ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ-ಮೂವರಿಗೆ ಗಾಯ

ಕೊಕ್ಕಡ:ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9ರಂದು ರಾತ್ರಿ ನಡೆದಿದೆ.
ನೆಲ್ಯಾಡಿ ಪಡ್ಡಡ್ಕ ನಿವಾಸಿ ಬೆನ್ನಿ, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪದ ಮುಂಡ್ರೇಲು ನಿವಾಸಿಗಳಾದ ಮಹೇಂದ್ರ ಹಾಗೂ ಮಂಜುನಾಥ ಎಂಬವರು ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ರಿಂಗ್ ವರ್ಕ್ಸ್ ಕೆಲಸ ನಿರ್ವಹಿಸುತ್ತಿರುವ ಪಡ್ಡಡ್ಕ ನಿವಾಸಿ ಬೆನ್ನಿ ಅವರು ತನ್ನ ಬೈಕ್‌ನಲ್ಲಿ ಕೊಕ್ಕಡದಿಂದ ನೆಲ್ಯಾಡಿಗೆ ಬರುತ್ತಿದ್ದು ಮಹೇಂದ್ರ ಹಾಗೂ ಮಂಜುನಾಥ ಅವರು ನೆಲ್ಯಾಡಿಯಿಂದ ಕೊಕ್ಕಡ ಕಡೆಗೆ ತಮ್ಮ ಬೈಕ್‌ನಲ್ಲಿ ಹೋಗುತ್ತಿದ್ದು ಪುತ್ಯೆ ಸಮೀಪ ಮಾಯಿಲಕೋಟೆ ದೈವಸ್ಥಾನಕ್ಕೆ ತಿರುಗುವಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು ಕೊಕ್ಕಡ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆನ್ನಿ ಅವರು ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿ ಹಾಗೂ ಇನ್ನಿಬ್ಬರು ಗಾಯಾಳುಗಳ ಪೈಕಿ ಒಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಗೂ ಇನ್ನೊಬ್ಬರು ಮಂಗಳೂರು ಫಾದರ್ ಮುಲ್ಲರ್‍ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Related Posts

Leave a Reply

Your email address will not be published.