ಪುತ್ತೂರು: ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಪ್ರತೀ ಮತಗಟ್ಟೆಯ ಹೊರಗೆ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮದೇ ಆದ ಬೂತ್ ತೆರೆಯಲು ಅವಕಾಶವಿದ್ದರೂ ಇದಕ್ಕೆ ಕಟ್ಟುನಿಟ್ಟಿನ ನಿಯಮಗಳು ಅನ್ವಯವಾಗುತ್ತವೆ ಎಂದು ಪುತ್ತೂರು ಸಹಾಯಕ ಆಯುಕ್ತರೂ, ಸಹಾಯಕ ಚುನಾವಣಾ ಅಧಿಕಾರಿಗಳೂ ಆಗಿರುವ ಜುಬಿನ್ ಮೊಹಾಪಾತ್ರ ಹೇಳಿದರು.
ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಹೊಟೇಲ್ ಉದ್ಯಮಿಯಾಗಿದ್ದ ಬೆಳ್ಯಪ್ಪ ಗೌಡ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ಪೆರ್ಲಂಪಾಡಿಯ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಬೆಳ್ಯಪ್ಪ ಗೌಡರು ಕಳೆದ 50 ವರ್ಷಗಳಿಂದ ಹೊಟೇಲ್ ಉದ್ಯಮದಲ್ಲಿ ತೊಡಗಿಕೊಂಡಿದ್ದು, ಹಸಿವಿನಿಂದ ಬಂದವರಿಗೆ ಅನ್ನದಾತರಾಗಿದ್ದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಎಪ್ರಿಲ್ 7ರಂದು ನಿಧನರಾಗಿದ್ದರು.
ಪುತ್ತೂರು: ಕೋತಿ ಬೆಣ್ಣೆ ತಿಂದು ಬೆಕ್ಕಿನ ಮುಖಕ್ಕೆ ಒರೆಸಿದ ಹಾಗೆ ತಮ್ಮ ಮುಖ ಉಳಿಸಿಕೊಳ್ಳಲು ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿರುವ ಬಿಜೆಪಿ ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ಆರ್.ಸಿ ನಾರಾಯಣ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ. “ಪದ್ಮರಾಜ್ ಪರಿವಾರ” ವಾಟ್ಸ್ಆಪ್ ಗ್ರೂಪ್ ವಿವಾದಕ್ಕೆ ಸಂಬಂಧಪಟ್ಟಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಮಲ ರಾಮಚಂದ್ರ ಮಾತನಾಡಿ ನಾನು
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಇಂದು ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ವೃಷಭ ಲಗ್ನ ಮುಹೂರ್ತದಲ್ಲಿ ಭಕ್ತಾಧಿಗಳ ಜಯಘೋಷದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿಎಸ್ ಭಟ್ ಹಾಗೂ ವಸಂತ ಕೆದಿಲಾಯ ಧ್ವಜಾರೋಹಣ ನೆರವೇರಿಸಿದ್ರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನ ಸಮಿತಿಯ ಅಧಯಕ್ಷರು ಸದಸ್ಯರು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.
ಪುತ್ತೂರು: ನಮ್ಮದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ ಉಂಟಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ದೇಶದಲ್ಲಿ ನಾವು ಪರಸ್ಪರ ಒಗ್ಗಟ್ಟಿನಿಂದ ಇರಬೇಕಿದೆ. ಧರ್ಮದ ಹೆಸರಿನಲ್ಲಿಮಾಡುವ ಕಚ್ಚಾಟವನ್ನು ನಿಲ್ಲಿಸಬೇಕು, ಯುವ ಜನತೆಯ ಕೈಗೆ ಉದ್ಯೋಗ ಕೊಡುವ
ಪುತ್ತೂರಿನ ಸುಬ್ರಮಣ್ಯ ರಸ್ತೆ ಯ ದರ್ಬೆ ಸರ್ಕಲ್ನಲ್ಲಿರುವ ಶ್ರೀ ಮಂಜುನಾಥೇಶ್ವರ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಸಾರ್ವಜನಿಗರಿಗೆ ಒಂದು ಸುವರ್ಣಾವಕಾಶ ಕಲ್ಪಿಸಿದ್ದು, ಗಿಫ್ಟ್ ಸ್ಕೀಂನಲ್ಲಿ ಹೆಸರು ನೊಂದಾಯಿಸಿ ಲಕ್ಕಿ ಡ್ರಾ ಮೂಲಕ ಆಕರ್ಷಕ ಬಹುಮಾನಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಪುತ್ತೂರಿನ ದರ್ಬೆ ಸರ್ಕಲ್ ನ ಪ್ರಶಾಂತ್ ಮಹಲ್ ನಲ್ಲಿರುವ ಶ್ರೀ ಮಂಜುನಾಥೇಶ್ವರ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಎಲ್ಲಾ ಸಾರ್ವಜನಿಗರಿಗೆ ಒಂದು ಸುವರ್ಣಾವಕಾಶ
ಪುತ್ತೂರು : ಏ.9ರಂದು ಪುತ್ತೂರು ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ಸಮಾವೇಶ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸುಲೋಚನ ಬಿಕೆ ಭಟ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ದ.ಕ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಿಕೊಡುವ ಜೊತೆಗೆ ಮಹಿಳಾ ಸಮಾವೇಶ ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಮಹಿಳಾ
ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ(60)ಯವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ ಅವರ ಆರೋಗ್ಯದಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ಏರು ಪೇರು ಉಂಟಾಗಿದ್ದು, ಬಳಿಕ ಕೆಲವೇ ಕ್ಷಣಗಳಲ್ಲಿ ನಿಧನ ಹೊಂದಿರುವುದಾಗಿ ಅವರ ಆಪ್ತ ವಲಯದವರು ತಿಳಿಸಿದ್ದಾರೆ.ನಿನ್ನೆ ರಾ ತ್ರಿಯವರೆಗೂ ಕ್ರಿಯಾಶೀಲರಾಗಿ ವಿವಿಧ ಚಟುವಟಿಕೆಗಳಲ್ಲಿ
ಪುತ್ತೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಭಾರಿ ದೊಡ್ಡ ಪ್ರಮಾಣದಲ್ಲಿ ಮುನ್ನಡೆ ಒದಗಿಸಿಕೊಡುವ ಭರವಸೆಯನ್ನು ಪುತ್ತೂರು ಕ್ಷೇತ್ರದ ಎಲ್ಲಾ ಕಾರ್ಯಕರ್ತರು ನೀಡಿದ್ದಾರೆ. ಈ ಕಾರಣದಿಂದ ಜಿಲ್ಲೆಯಲ್ಲಿ 3 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದೆ ಗೆಲ್ಲುತ್ತೇವೆ. ಮರಳಿ ಪ್ರಧಾನಿ ನರೇಂದ್ರ ಮೋದಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತು ಪ್ರಧಾನಿ
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