ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ: ಜೀರ್ಣೋದ್ಧಾರಿ ಸಮಿತಿಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಬಲ ಕ್ಯೆ ಬಂಟ ಶ್ರೀ ಕಾಚು ಕುಜುoಬ ದೈವದ ಮೂಲ ಸ್ಥಾನ ಗರಡಿ ಬೈಲ್ ನಲ್ಲಿ ನೂತನ ವಾಗಿ ನಿರ್ಮಾಣ ವಾಗುತಿರುವ ಶ್ರೀ ಕಾಚು ಕುಜುoಬ ದೈವಸ್ಥಾನದ ಜೀರ್ಣೋಧಾರ ಸಮಿತಿ ಅಧ್ಯಕ್ಷರಾಗಿ ಶ್ರೀ ಪರಮೇಶ್ವರ ಗೌಡ ಬಿಳಿಮಲೆ, ಉಪಾಧ್ಯಕ್ಷರಾಗಿ ಶ್ರೀ ಉಮೇಶ್ ಬುಡೆಂಗಿ ಬಲ್ಪ ಹಾಗೂ ಕಾರ್ಯದರ್ಶಿ ಗಳಾಗಿ ಶ್ರೀ ಅನಂದ ಗೌಡ ಜಳಕದ ಹೊಳೆ ಆಯ್ಕೆಯಾದರು.


ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ kanathur ಸಭಾಧ್ಯಕ್ಷತೆ ವಹಿಸಿದ್ಧರು ಸಭೆಯಲ್ಲಿ ವ್ಯವಸ್ಥಾಪನ ಸಮಿತಿ ಗೌರವ ಸಲಹೆ ಗಾರರಾದ ಶ್ರೀ ಮಹೇಶ್ ಕುಮಾರ್ ಕರಿಕ್ಕಳ,ಶ್ರೀ ಆನಂದ ಗೌಡ ಕಂಬಳ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಶ್ರೀ ರಾಮಚಂದ್ರ ಭಟ್, ಶ್ರೀ ಮಾಲಪ್ಪ ಗೌಡ yenmuru, ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕಡ, ಸಂತೋಷ್ ಕುಮಾರ್ ರೈ ಫಲತಡ್ಕ, ಸತ್ಯನಾರಾಯಣ ಭಟ್ ಕಾಯಂಬಾಡಿ, ಮಾಲಿನಿ ಕುದ್ವ ಹಾಗೂ ಪವಿತ್ರ ಮಲ್ಲೆಟ್ಟಿ ಉಪಸ್ಥಿತರಿದ್ದರು. ನೂತನ ದೈವಸ್ಥಾನದ ನಿರ್ಮಾಣ ಕೆಲಸ ಈಗಾಗಲೇ ಪ್ರಾರಂಭ ಗೊಂಡಿದ್ದು ಪ್ರತಿಷ್ಟಾ ಕಾರ್ಯಕ್ರಮ ವು ದಿನಾಂಕ 3-12-25 ರಿಂದ ಆರಂಭ ವಾಗಿ 5-12-25 ರಂದು ನಡೆಯಲಿದೆ.