ಧಾರವಾಡ: ವಾಹನ ಅಪಘಾತದಲ್ಲಿ ಶಿವಕುಮಾರ್ ಕೌಡಿಚ್ಚಾರ್ ಮೃತ್ಯು

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚಿನ ದಿನಗಳಲ್ಲಿ ಉದ್ಯೋಗ ನಿಮಿತ್ತ ಧಾರವಾಡದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಮೃತ ಶರೀರ ದಾರವಾಡ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಕುಟುಂಬಸ್ಥರು ಈಗಾಗಲೇ ಧಾರವಾಡ ಕಡೆ ಪ್ರಯಾಣ ಬೆಳೆಸಿದ್ದಾರೆ.
