Home Archive by category udupi (Page 14)

ವಿಶ್ವ ಆರೋಗ್ಯ ದಿನಾಚರಣೆ : ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಆರೋಗ್ಯ ಜಾಗೃತಿ ಮತ್ತು ಅರಿವು

ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಏಪ್ರಿಲ್ 6 ರ ಗುರುವಾರದಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಮತ್ತು ಅರಿವು ಮೂಡಿಸುವ ಶಿಲ್ಪ ಅನಾವರಣ ಮತ್ತು ಉಚಿತ ಆರೋಗ್ಯ ತಪಾಸಣೆ ಜರುಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಸರ್ವಲೆನ್ಸ್ ಆಫೀಸರ್ ಡಾ. ನಾಗರತ್ನ ಅವರು, “ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ

ಶಿವಪಾಡಿ ಶ್ರೀ ಉಮಾಮಹೇಶ್ವರ ಸನ್ನಿಧಿಯಲ್ಲಿ ಫೆಬ್ರವರಿ 18 ರಂದು : “ಅಬ್ಬಗ ದಾರಗ” ತುಳು ಪ್ರಸಂಗ ಮತ್ತು “ಬೇಡರ ಕಣ್ಣಪ್ಪ” ಕನ್ನಡ ಪ್ರಸಂಗ ಯಕ್ಷಗಾನ ಪ್ರದರ್ಶನ

ಶಿವಪಾಡಿ ಶ್ರೀ ಉಮಾಮಹೇಶ್ವರ ಸನ್ನಿಧಿಯಲ್ಲಿ ಫೆಬ್ರವರಿ 18 ರಂದು ಆಚರಿಸಲ್ಪಡುವ ಮಹಾಶಿವರಾತ್ರಿಯ ಅಂಗವಾಗಿ ‘ಮಹಾಶಿವರಾತ್ರಿ ಮಹೋತ್ಸವ’ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆ 06:30 ರಿಂದ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಪೂಜೆ ಹಾಗೂ ಸರ್ವ ಸೇವೆಗಳು ನೆರವೇರಲಿವೆ. ರಾತ್ರಿ 10:30 ರಿಂದ ಸಹಸ್ರ ಬಿಲ್ವಾರ್ಚನೆ, ಮಹಾರಂಗಾ ಪೂಜಾದಿಗಳು ಜರುಗಲಿದ್ದು, ರಾತ್ರಿ 09:30 ರಿಂದ ಪ್ರಾತಃಕಾಲದವರೆಗೆ ದೇವಸ್ಥಾನದ ವಠಾರದಲ್ಲಿ ಶ್ರೀ ಮಯೂರ

ಭಾರತದ ಯುವ ಶಕ್ತಿಗೆ ಮಣಿಪಾಲ ಗ್ರೂಪ್ ಸಂಸ್ಥೆಯ ಕೊಡುಗೆ ಅಪಾರ : ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿ ಜಿಲ್ಲೆಗೆ ಪ್ರವಾಸವನ್ನು ಕೈಗೊಂಡು ಇಂದು ಶುಕ್ರವಾರದಂದು ಉಡುಪಿಗೆ ಆಗಮಿಸಿದ್ದು, ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಣಿಪಾಲದ ಮಾಹೆ ಸಂಸ್ಥೆ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೇವೆಯನ್ನು ಶ್ಲಾಘಿಸುತ್ತಾ, ತಮ್ಮ ವಿದ್ಯಾರ್ಥಿ ದಿನಗಳನ್ನು ನೆನಪಿಸಿಕೊಂಡರು. ಮಾಹೆ ಸಂಸ್ಥೆ ಶೈಕ್ಷಣಿಕ ಹಾಗೂ ಸಂಶೋಧನೆ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ

ಭೀಮಾ ಜ್ಯೂವೆಲರ್ ನಿಂದ ಬ್ಯಾರಿಕೇಡ್ ಕೊಡುಗೆ -ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಹಸ್ತಾಂತರ

ಉಡುಪಿಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಭೀಮಾ ಜ್ಯೂವೆಲರ್ ವತಿಯಿಂದ ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.ಉಡುಪಿ ಜಿಲ್ಲೆಯಲ್ಲಿರುವ ಹೆಸರಾಂತ ಚಿನ್ನಾಭರಣ ಸಂಸ್ಥೆಯಾದ ಭೀಮ ಜ್ಯೂವೆಲರ್ ಸಮಾಜಿಕ ಸೇವೆಯಲ್ಲೂ ಮುಂಚೂಣಿಯಲ್ಲಿದೆ. ಇದೀಗ ಉಡುಪಿ ಜಿಲ್ಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಬ್ಯಾರಿಕೇಡ್‌ನ್ನು ಕೊಡುಗೆಯಾಗಿ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಭೀಮ ಜ್ಯುವೆಲ್ರ‍್ಸ್ನ ಸೀನಿಯರ್ ಮೇನೆಜರ್

ಪಡುಕುಡುರು ಗ್ರಾಮದ ಹಳೆಮಜಲು ನಿವಾಸಿಯ ಕರುಣಾಜನಕ ಕಥೆ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪಡುಕುಡುರು ಗ್ರಾಮದ ಒಳಗುಡ್ಡೆ ,ಹಳೆಮಜಲು ನಿವಾಸಿ ಪ್ರೇಮ ಪೂಜಾರ್ತಿ ವಾಸಿಸುವ ಮನೆಗೊಂದು ಬಾಗಿಲಿಲ್ಲ, ಕಿಟಕಿಗಳಂತೂ ಇಲ್ಲವೇ ಇಲ್ಲ,ಶೌಚಲಯಕ್ಕೆ ಬಯಲೇ ಗತಿ, ಒಂದೊತ್ತು ಊಟಕ್ಕೂ ಗತಿಯಿಲ್ಲದೇ ಪ್ರೇಮಕ್ಕನ ಬದುಕು ನಿಜಕ್ಕೂ ಕರುಳು ಹಿಂಡಿಸುವOತಹದ್ದು. ಕೆಲವು ವರುಷಗಳ ಹಿಂದೆ ಬಂಡೆಗಳ ಮೇಲೆ ವಾಸ ಮಾಡುತ್ತಿದ್ದ ಪ್ರೇಮಕ್ಕನ ಪರಿಸ್ಥಿತಿ ಕಂಡು ಕೆಲವು ಸಾಮಾಜಿಕ ಕಾರ್ಯಕರ್ತರು ಪುಟ್ಟದ್ದೊಂದು ಸೂರು ಕಟ್ಟಿಕೊಡಲು ಮುಂದಾಗಿದ್ದರು.ಅರ್ಧ

ಕರಾವಳಿಯಾದ್ಯಂತ ದೀಪಾವಳಿ ಸಡಗರ : ಕೃಷ್ಣಮಠದಲ್ಲಿ ಬಲೀಂದ್ರ ಪೂಜೆ

ಶ್ರೀಕೃಷ್ಣಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ಸೋಮವಾರ ರಾತ್ರಿ ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು “ಬಲೀಂದ್ರ ಪೂಜೆ” ನಡೆಸಿದರು. ಬಳಿಕ ಪಂಚ ದೀಪ ಪ್ರಜ್ವಲನೆಯೊಂದಿಗೆ ವಾದ್ಯ ಮೇಳ ಸಹಿತ ಶ್ರೀಕೃಷ್ಣ ಮಠದ ಎಲ್ಲ ಪ್ರದೇಶ ಮತ್ತು ಪರ್ಯಾಯ ಕೃಷ್ಣಾಪುರ ಮಠಕ್ಕೂ

ದೇವಾಡಿಗ ಸಮಾಜದ ಹಿರಿಯ ಮುಂದಾಳು, ಹೋಟೆಲ್ ಉದ್ಯಮಿ ಸೋಮಪ್ಪ ಬಾಬು ದೇವಾಡಿಗ ನಿಧನ

ಶಿರ್ವ : ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸುಮಾರು 53 ವರ್ಷಗಳಿಂದ ಹೋಟೆಲ್ ಉದ್ಯಮವನ್ನು ನಡೆಸುತ್ತಿದ್ದ ದೇವಾಡಿಗ ಸಮಾಜದ ಹಿರಿಯ ಮುಂದಾಳು,ನಾಸಿಕ್‌ ನ ಶಾರದಾ ಹೋಟೆಲ್ ನ ಮಾಲಕ ಕುತ್ಯಾರು ಕೋರ್ದೊಟ್ಟು ಸೋಮಪ್ಪ ಬಾಬು ದೇವಾಡಿಗ (94) ಅವರು ಅ. 24 ರಂದು ನಾಸಿಕ್‌ ಜಿಲ್ಲೆಯ ದೇವಲಾಲಿಯ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,ನಾಲ್ವರು ಪುತ್ರರು ಮತ್ತು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ ಅವರು ಕುತ್ಯಾರು ಗ್ರಾಮದ ಧಾರ್ಮಿಕ ಮತ್ತು ಸಾಮಾಜಿಕ

