Home Archive by category Uncategorized (Page 14)

ದ.ಕ. ಜಿಲ್ಲಾಡಳಿತದಿಂದ ಸ್ವಾತಂತ್ರ್ಯೋತ್ಸವ ಆಚರಣೆ : ಇಂಧನ ಸಚಿವ ಸುನಿಲ್ ಕುಮಾರ್ ರಿಂದ ಧ್ವಜಾರೋಹಣ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ನಗರವನ್ನು ಕನಸಿನ, ಆಕರ್ಷಣೀಯ ಮತ್ತು ಅಭಿವೃದ್ಧಿ ಪಥದ ಮಂಗಳೂರು ಎಂಬ ಮೂರು ಪ್ರಮುಖ ಅಂಶಗಳೊಂದಿಗೆ ವಿವಿಧ ಯೋಜನೆಗಳನ್ನು

ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಮೃತ್ಯು!

ಕಡಬ: ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣ ದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.ಧ್ವಜಾರೋಹಣವನ್ನು ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ದ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣ ಕ್ಕೆ

ಪ್ರವೀಣ್ ನೆಟ್ಟಾರು ಹತ್ಯೆ ಮೂವರು ಆರೋಪಿಗಳ ಬಂಧನ

ಕೇರಳ ಗಡಿಭಾಗ ತಲಪಾಡಿಯ ಚೆಕ್‍ಪೋಸ್ಟ್ ಬಳಿ ಆರೋಪಿಗಳನ್ನು ಪೊಲೀಸರು ಬಂಧಿಸಲಾಯಿತು ಎಂದು ಎಡಿಜಿಪಿ ಅಲೋಕ್ ಕುಮಾರ್ ವಿವರ ನೀಡಿದರು. ಬಂಧಿತರನ್ನು ಸುಳ್ಯದ ಶಿಹಾಬುದ್ದೀನ್ (33), ರಿಯಾಜ್ ಅಂಕತ್ತಡ್ಕ (27), ಬಶೀರ್ ಎಲಿಮಲೆ (28) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಶಿಹಾಬ್ ಕ್ಯಾಂಪ್ಕೋ ಸಂಸ್ಥೆಗೆ ಕೊಕ್ಕೋ ಪೂರೈಕೆ ಮಾಡುವ ವೃತ್ತಿಯಲ್ಲಿದ್ದ. ರಿಯಾಜ್ ಎಂಬಾತ ಬೆಳ್ಳಾರೆ ಮತ್ತು ಸುಳ್ಯದಲ್ಲಿ ಚಿಕನ್ ಸಪ್ಲೈ ಕೆಲಸ ಮಾಡುತ್ತಿದ್ದ, ಇನ್ನೋರ್ವ ಬಂಧಿತ

ಮಸೂದ್ ಮತ್ತು ಫಾಸಿಲ್ ಪ್ರಕರಣವನ್ನು ಎನ್ಐಎ ಗೆ ಕೊಟ್ಟು ಮುಖ್ಯಮಂತ್ರಿ ರಾಜ ಧರ್ಮ ಪಾಲಿಸಲಿ:-ಎಸ್‌ಡಿಪಿಐ

ದ.ಕ ಜಿಲ್ಲೆಯ ಬೆಳ್ಳಾರೆ ಸಮೀಪದ ಕಳಂಜ ಮಸೂದ್ ಮತ್ತು ಸುರತ್ಕಲ್‌ನ ಫಾಝಿಲ್ ಕೊಲೆ ಪ್ರಕರಣವನ್ನು ಕೂಡ ಪ್ರವೀಣ್ ಪ್ರಕರಣದಂತೆ ಎನ್‌ಐಎ ಗೆ ವಹಿಸಿ ಮುಖ್ಯ ಮಂತ್ರಿ ರಾಜ ಧರ್ಮ ಪಾಲಿಸಲಿ ಎಂದು ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ಆಗ್ರಹಿಸಿದ್ದಾರೆ.ಯಾವುದೇ ಕೊಲೆಯು ಸಮರ್ಥನೀಯವಲ್ಲ ಮೂರು ಕೊಲೆಯು ಖಂಡನೀಯವಾಗಿದೆ.ಶಾಂತಿಯಾಗಿದ್ದ ದ.ಕ ಜಿಲ್ಲೆಯನ್ನು RSS ನ ಅಂಗ ಸಂಸ್ಥೆ ಭಜರಂಗದಳದ ಕಾರ್ಯಕರ್ತರು ಕಳಂಜದ ಮಸೂದ್ ನನ್ನು

