ಮಂಜೇಶ್ವರ : ನೀರಿನ ಕೊಳಕ್ಕೆ ಬಿದ್ದು ಯುವಕರಿಬ್ಬರು ಮೃತ್ಯು

ಪೆರ್ನಾಳ್ ಹಬ್ಬ ಆಚರಿಸಲೆಂದು ಸಂಬಂಧಿಕರ ಮನೆಗೆ ಬಂದಿದ್ದ ಯುವಕರಿಬ್ಬರು ಮಸೀದಿಯ ಸಮೀಪದ ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೊಗ್ರಾಲ್ ಕೊಪ್ಪಳದಲ್ಲಿ ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಮಂಜೇಶ್ವರ ಮಜಿಬೈಲ್ ನಿವಾಸಿ ಖಾದರ್ – ನಸೀಮಾ ದಂಪತಿಗಳ ಮಕ್ಕಳಾದ ಅಬ್ದುಲ್ ನಾಝಿಂ (22) ಹಾಗೂ ಮೊಹಮ್ಮದ್ ನವಾ (17) ಮೃತ ದುರ್ದೈವಿಗಳು. ಸ್ಥಳಕ್ಕಾಗಮಿಸಿದ ಸ್ಥಳೀಯರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮಾಹಿತಿ ಪಡೆದ ಕುಂಬಳೆ ಪೆÇಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.