ಕಡಬ :ಮನೆಯ ಮೇಲ್ಚಾವಣಿಯಿಂದ ಕೆಳಗೆ ಬಿದ್ದ ಕಾರ್ಮಿಕ ಮೃತ್ಯು

ಕಡಬ: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ನೆಟ್ಟಣದಲ್ಲಿ ನಡೆದಿದೆ. ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ.

ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಹರಿಪ್ರಸಾದ್ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ನೆಟ್ಟಣದ ಪ್ರಕಾಶ್ ಎಂಬವರ ಜೀಪಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

Related Posts

Leave a Reply

Your email address will not be published.