ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೈಸೂರಿನ ಮನೆಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. 1983 ರಲ್ಲಿ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದ ಅವರು, ಸಂತೇಮರಹಳ್ಳಿ ಕ್ಷೇತ್ರದಿಂದ ಒಂದು ಶಾಸಕರಾಗಿ ಆಯ್ಕೆಯಾಗಿ, ಎರಡನೇ ಬಾರಿ ಕೊಳ್ಳೇಗಾಲ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಚಾಮರಾಜನಗರ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ನಂತರ ಮೈಸೂರಿನ ಪ್ರಭಾವಿ ನಾಯಕರು ಎಂದರೆ ಅದು ಆರ್.ಧ್ರುವ ನಾರಾಯಣರಾಗಿದ್ದರು. ಶ್ರಿನಿವಾಸ್ ಪ್ರಸಾದ್ ಅವರ ಬಳಿಕ ಮೈಸೂರಿನ ಭಾಗದಲ್ಲಿ ದಲಿತ ಸಮುದಾಯವನ್ನು ಪ್ರತಿನಿಧಿಸಿದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಕೇಂದ್ರದ ಅನುದಾನವನ್ನು ಉತ್ತಮವಾಗಿ ಬಳಸಿ ಅಭಿವೃದ್ದಿಗೆ ನೆರವಾದ ಅವರು ಜನರಿಂದ
ಅತ್ಯುತ್ತಮ ಸಂಸದ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇತ್ತೀಚಿಗೆ ಆರೋಗ್ಯ ಸಮಸ್ಯೆ ಇದ್ದರೂ ರಾಜಕೀಯ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸುತ್ತಿದ್ದರು.

Related Posts

Leave a Reply

Your email address will not be published.