ಪಡುಬಿದ್ರಿ : ಕಾನೂನು ಬಾಹಿರ ಮಣ್ಣು ಸಾಗಾಟ

ಕಾನೂನು ಬಾಹಿರವಾಗಿ ಮಣ್ಣು ಸಾಗಾಟ ನಡೆಸುತ್ತಿದ್ದ ಟಿಪ್ಪರನ್ನು ತಡೆದ ಸಾರ್ವಜನಿಕರು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಪಡುಬಿದ್ರಿಯ ಇಕ್ಕಟ್ಟಾದ ಸರ್ವಿಸ್ ರಸ್ತೆಯಲ್ಲಿ ಸಾಲುಗಟ್ಟಿ ಟಿಪ್ಪರ್ ಗಳು ಮಣ್ಣಿಗೆ ಹೊದಿಕೆಯನ್ನೇ ಹಾಕದೆ ಕಾನೂನು ಬಾಹಿರವಾಗಿ ಸಾಗಾಟ ನಡೆಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಬಹಳಷ್ಟು ಬಾರಿ ಎಚ್ಚರಿಕೆಯನ್ನು ನೀಡಿದರೂ ಮಾನ್ಯತೆ ನೀಡದೆ ತಮ್ಮ ಚಾಲಿ ಮುಂದುವರಿಸಿದ್ದರಿಂದ ಆಕ್ರೋಶಗೊಂಡ ಸಾರ್ವಜನಿಕರು ಪಡುಬಿದ್ರಿ ಗ್ರಾ.ಪಂ. ಮುಂಭಾಗ ಸರ್ವಿಸ್ ರಸ್ತೆಯಲ್ಲಿ ಟಿಪ್ಪರನ್ನು ತಡೆದು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಮಣ್ಣಿಗೆ ಟರ್ಪಾಲನ್ನು ಚಾಲಕನಿಂದಲೇ ಹೊದಿಸಿ ಎಚ್ಚರಿಕೆ ನೀಡಿ ಬಿಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿದ ಸ್ಥಳೀಯರಾದ ಅಶೋಕ್ ಸಣ್ಣಪುಟ್ಟ ವಾಹನಗಳೇ ಸಂಚರಿಸಲು ಸಮಸ್ಯೆಯಾಗುವ ಸರ್ವಿಸ್ ರಸ್ತೆಯಲ್ಲಿ ಮಣ್ಣು ತುಂಬಿದ ಟಿಪ್ಪರ್ ಗಳು ಕಾನೂನು ಬಾಹಿರವಾಗಿ ಸಾಲುಗಟ್ಟಿ ಸಂಚಸುತ್ತಿದ್ದರಿಂದ ಸಾರ್ವಜನಿಕರರು ನಿತ್ಯ ಸಮಸ್ಯೆ ಅನುಭವಿಸುವಂತ್ತಾಗಿದೆ, ಬೈಕ್ ಸವಾರರಂತ್ತೂ ಪ್ರಾಣವನ್ನು ಕೈಯಲ್ಲಿ ಹಿಡಿದು ಪ್ರಯಾಣಿಸುವಂತ್ತಾಗಿದೆ ಈ ಬಗ್ಗೆ ಸಂಬಂಧಿಸಿದ ಇಲಾಖೆ ಇಂಥಹ ವಾಹನಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Related Posts

Leave a Reply

Your email address will not be published.