ಶ್ರೀ ಪಲಿಮಾರು ಮೂಲ ಮಠದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯ 18 – 40ರ ವಯೋಮಿತಿಯ ತ್ರಮತಸ್ಥ ಬ್ರಾಹ್ಮಣ ಯುವಕರ ಸಮಾವೇಶ ವಿಹಿತಮ್ ಮೇ 18 ಶನಿವಾರದಂದು ನಡೆಯಲಿದೆ ಎಂದು ಪಲಿಮಾರು ಮಠಾಧೀಶ ಶ್ರೀವಿದ್ಯಾದೀಶ ತೀರ್ಥರು ಹೇಳಿದ್ದಾರೆ. ಪಲಿಮಾರು ಮಠದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾತಃ ಸ್ಮರಣೀಯರಾದ ಶ್ರೀ
ಪಡುಬಿದ್ರಿ: ಕಳೆದ ಎರಡು ದಿನದ ಹಿಂದೆ ನಾಪತ್ತೆಯಾದ ಪಲಿಮಾರು ಗುಂಡಿ ನಿವಾಸಿ ವ್ಯಕ್ತಿಯ ಶವ ಪಕ್ಕದ ಕೆಸರು ತುಂಬಿದ ಹಳ್ಳವೊಂದರಲ್ಲಿ ಪತ್ತೆಯಾಗಿದೆ.ಮೃತರು ಪಲಿಮಾರು ಗುಂಡಿ ನಿವಾಸಿ, ಮುಂಬೈ ಮಹಾ ನಗರದಲ್ಲಿ ವಾಸವಿದ್ದ ಆನಂದ ಪೂಜಾರಿ(51), ಊರಿನ ಮನೆಯಲ್ಲಿ ಕುಟುಂಬದ ದೈವದ ಧಾರ್ಮಿಕ ಕಾರ್ಯಕ್ರಮವಿದ್ದು ಅದರಲ್ಲಿ ಪಾಲ್ಗೊಂಡಿದ್ದ ಇವರು ರಾತ್ರಿ ಸುಮಾರು ಹನ್ನೆರಡರ ಸುಮಾರಿಗೆ ಪಕ್ಕದ ಮನೆಯ ಅಂಗಳದಲ್ಲಿ ನಡೆದು ಹೋಗುವುದನ್ನು ಆ ಮನೆ ಮಂದಿ ನೋಡಿದ್ದರು. ಅಲ್ಲಿಂದ
ಎರ್ಮಾಳಿನ ಬಾರೊಂದರ ಹಿಂಬದಿಯಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕೋಳಿಯಂಕಕ್ಕೆ ದಾಳಿ ಮಾಡಿದ ಪೊಲೀಸರು ಒಂಭತ್ತು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಪೊಲೀಸ್ ವಶದಲ್ಲಿರುವವರು ಸುರೇಂದ್ರ ಬೆಳಪು, ಮಹೇಶ್ ಕುರ್ಕಾಲು, ಗಣೇಶ್ ಶೆಟ್ಟಿ ಎಲ್ಲೂರು, ಉಮೇಶ್ ಪೂಜಾರಿ ಕಾಪು, ಶ್ರೀಕಾಂತ್ ಉಚ್ಚಿಲ, ಸಂತೋಷ್ ಉಚ್ಚಿಲ, ರಾಜೇಂದ್ರ ಎಲ್ಲೂರು, ರಾಮ ತೆಂಕ ಎರ್ಮಾಳು, ಯೋಗೀಶ್ ಶೆಟ್ಟಿ ಕುಂಜೂರು.ಎರ್ಮಾಳಿನ ಬಾರ್ ಹಿಂಭಾಗದಲ್ಲಿ ಅಕ್ರಮ ಕೋಳಿಯಂಕ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ
