾಂಪಿಯನ್ ಪಟ್ಟವನ್ನು

ಮೂಡುಬಿದಿರೆ ಹೆಗ್ಗಡೆ ಮಹಿಳಾ ಸಂಘದ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ, ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಆಯ್ಕೆ

ಮೂಡುಬಿದಿರೆ:ಹೆಗ್ಗಡೆ ಮಹಿಳಾ ಸಂಘ ಮೂಡುಬಿದಿರೆ ವಲಯ ಇದರ ಪ್ರಸಕ್ತ ಸಾಲಿನ ನೂತನ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ ಮತ್ತು ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಅವಿರೋಧ ಆಯ್ಕೆಯಾಗಿದ್ದಾರೆ.

ಗಂಟಾಲ್ ಕಟ್ಟೆಯಲ್ಲಿ ಅನಧಿಕೃತ ಕಸಾಯಿಖಾನೆ : ಪೊಲೀಸರಿಂದ ದಾಳಿ, 50 ಕೆ. ಜಿ ಮಾಂಸ, 2 ಕಾರು ವಶಕ್ಕೆ

ಮೂಡುಬಿದಿರೆ : ಗಂಟಾಲ್ ಕಟ್ಟೆಯಲ್ಲಿ ನಡೆಯುತ್ತಿದ್ದ ಅನಧಿಕೃತ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ ನೇತೃತ್ವದ ತಂಡವು ದಾಳಿ ನಡೆಸಿ ಸುಮಾರು 50 ಕೆ.ಜಿ ದನದ ಮಾಂಸ, ಪರಿಕರಗಳು ಹಾಗೂ 2 ಕಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೋಮವಾರ ನಡೆದಿದೆ. ಗಂಟಾಲ್ ಕಟ್ಟೆಯ ಜಲೀಲ್ ಎಂಬವನ ಮನೆಯ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು

ಆಳ್ವಾಸ್ ಫಾರ್ಮಾಸಿ: ಅಭಿವಿನ್ಯಾಸ ಕಾಯ೯ಕ್ರಮ

ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ವಿಶ್ವದಲ್ಲಿ ಔಷಧೋದ್ಯಮ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಔಷಧ ತಯಾರಿಕೆ, ಗುಣಮಟ್ಟದ

ಮೂಡುಬಿದಿರೆ : ಕೊಣಾಜೆಕಲ್ಲಿಗೆ ಟ್ರಕ್ಕಿಂಗ್ ಗೆ ಬಂದ ಯುವಕ ಹೃದಯಾಘಾತಕ್ಕೆ ಬಲಿ

ಮೂಡುಬಿದಿರೆ : ಕೊಣಾಜೆಕಲ್ಲಿಗೆ ಟ್ರಕ್ಕಿಂಗ್ ಗೆ ಬಂದ ಯುವಕನೊಬ್ಬ ಹೃದಯಾಘಾತವಾಗಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.ಪುತ್ತೂರು ಬೆಟ್ಟಂಪ್ಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಮನೋಜ್ ಎನ್. (25ವ) ಹೃದಯಾಘಾತಕ್ಕೆ ಬಲಿಯಾದ ಯುವಕ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಡುಬಿದಿರೆ: ಕ್ರಾಸ್‌ಕಂಟ್ರಿ – ಆಳ್ವಾಸ್ ಸತತ 21ನೇ ವರ್ಷಗಳಿಂದ ಚಾಂಪಿಯನ್

ಮೂಡುಬಿದಿರೆ: ಬ್ರಹ್ಮಾವರದ ಎಸ್‌ಎಮ್‌ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿ ಪಡೆದಿದೆ.ಪುರುಷರ ವಿಭಾಗದಲ್ಲಿ ಮೊದಲ 5 ಸ್ಥಾನಗಳನ್ನು ಆಳ್ವಾಸ್ ಕಾಲೇಜಿನ ಓಟಗಾರರು ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಮೋಹಿತ್ (ಪ್ರಥಮ), ಆದೇಶ್ ಕುಮಾರ್ (ದ್ವಿತೀಯ), ಶುಭಂ(ತೃತೀಯ), ರೋಹಿತ್(4ನೇ

