ಮೂಡುಬಿದಿರೆ: ಮಾಸ್ತಿಕಟ್ಟೆ ಶಾಲಾ ಮಕ್ಕಳಿಗೆ ಉಚಿತ ಕೊಡೆ, ಪುಸ್ತಕ ವಿತರಣೆ

ಮೂಡುಬಿದಿರೆ: ದ.ಕ.ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಮೂಡುಬಿದಿರೆ ಮತ್ತು ಸರ್ವೋದಯ ಫ್ರೆಂಡ್ಸ್ ಇವುಗಳ ವತಿಯಿಂದ ಮಾಸ್ತಿಕಟ್ಟೆ ಸರಕಾರಿ ಶಾಲೆಯ ಮಕ್ಕಳಿಗೆ ಉಚಿತ ಕೊಡೆ ಮತ್ತು ಪುಸ್ತಕವನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷ ಗುರುಪ್ರಸಾದ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ನವೀನ ಕುಂದರ್, ಉಪಾಧ್ಯಕ್ಷ ಗಿರೀಶ್ ನಾಯಕ್, ಕೋಶಾಧಿಕಾರಿ ಶಂಕರ ಕೋಟ್ಯಾನ್, ಯಶವಂತ್, ದೀರಜ್, ಸುಧಾಕರ, ಕುಮಾರ್, ಸರ್ವೋದಯ ಫ್ರೆಂಡ್ಸ್ ಅಧ್ಯಕ್ಷ ಗುರುಪ್ರಸಾದ್, ಕೋಶಾಧಿಕಾರಿ, ಭವಿಷ್ಯತ್ತ್ ಕೋಟ್ಯಾನ್, ರಿಖಿತ್ ಸುವರ್ಣ, ಹರೀಶ್ ಕುಮಾರ್ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