ಉಡುಪಿ : ತುಳುನಾಡಿನಲ್ಲಿ ಮತ್ತೊಮ್ಮೆ ತನ್ನ ಕಾರ್ಣಿಕ ತೋರಿಸಿಕೊಟ್ಟ ಕೊರಗಜ್ಜ ಸ್ವಾಮಿ

ತುಳುನಾಡಿನ ಕೊರಗಜ್ಜ ಸ್ವಾಮಿ ಮತ್ತೊಮ್ಮೆ ತನ್ನ ಕಾರ್ಣಿಕವನ್ನು ತೋರಿಸಿಕೊಟ್ಟಿದೆ. ನಂಬಿದವರನ್ನು ಹರಸಿ,ಇಷ್ಟಾರ್ಥಗಳನ್ನು ಈಡೇರಿಸುವ ಕೊರಗಜ್ಜ ಆರಿ ಹೋಗುತ್ತಿದ್ದ ಕುಟುಂಬವೊಂದರ ನಂದದೀಪವನ್ನು ಬೆಳಗಿಸಿಕೊಟ್ಟಿರುವ ಅಪರೂಪದ ಘಟನೆಗೆ ತುಳುನಾಡು ಸಾಕ್ಷಿಯಾಗಿದೆ. ನಾಲ್ಕು ತಿಂಗಳ ಹಸುಕೂಸೊಂದು ಕೊರಗಜ್ಜನ ಕೃಪೆಯಿಂದ ಸಾವನ್ನೇ ಗೆದ್ದು ಬಂದಿದೆ.ಹೌದು ಸಾಗರ ಮೂಲದ ಪುಟ್ಟ ಹೆಣ್ಣು ಮಗುವಿಗೆ ವಿಪರೀತ ಜ್ವರ ಕಂಡು ಬಂದಿತ್ತು.ಎರಡು ದಿನ ಕಳೆದರೂ ಜ್ವರ ಕಡಿಮೆಯಾಗದೇ ಮಗು

ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ : ಬಂಡೆಗೆ ಬಡಿದ ದೋಣಿ

ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ನಡೆದಿದೆ. ಇಂದು ಬೆಳಗ್ಗೆ ಐದು ಮಂದಿ ಮೀನುಗಾರರು, ನಾಡದೋಣಿಯಲ್ಲಿ ಕಾಪುವಿನಿಂದ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಲ್ಲಿ ದೋಣಿಯ ಇಂಜಿನ್ ತಾಂತ್ರಿಕ ದೋಷ ಉಂಟಾಗಿ, ಕಾಪು ಲೈಟ್ ಹೌಸ್ ತಲುಪುತ್ತಿದ್ದಂತೆ, ಬಂಡೆಗೆ ಬಡಿದಿದೆ. ಈ ವೇಳೆ ದೋಣಿ ಮಗುಚಿ

ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಸಿನಿ ಶೆಟ್ಟಿ

ಉಡುಪಿ: ಉಡುಪಿ ಮೂಲದ ಸಿನಿ ಶೆಟ್ಟಿ 2022ರ ಫೆಮಿನಾ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 21ರ ಹರೆಯದ ಸಿನಿ ಶೆಟ್ಟಿ ಉಡುಪಿ ಜಿಲ್ಲೆಯ ಇನ್ನಂಜೆಯವರು. ಸ್ಪರ್ಧೆಯಲ್ಲಿ ಸಿನಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಭಾನುವಾರ ಜುಲೈ 04 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಫಿನಾಲೆಯಲ್ಲಿ ಸಿನಿ ಶೆಟ್ಟಿ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಕೊಂಡರು. ಸಿನಿ ಮುಂಬೈನಲ್ಲಿ ಹುಟ್ಟಿ ಬೆಳೆದರೂ ಕೂಡಾ ಮಿಸ್ ಇಂಡಿಯಾ