ಕಾಲೇಜು ವಿದ್ಯಾರ್ಥಿನಿ ರೈಲ್ವೆ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಡಪ್ಪುರದ ಸುರೇಂದ್ರರವರ ಪುತ್ರಿ ಅಂಜನಾ.ಎಸ್(22) ಮೃತಪಟ್ಟವರು.ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿನಿ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು.ಮನೆಯವರು ಹುಡುಕಾಡಿದಾಗ ಮನೆಯ ಪಕ್ಕದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.ಸ್ಥಳಕ್ಕೆ ಕಾಸರಗೋಡು ನಗರ ಠಾಣಾ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ‌.ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.ಇದು ಆತ್ಮಹತ್ಯೆಯ ಅಥವಾ ಅವಘಡವ ಎನ್ನುವುದು ತನಿಖೆಯಿಂದ ಬಯಲಾಗಬೇಕಿದೆ‌.

Related Posts

Leave a Reply

Your email address will not be published.