ಕಲ್ಲೋಣಿ – ದೇವರಕಾನ: ಸಚಿವ ಅಂಗಾರ ಆದೇಶದ ಮೇರೆಗೆ ಜಿಲ್ಲಾಪಂಚಾಯತ್ ಇಂಜೀನಿಯರ್ (PWD) ಮಣಿಕಂಠ ಅವರು ಕಲ್ಲೋಣಿ ದೇವರಕಾನ ರಸ್ತೆಯನ್ನು ವೀಕ್ಷಿಸಿದರು

ಸಚಿವ ಅಂಗಾರ ಅವರ ಆದೇಶದ ಮೇರೆಗೆ ಜಿಲ್ಲಾಪಂಚಾಯತ್ ಇಂಜೀನಿಯರ್ (PWD) ಮಣಿಕಂಠ ಅವರು ಕಲ್ಲೋಣಿ ದೇವರಕಾನ ರಸ್ತೆಯನ್ನು ವೀಕ್ಷಿಸಿ .ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆದರು. ಸುಳ್ಯ ಬೆಳ್ಳಾರೆಯ ಮುಖ್ಯರಸ್ತೆ ಕಲ್ಲೋಣಿ ಎಂಬಲ್ಲಿ ಬಹಳ ವರ್ಷ ದಿಂದ ರಸ್ತೆ ಹದಗೆಟ್ಟು ಹೋದ ಕಾರಣದಿಂದ ಒಂದೂವರೆ ಕಿಲೋ ಮೀಟ ರ್ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸಚಿವರ ಒಪ್ಪಿಗೆ ಪಡೆದು ಕಾಂಕ್ರಿಟೀಕರಣ ಮಾಡಲು ತೀರ್ಮಾನ ತೆಗೆದುಕೊಳ್ಳುವುದು. ಎಂದು ಬೆಳ್ಳಾರೆ ಗ್ರಾಮ ಪಂಚಾಯ್ತಿ ಅಧ್ಯಕ್ಷ

ಜುಲೈ 24ರಂದು ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ – ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಜುಲೈ 24ರಂದು ಮಾಧವ ಮಂಗಲ ಸಭಾಭವನದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದಲ್ಲಿ ನಡೆಯಲಿದೆ ಎಂದು ಜಿಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್ ವಿವೇಕಾನಂದ ಶೆಣೈ ತಿಳಿಸಿದರು.ಅವರು ಕಾಪುವಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,

ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮತ್ತು ಬಹುಜನ ಪ್ರಗತಿಪರ ಸಂಘಟನೆ ಒಕ್ಕೂಟದಿಂದ ಪಿ .ಡೀಕಯ್ಯ ಅವರಿಗೆ ನುಡಿ ನಮನ

ಬೆಳ್ತಂಗಡಿ : ‘ಸ್ವಂತಕ್ಕಾಗಿ ಬದುಕದೆ ಸಮಾಜ ಹಿತಕ್ಕಾಗಿ ಬದುಕಿದವರು ಪಿ.ಡೀಕಯ್ಯರವರು. ಅವರು ಮನುಷ್ಯ ಮನುಷ್ಯರ ಮಧ್ಯೆ ಸಾಮರಸ್ಯದಿಂದ ಹೇಗೆ ಬದುಕಬೇಕು ಎಂದು ತೋರಿಸಿಕೊಟ್ಟವರು. ನಿಜವಾದ ಅರ್ಥದಲ್ಲಿ ಪರಿವರ್ತನೆಯ ಹರಿಕಾರರಾಗಿದ್ದು, ಎಲ್ಲಾ ವರ್ಗದ ಜನ ಗೌರವಿಸುವ ವ್ಯಕ್ತಿತ್ವ ಅವರದಾಗಿತ್ತು’ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದರು. ಅವರು ಭಾನುವಾರ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ಈಚೆಗೆ ನಿಧನರಾದ ಪಿ.

