ಬೂತ್ ವಿಜಯ ಅಭಿಯಾನಕ್ಕೆ ಶಾಸಕ ಕೋಟ್ಯಾನ್ ಚಾಲನೆ

ಮೂಡುಬಿದಿರೆ:ಭಾರತೀಯ ಜನತಾ ಪಾರ್ಟಿ ಮೂಲ್ಕಿ -ಮೂಡುಬಿದಿರೆ ಮಂಡಲದ ವತಿಯಿಂದ ಸೋಮವಾರ “ಬೂತ್ ವಿಜಯ ಅಭಿಯಾನ” ಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿದರು. ಪುತ್ತಿಗೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಂಪಿಗೆಯ ಶಕ್ತಿ ಕೇಂದ್ರದ ಮತಗಟ್ಟೆ ಸಂಖ್ಯೆ 79 ರ 5 ಮನೆಗಳಿಗೆ ತೆರಳಿ ಪಕ್ಷದ ಧ್ವಜ ಹಸ್ತಾಂತರ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಮಂಡಲಾಧ್ಯಕ್ಷ ಸುನಿಲ್ ಆಳ್ವ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಕೃಷ್ಣರಾಜ ಹೆಗ್ಡೆ, ಪುರಸಭಾ ಸದಸ್ಯೆ ಶ್ವೇತಾ ಕುಮಾರಿ, ಇರುವೈಲು ಗ್ರಾ.ಪಂ.ಸದಸ್ಯ ನಾಗೇಶ್, ಬಿಜೆಪಿ ಮೂಲ್ಕಿ-ಮೂಡುಬಿದಿರೆ ಕ್ಷೇತ್ರ ಯುವ ಮೋರ್ಚಾದ ಅಧ್ಯಕ್ಷ ಅಶ್ವತ್ಥ್ ಪಣಪಿಲ, ಪುತ್ತಿಗೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕಿಶೋರ್ ಕುಮಾರ್, ಶಿರ್ತಾಡಿ ಗ್ರಾ.ಪಂಚಾಯತ್ ನ ಮಾಜಿ ಅಧ್ಯಕ್ಷೆ ಲತಾ ಹೆಗ್ಡೆ, ಸೇರಿದಂತೆ ಪಕ್ಷದ ಪ್ರಮುಖರು, ಮುಖಂಡರು ಈ ಸಂದರ್ಭದಲ್ಲಿದ್ದರು.

Related Posts

Leave a Reply

Your email address will not be published.