ದೇವಳದ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರ ಇಕ್ಕೆಲಲ್ಲಿ ಬೃಹತ್ತಾಗಿ ಕಾಣಿಸಿಕೊಂಡ ಬೆಂಕಿ ಕೆಲ ಹೊತ್ತು ಆತಂಕ ಸೃಷ್ಟಿಸಿದೆ. ಜಿಯೋ ನೆಟ್ವರ್ಕ್ ಕಂಪನಿಯು ಬಳಕೆ ಮಾಡಿ ಹೆಚ್ಚುವರಿಯಾದ ಕೇಬಲ್ ಬಂಡಲನ್ನು ರಸ್ತೆಯಂಚಿನಲ್ಲಿ ಉಳಿಸಿ ಹೋಗಿದ್ದು, ಆ ಕೇಬಲ್ ರಾಶಿಗೆ ಬೆಂಕಿ ತಗುಲಿ ಪರಿಸವೆಲ್ಲಾ ಪಸರಿಸಿದೆ. ತೀರ ಸಮೀಪದಲ್ಲೇ ವಾಸದ ಮನೆಗಳಿದ್ದು ಆತಂಕ ಸೃಷ್ಟಿಯಾಗಿದ್ದು, ಪಡುಬಿದ್ರಿ ಪೊಲೀಸರು, ಗ್ರಾ.ಪಂ. ಪ್ರತಿನಿಧಿಗಳು, ಹೆಜಮಾಡಿ ಟೋಲ್ ಸಿಬ್ಬಂದಿಗಳು ಹಾಗೂ
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ
ಪಡುಬಿದ್ರಿ ಸಮೀಪದ ಯುಪಿಸಿಎಲ್ ಕಂಪನಿಯಿಂದ ಕೇರಳಕ್ಕೆ ವಿದ್ಯುತ್ ಸರಬರಾಜು ನಡೆಸಲು ಟವರ್ ನಿರ್ಮಾಣಕ್ಕೆ ಜಿಲ್ಲಾಡಳಿತದ ನಿರ್ದೇಶನದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಆಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಸ್ಥರು ವಾಪಾಸು ಕಳುಹಿಸಿದ ಘಟನೆ ಇನ್ನಾ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಮಾತನಾಡಿದ ಇನ್ನಾ ಗ್ರಾ.ಪಂ.ಸದಸ್ಯ ದೀಪಕ್ ಕೋಟ್ಯಾನ್, ಜನರ ವಿರೋಧದ ನಡುವೆಯೂ ಜನರಿಗೆ ಯಾವುದೇ ಮಾಹಿತಿ ನೀಡದೆ ಇನ್ನಾ ಪ್ರೌಢಶಾಲಾ ಬಳಿ ಯುಪಿಸಿಎಲ್ ನಿಂದ ಕೇರಳಕ್ಕೆ ವಿದ್ಯುತ್
ದೇವರ ಸೃಷ್ಠಿಯಲ್ಲಿ ಎಲ್ಲಾರಿಗೂ ಬದುಕುವ ಸಮಾನ ಅವಕಾಶವಿದ್ದು, ಮೇಲು ಕೀಳು ಎಂಬ ಬೇಧ ಸಲ್ಲದು, ಅದರಲ್ಲೂ ವಿಶೇಷ ಮಕ್ಕಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಮೂಲಕ ಅವರನ್ನು ಸಂತೋಷವಾಗಿಡುವ ಜವಾಬ್ದಾರಿ ನಮ್ಮದಾಗಿದೆ ಎಂಬುದಾಗಿ ಪಡುಬಿದ್ರಿ ಇನ್ನರ್ ವೀಲ್ಹ್ ಕ್ಲಬ್ ಅಧ್ಯಕ್ಷೆ ನಮೃತ ಮಹೇಶ್ ಅಭಿಪ್ರಾಯಪಟ್ಟರು. ಅವರು ಉಡುಪಿಯ ಸಾಲ್ಮರ ಉಪ್ಪೂರು ಔದ್ಧಿಕ ದಿವಾಂಗರ ವಸತಿ ಕೇಂದ್ರಕ್ಕೆ ತಮ್ಮ ತಂಡದೊಂದಿಗೆ ಭೇಟಿ ಮಾಡಿ ಅಲ್ಲಿನ ಸಾಧಕ ಭಾದಕಗಳನ್ನು ಅರಿತು ಬಳಿಕ ನಡೆದ ಸರಳ
