ಅಪೂರ್ವ ಗೋಕುಲ್‍ದಾಸ್ ರಚಿಸಿದ ಕಾಂತಾರ ಸಿನಿಮಾದ ಪಂಜುರ್ಲಿ ಚಿತ್ರ

ಸುಳ್ಯ ತಾಲೂಕಿನ ವಿದ್ಯಾರ್ಥಿನಿ ಅಪೂರ್ವ ಗೋಕುಲ್‍ದಾಸ್ ರಚಿಸಿರುವ ಪಂಜುರ್ಲಿ ದೈವದ ಚಿತ್ರ ಎಲ್ಲರ ಗಮನ ಸೆಳೆದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಕನ್ನಡ ಚಲನ ಚಿತ್ರ ಕಾಂತಾರದಲ್ಲಿ ಮೂಡಿ ಬಂದ ಪಂಜುರ್ಲಿ ದೈವದ ಚಿತ್ರವನ್ನು ಅಪೂರ್ವ ಗೋಕುಲ್‍ದಾಸ್ ಮನಮೋಹಕವಾಗಿ ರಚಿಸಿ ಮೆಚ್ಚಿಗೆ ಗಳಿಸಿದ್ದಾಳೆ. ಅಪೂರ್ವ ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ಕೆ.ಗೋಕುಲ್‍ದಾಸ್ ಅವರ ಪುತ್ರಿ. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಎಂಟನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ.

Related Posts

Leave a Reply

Your email address will not be published.