ಪ್ರಧಾನಿ ಮೋದಿಯವರ ಖಾತರಿಗಳು ಸುಳ್ಳುಗಳ ಖಾತರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ
ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ‘ಸುಳ್ಳಿನ ಪತ್ರ’ ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯವರ ಖಾತರಿಗಳು ‘ಸುಳ್ಳುಗಳ ಖಾತರಿಗಳಾಗಿವೆ’ ಎಂದು ಟೀಕಿಸಿದ್ದಾರೆ.
ಮೋದಿ ಅವರು, ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣಗೊಳಿಸುವುದು, ಬೆಲೆ ಏರಿಕೆ ಹಾಗೂ ಹಣದುಬ್ಬರ ನಿಯಂತ್ರಣ ಸೇರಿದಂತೆ, ಈ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾರಾಗಿದ್ದಾರೆ. ಇದೀಗ 2047ಕ್ಕೆ ವಿಕಸಿತ ಭಾರತ ನಿರ್ಮಾಣ ಮಾಡುವುದಾಗಿ ಮಾತನಾಡುತ್ತಿದ್ದಾರೆ ಎಂದು ಖರ್ಗೆ ಕಿಡಿಕಾರಿದ್ದಾರೆ.
ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಮತ್ತು ಹಣದುಬ್ಬರವನ್ನು ಹೆಚ್ಚಿಸಿರುವುದೇ ಮೋದಿ ಸಾಧನೆ ಎಂದು ಚಾಟಿ ಬೀಸಿದ್ದಾರೆ.