Home Archive by category Lifestyle

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಮೂಡುಬಿದಿರೆ:ಪವರ್ ಫ್ರೆಂಡ್ಸ್, ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಪವರ್ ಫ್ರೆಂಡ್ಸ್ ಬೆದ್ರ ಮಹಿಳಾ ಘಟಕ ಮತ್ತು ಇನ್ನರ್ ವ್ಹೀಲ್ ಕ್ಲಬ್ ಆಫ್ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರಿನ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಕನ್ನಡ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಇನ್ನರ್ ವ್ಹೀಲ್ ಕ್ಲಬ್ ಅದ್ಯಕ್ಷ ಬಿಂದಿಯಾ ಎಸ್.ಶೆಟ್ಟಿ ಅಧ್ಯಕ್ಷತೆ ವಹಿಸಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ನಮಗೆ ಆರೋಗ್ಯ ಮುಖ್ಯವಾಗಿ ಬೇಕು. ಒಂದೊಂದು ಅಂಗವೂ

ಜನಸಂಖ್ಯೆ ತೀವ್ರ ಇಳಿಕೆಯ ಆತಂಕದಲ್ಲಿ ಜಪಾನ್

ನೀವು ಏಕೆ ಮದುವೆ ಆಗುವುದಿಲ್ಲ ಎಂದು ಪ್ರಶ್ನಿಸುತ್ತಿದೆ ಜಪಾನ್ ಸರಕಾರ.ನಿಮ್ಮ ತುಮುಲ ತಿಳಿದರೆ ನಾವು ಕೃತಜ್ಞರು ಎನ್ನುತ್ತ ಜಪಾನ್ ಮಕ್ಕಳು ಮತ್ತು ಕಲ್ಯಾಣ ಸಚಿವೆ ಆಯುಕೋ ಕತೋ ಅವರು ಯುವ ಜನಾಂಗವನ್ನು ಕೇಳುತ್ತ ದೇಶದ ಜನಸಂಖ್ಯೆ ಇಳಿಮುಖವಾಗಿರುವುದಕ್ಕೆ ಪರಿಹಾರ ಹುಡುಕುತ್ತಿದ್ದಾರೆ. ಚಿಲ್ಡ್ರನ್ ಆಂಡ್ ಫ್ಯಾಮಿಲೀಸ್ ಏಜೆನ್ಸಿ ಮೂಲಕ ಜಪಾನ್ ಸರಕಾರವು ಅಲ್ಲಿನ ಯುವ ಜನಾಂಗವು ನಿಮಗೆ ಮದುವೆ ಆಗಲು ಇರುವ ಸಮಸ್ಯೆ ಏನು ಎಂದು ಪ್ರಶ್ನಿಸುತ್ತಿದೆ. ಡೇಟಿಂಗ್, ಮ್ಯಾಚ್

ಮಡಿಕೇರಿ-ಸಂಪಾಜೆ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ, ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275 ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ

ಕಾರ್ಕಳದ ಕ್ರೈಸ್ಟ್‌ಕಿಂಗ್ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ-v4 ನ್ಯೂಸ್ ವಾಹಿನಿಯ ಪತ್ರಕರ್ತ ಖಲೀಲ್ ಅವರಿಗೆ ಸನ್ಮಾನ

ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಹಾಗೂ ಕೃಷಿಬಿಂಬ ಪತ್ರಿಕೆಯ ಸಂಪಾದಕರಾದ ರಾಧಾಕೃಷ್ಣ ತೋಡಿಕಾನ ಅವರು ಆಗಮಿಸಿದ್ದು, ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು “ಪತ್ರಿಕೆ ಹಾಗೂ ಸುದ್ದಿ ಮಾಧ್ಯಮಗಳಿಂದಾಗಿ ಇಂದು ಸಮಾಜದಲ್ಲಿ ಜಾಗೃತಿ ಮೂಡಲು ಸಾಧ್ಯವಾಗಿದೆ. ಪತ್ರಿಕೆಗಳು ಸಮಾಜ, ಆಡಳಿತ ವ್ಯವಸ್ಥೆ

ರಸ್ತೆ ಕಾಮಗಾರಿಗೆ ಸ್ಥಳೀಯರ ಆಗ್ರಹ

ಮುಲ್ಕಿ ತಾಲ್ಲೂಕು ವ್ಯಾಪ್ತಿಯ ಕೆಮ್ರಾಲ್ ಗ್ರಾಮ ಪಂಚಾಯತ್‌ನ ಪಕ್ಷಿಕೆರೆಯಿಂದ ಪಂಜ ಮೂಲಕ ಸುರತ್ಕಲ್ ಸಂಪರ್ಕ ಕಲ್ಪಿಸುವ ಜಿಲ್ಲಾ ಪಂಚಾಯತ್ ರಸ್ತೆ ತೀವ್ರ ಕೆಟ್ಟು ಹೋಗಿದ್ದು ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಈ ರಸ್ತೆಯ ಕೆಮ್ರಾಲ್ ಸಮುದಾಯ ಆರೋಗ್ಯ ಕೇಂದ್ರ ಹಾಗೂ ದಿ.ಶಾಂತರಾಮ ಶೆಟ್ಟಿ ಶಾಲೆಯ ಬಳಿ ತೀವ್ರ ಹದಗೆಟ್ಟಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ಮಳೆ ನೀರು ಹರಿದು ರೋಡ್, ತೋಡಾಗಿ ಪರಿಣಮಿಸಿದ್ದು ಸ್ಥಳೀಯರು ಸಂಬಂಧಪಟ್ಟವರಿಗೆ ಹಿಡಿ ಶಾಪ

