ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರು ಪಾಲು

ಯುವಕನೊಬ್ಬ ಜಲಪಾತದ ನೀರಿಗೆ ಕಾಲುಜಾರಿ ಬಿದ್ದು ನೀರುಪಾಲಾದ ಘಟನೆ ,ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ.

ಈ ಯುವಕ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆಂದು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಂಡೆಕಲ್ಲೊಂದರ ಮೇಲೆ ಯುವಕ ನಿಂತಿದ್ದಾಗ ,ಅಕಸ್ಮಾತ್ತಾಗಿ ಕಾಲುಜಾರಿ ಬಿದ್ದಿದ್ದಾನೆ.

ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದ್ದು , ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಕೊಲ್ಲೂರು ಠಾಣೆಯಲ್ಲಿ ದಾಖಲಾಗಿದೆ.

Related Posts

Leave a Reply

Your email address will not be published.