ಮೂಡುಬಿದಿರೆ ;ಪೋನ್ ಕರೆ ಮೂಲಕ ಮಹಿಳೆಗೆ ಕಿರುಕುಳ ತನ್ನದೇ ಸಿಬ್ಬಂದಿ ವಿರುದ್ಧ ಕೇಸು ದಾಖಲಿಸಿದ ಮೂಡುಬಿದಿರೆ ಇನ್ಸ್ ಪೆಕ್ಟರ್

ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೋವ೯ರ ಮೊಬೈಲ್ ನಂಬರ್ ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ಧ ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ. ಜಿ. ಅವರು ಕೇಸು ದಾಖಲಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಶಾಂತಪ್ಪ ಪ್ರಕರಣ ಆರೋಪಿ. ಈತ ಮೂಡುಬಿದಿರೆ ಠಾಣೆಯಲ್ಲಿ ಕಳೆದ ಕೆಲ ಸಮಯಗಳಿಂದ ಕರ್ತವ್ಯ ಪೊಲೀಸ್ ಸಿಬ್ಬಂದಿಯಾಗಿ ಕತ೯ವ್ಯ ನಿವ೯ಹಿಸುತ್ತಿದ್ದ.ಕೆಲವು ದಿನಗಳ ಹಿಂದೆ ಈ ಭಾಗದ ಮಹಿಳೆಯೊಬ್ಬರು ಯಾವುದೋ ಪ್ರಕರಣವೊಂದಕ್ಕೆ ಸಂಬಂಧಿಸಿ

ಮೂಡುಬಿದಿರೆ:18 ಮಂದಿ ಸಾಧಕರಿಗೆ ಸಮಾಜಮಂದಿರ ಗೌರವ

ವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ 18 ಮಂದಿ ಸಾಧಕರನ್ನು ಸಮಾಜ ಮಂದಿರ ಪುರಸ್ಕಾರದೊಂದಿಗೆ ಗೌರವಿಸಲಾಗುವುದೆಂದು ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ತಿಳಿಸಿದ್ದಾರೆ.ಐದು ದಿನಗಳ ಉತ್ಸವದ ಅವಧಿಯಲ್ಲಿ ಹಂತ ಹಂತವಾಗಿ ಸಾಧಕರನ್ನು ಗೌರವಿಸಲಾಗುವುದು. ಸಮಾಜ ಮಂದಿರ ಗೌರವ 2025 ಕ್ಕೆ ಆಯ್ಕೆಯಾಗಿದ್ದಾರೆ. ವೇ.ಮೂ ಎಂ. ಹರೀಶ್ ಭಟ್ (ಧಾರ್ಮಿಕ), ಆಡ್ಲಿನ್ ಜೆ. ಜತನ್ನ (ಶಿಕ್ಷಣ), ಗೌರಾ ಗೋವರ್ಧನ್ (ಶಿಕ್ಷಣ, ಸಾಹಿತ್ಯ), ಹರ್ಷವರ್ಧನ್ ಪಡಿವಾಳ್ (ಆಹಾರ ಉದ್ಯಮ)

ಮೂಡುಬಿದಿರೆ ; ಸಾವ೯ಜನಿಕ ಶ್ರೀ ಗಣೇಶೋತ್ಸವ ಹಸಿರು ಹೊರೆಕಾಣಿಕೆ ಮೆರವಣಿಗೆ

ಇಲ್ಲಿನ ಸಾವ೯ಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ ಆ.27ರಿಂದ 31ರವರೆಗೆ ಸಮಾಜ ಮಂದಿರದಲ್ಲಿ ನಡೆಯಲಿರುವ 62ನೇ ವರ್ಷದ ಗಣೇಶೋತ್ಸವಕ್ಕೆ ಪೂರಕವಾಗಿ ಮಂಗಳವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಎಂಸಿಎಸ್ ಸೊಸೈಟಿ ಎದುರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.ಟ್ರಸ್ಟ್ ನ ಅಧ್ಯಕ್ಷ ನಾರಾಯಣ ಪಿ.ಎಂ., ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಸುರೇಶ್ ಪ್ರಭು, ಟ್ರಸ್ಟ್ ನ ಪ್ರಧಾನ ಕಾಯ೯ದಶಿ೯ ಸುದಶ೯ನ್