ಬೆಂಗಳೂರು ಸಹಿತ ರಾಜ್ಯದಲ್ಲಿ ಹೆಚ್ಚಿದ ಡೆಂಗಿ

ಭಾನುವಾರ 954 ಜನರನ್ನು ಡೆಂಗಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 159 ಮಂದಿ ಡೆಂಗಿ ಹೊಂದಿರುವುದು ದೃಢ ಪಟ್ಟಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ತಿಳಿಸಿದೆ. ಡೆಂಗಿ ಬಾಧಿತರಲ್ಲಿ ಎಲ್ಲ ಪ್ರಾಯದವರೂ ಇದ್ದು ಭಾನುವಾರದ 159 ಪ್ರಕರಣದಲ್ಲಿ 80 ಬೆಂಗಳೂರು ನಗರ ವ್ಯಾಪ್ತಿಯದಾಗಿದೆ. ಸದ್ಯ 301 ಜನರು ಡೆಂಗಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರುಷದ ಒಟ್ಟು ಡೆಂಗಿ ಪ್ರಕರಣ 7,165 ಎಂದು ಆರೋಗ್ಯ ಇಲಾಖೆ ಹೇಳಿದೆ. ಡೆಂಗಿ ಜ್ವರಕ್ಕೆ

ಪುರಿ ಜಗನ್ನಾಥ ರಥೋತ್ಸವ ನೂಕು ನುಗ್ಗಲು

ಪುರಿ ಜಗನ್ನಾಥ ದೇವಾಲಯದ ರಥೋತ್ಸವದಲ್ಲಿ ನೂಕು ನುಗ್ಗಲಿನಲ್ಲಿ ಒಬ್ಬ ಸತ್ತುದರಿಂದ ತೇರು ಎಳೆಯುವುದನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ತೇರು ಎಳೆಯುವ ಸಮಯದಲ್ಲಿ ಹೆಚ್ಚು ಭಕ್ತರು ಸೇರಿದ್ದರು. ರಥ ಎಳೆಯಲು ಮುನ್ನುಗ್ಗಿದ್ದರಿಂದ ನೂಕು ನುಗ್ಗಲು ಉಂಟಾಯಿತು. ಒಬ್ಬ ಉಸಿರು ಕಟ್ಟಿ ಸತ್ತರೆ ಹಲವರು ಕೆಳಕ್ಕೆ ಬಿದ್ದು ಗಾಯಗೊಂಡರು. ಒಬ್ಬಿಬ್ಬರು ಗಂಭೀರ ಎಂದು ತಿಳಿದು ಬಂದಿದೆ. ಭಾನುವಾರ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್

ಜಗತ್ತಿನ ಬಹು ಜನರು ಪ್ರೀತಿಸುವ ಹಣ್ಣು ಪಪ್ಪಾಯಿ

ಜಗತ್ತಿನ ಜನರು ಪ್ರೀತಿಸುವ ಹಣ್ಣುಗಳಲ್ಲಿ ಒಂದಾದ ಪಪ್ಪಾಯಿ ಪ್ರತಿ ವರುಷ ಆರು ಕೋಟಿ ಟನ್ ಉತ್ಪಾದನೆ ಆಗುತ್ತದೆ. ಪಪ್ಪಾಯಿಯ ಬೇಸಾಯ ಮತ್ತು ಮೂಲ ತೆಂಕಣ ಮೆಕ್ಸಿಕೋ ಮತ್ತು ಕೋಸ್ಟಾರಿಕಾ ಆಗಿದೆ. ಪಪ್ಪಾಯಿ ಹೆಸರು ಕೂಡ ಅಲ್ಲಿಯದೇ ಆಗಿದೆ. ಇದು ತನ್ನ ಮದ್ಗುಣ ಮತ್ತು ಉತ್ತಮ ಪೋಷಕಾಂಶಗಳಿಂದ ವಾಣಿಜ್ಯ ಮಹತ್ವದ ಹಣ್ಣು ಎನಿಸಿದೆ.ಪಪ್ಪಾಯಿ ಕಾರಿಕಾ ಉಷ್ಣ ವಲಯದ ಹಣ್ಣಾಗಿದೆ. ಇಂಡೋನೇಶಿಯಾದಲ್ಲಿ ಇದರ ಎಲೆಯನ್ನು ಔಷಧಿಯಾಗಿ ಬಳಸುತ್ತಾರೆ. ಪಪ್ಪಾಯಿಯ ಸೊನೆ ಮತ್ತು ಕೆಲವು