ವಿದ್ಯಾರ್ಥಿ ಚಳುವಳಿಗಳು ನೈಜ್ಯ ನಾಯಕತ್ವವನ್ನು ಬೆಳೆಸಬೇಕಿದೆ” ಪ್ರೊಫೆಸರ್ ಚಂದ್ರ ಪೂಜಾರಿ

ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ ಮತ್ತು ವಿದ್ಯಾರ್ಥಿಗಳ ಐಕ್ಯತೆಗಾಗಿ” ಭಾರತ ವಿದ್ಯಾರ್ಥಿ ಫೆಡರೇಶನ್ SFI ಇಂದು 16-07-2022 ಬೋಳಾರದ ಎಕೆಜಿ ಭವನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಹಂಪಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಚಂದ್ರ ಪೂಜಾರಿಯವರು ಮಾತನಾಡುತ್ತಾ ಭಾರತಕ್ಕೆ ನೈಜ ನಾಯಕತ್ವದ ಕೊರತೆ ಇದೆ. ವಿದ್ಯಾರ್ಥಿ ಚಳುವಳಿಗಳು ನೈಜ್ಯ ನಾಯಕರನ್ನು ಬೆಳೆಸಬೇಕಾಗಿದೆ. ನಾಯಕತ್ವ ಗುಣಗಳನ್ನು ಯುವ ಸಮುದಾಯದ

ದಿಯಾ ಖ್ಯಾತಿಯ ಪೃಥ್ವಿ ಅಂಬಾರ್‍ಗೆ ಮಾತೃ ವಿಯೋಗ

ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್ ಅವರ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ಅಂತ್ಯಕ್ರಿಯೆ ಕಾಸರಗೋಡಿನ ಉಪ್ಪಳ ಸಮೀಪದ ಐಲದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಪೆರುವಾಜೆ ನಾಗನ ಮಜಲ್ ಎಂಬಲ್ಲಿ ರಸ್ತೆಯಲ್ಲಿ ಬಿರುಕು : ಏಳೆಂಟು ಮನೆಗಳಿಗೆ ಸಂಪರ್ಕ ಕಡಿತದ ಭೀತಿ

ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಮೂರನೇ ವಾರ್ಡಿನ ನಾಗನ ಮಜಲ್ ಎಂಬಲ್ಲಿ ರಸ್ತೆ ಬಿರುಕು ಬಿಟ್ಟಿದ್ದು ಸುಮಾರು ಏಳೆಂಟು ಮನೆಗಳಿಗೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ತಕ್ಷಣ ಅಧಿಕಾರಿಗಳು ತುರ್ತು ಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯರು ಅಗ್ರಹಿಸಿದ್ದಾರೆ. ಕುಡಿಯೋ ನೀರಿನ ಜಾಕ್ವೆಲ್ ಇದ್ದು ಅದಕ್ಕೆ ಅಳವಡಿಸಿದ ಟಿಸಿಯು ಅಪಾಯಕಾರಿ ಕುಸಿಯುವ ಭೀತಿಯಲ್ಲಿದೆ. ಟಿಸಿಯ ಹತ್ತಿರದ ಮನೆಯ ಅಂಗಳ ಕೂಡ ಬಿರುಕು ಬಿಟ್ಟಿದ್ದು ಅಪಾಯದ ಹಂತದಲ್ಲಿದೆ ತಕ್ಷಣ ಅಧಿಕಾರಿಗಳು