ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸ ಮಜಲು ಎಂಬಲ್ಲಿ ಲಾರಿಯೊಂದು ಮಗುಚಿ ಬಿದ್ದು ಸಂಚಾರಕ್ಕೆ ತಡೆ ಉಂಟಾದ ಘಟನೆ ಸಂಭವಿಸಿದೆ.

ಬೆಂಗಳೂರಿನಿಂದ ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿಯು ಹೊಸ ಮಜಲು ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು ಪ್ರಯಾಣಿಕರಿಗೆ ಅಡಚಣೆಯಾಗಿದೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಬಿದ್ದ ಪರಿಣಾಮ ಮಂಗಳೂರು ಬೆಂಗಳೂರು ಸಂಚರಿಸುವ ಪ್ರಯಾಣಿಕರು ನೆಲ್ಯಾಡಿ ಪುತ್ಯೆ ಕೊಕ್ಕಡ ಮಾರ್ಗವಾಗಿ ಪೆರಿಯ ಶಾಂತಿಯ ಮೂಲಕ ಪ್ರಯಾಣಿಸುತ್ತಿದ್ದಾರೆ. ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಹೆಡ್ ಕಾನ್ಸ್ಟೇಬಲ್ ಬಾಲಕೃಷ್ಣ ಹಾಗೂ ಕುಶಾಲಪ್ಪ, ನೆಲ್ಯಾಡಿ ಹಾಗೂ ಗುಂಡ್ಯದ ಪರಶುರಾಮ ಕ್ರೇನ್ ತಂಡದ ಸದಸ್ಯರು ಆಗಮಿಸಿ ಲಾರಿಯನ್ನು ಮೇಲೆತ್ತಿ ಸಂಚಾರ ಸುಗಮಗೊಳಿಸುವ ಯತ್ನದಲ್ಲಿದ್ದಾರೆ.

Related Posts

Leave a Reply

Your email address will not be published.