ಡಿ .16 ಮಂಗಳೂರಿನ ಕೆಲವೆಡೆ  ನೀರು ಸರಬರಾಜಿನಲ್ಲಿ ವ್ಯತ್ಯಯ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತುರ್ತಾಗಿ ಪೈಪ್ ಲೈನ್ ಕಾಮಗಾರಿ ನಡೆಯಲಿದೆ. ಹೀಗಾಗಿ ಮಂಗಳೂರು ನಗರದ ವಿವಿಧೆಡೆ ಭಾನುವಾರ ಡಿ .16 ರ ಮುಂಜಾನೆಯಿಂದ 24 ಗಂಟೆಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ತುಂಬೆ ಹೆಚ್ ಎಲ್ ಪಿ ಎಸ್ ರೇಚಕ ಸ್ಥಾವರದಿಂದ ಪಣಂಬೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯೂ ಬಿಜೈ ಚರ್ಚ್ ರೋಡ್ ಬ್ರಿಡ್ಜ್ ಬಳಿ , ಕೂಳೂರು ಸೇತುವೆ ಬಳಿ, ಎಂ ಸಿ ಎಫ್ ಬಳಿ ನೀರು ಸೋರಿಕೆ ಉಂಟಾಗಿರುವ ಹಿನ್ನೆಲೆ ತುರ್ತಾಗಿ ದುರಸ್ತಿ ಕಾಮಗಾರಿಗೆ ಪಾಲಿಕೆಯು ಮುಂದಾಗಿದೆ.ಡಿ.16 ರ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಡಿ.12 ರ ಶುಕ್ರವಾರ ಬೆಳಿಗ್ಗೆ 6 ಗಂಟೆವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.ಸುರತ್ಕಲ್, ಪಣಂಬೂರು, ಕಾನ, ಬಾಳ, , ಕಾಟಿಪಳ್ಳ, ಮುಂಚೂರು, ಎನ್ ಐ ಟಿ ಕೆ , ಸಸಿಹಿತ್ಲು , ಕೂಳೂರು, ಕೊಟ್ಟಾರ ಮುಂತಾದೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

Related Posts

Leave a Reply

Your email address will not be published.