ತಡೆ ರಹಿತ ರೈಲು ನಿಲುಗಡೆ, ಅಂಡರ್ ಪಾಸ್ ವ್ಯವಸ್ಥೆ, ಪಕ್ಕದ ರಸ್ತೆ ದುರಸ್ಥಿ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಪ್ರತಿಭಟನಾಗಾರರು ತಪ್ಪಿದ್ದಲ್ಲಿ ರೈಲು ರೋಕೋ ನಡೆಸುವ ಎಚ್ಚರಿಕೆ ನೀಡಿದ್ದಾರೆ.ಬೆಳಪು ಗ್ರಾ.ಪಂ.ನ ಮಾಜಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ರಾಹ ಸಹಿತ ಸುತ್ತಲ ಗ್ರಾಮದ ನೂರಾರು ಮಂದಿ ಪುರುಷರು ಮಹಿಳೆಯರು ಪಾಲ್ಗೊಂಡಿದ್ದರು. ಈ ಸಂದರ್ಭ ಮಾತನಾಡಿದ ಬೆಳಪು ದೇವಿಪ್ರಸಾದ್
ಉಚ್ಚಿಲ ಪೇಟೆಯ ಹೃದಯ ಭಾಗದಲ್ಲಿರುವ ಬಹು ಮಹಡಿ ವಸತಿ ಸಂಕೀರ್ಣದಲ್ಲಿ ಬ್ಲೂ÷್ಯ ವೇವ್ಸ್ ನಲ್ಲಿ ಅವ್ಯವಸ್ಥೆ ತಾಂಡವಾಡುತ್ತಿದ್ದು ಅಲ್ಲಿಯ ನಿವಾಸಿಗಳು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕಟ್ಟಡಕ್ಕೆ ಸಂಬAಧಿಸಿ ಐವರು ಪಾಲುದಾರರಿದ್ದರೂ ಕೂಡ ಇಲ್ಲಿಯ ನಿವಾಸಿಗಳ ಮಾತಿಗೆ ಸ್ಪಂದಿಸುತ್ತಿಲ್ಲ. ಈ ಕಟ್ಟಡದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಟ್ಟಡದ ಸುತ್ತಲೂ ತ್ಯಾಜ್ಯ ರಾಶಿ, ಕುಡಿಯಲು ಯೋಗ್ಯವಲ್ಲದ ನೀರು, ಕಟ್ಟಡದ ನೆಲ ಅಂತಸ್ತಿನ ನೀರಿನ ಪೈಪ್
ಉಚ್ಚಿಲ ರಾಷ್ಟಿçÃಯ ಹೆದ್ದಾರಿ 66ರ ಬಳಿಯ ಅಂಗಡಿಗಳಿಗೆ ನುಗ್ಗಿದ ಕಳ್ಳನೊಬ್ಬ ಶಟರ್ ಬೀಗ ಮುರಿದು, ಹಣವನ್ನು ಕದ್ದೊಯ್ದ ಘಟನೆ ನಡೆದಿದ್ದು, ಕಳವು ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಚ್ಚಿಲದ ಮಹಮ್ಮದ್ ರಫೀಕ್ ರವರ ಸೈಬರ್ ಕೆಫೆ, ಹೋಟೆಲ್ ಸ್ಪೆöÊಸ್, ತವಕ್ಕಲ್ ಬೇಕರಿ ಶಶಿ ಲಂಚ್ ಹೋಮ್ ನ ಬೀಗ ಮುರಿದು ಹಣ ದೋಚಿದ್ದಾನೆ. ಸ್ಕೂಟರಿನಲ್ಲಿ ಬಂದ ಕಳ್ಳ ಶಟರ್ ಮುರಿದು ಒಳಗೆ ಹೋಗಿದ್ದಾನೆ. ಕೇವಲ ಹಣ ಮಾತ್ರ ಕಳ್ಳತನ ಮಾಡಿದ್ದಾನೆ. ಸೈಬರ್ ನಲ್ಲಿ ಲಕ್ಷಾಂತರ