ಶಿವಪಾಡಿಗೆ ಅಜಿತ್ ಹನುಮಕ್ಕನವರ್ ಭೇಟಿ : ಸುವರ್ಣ ನ್ಯೂಸ್ ಚಾನೆಲ್ ನ ಸುದ್ದಿ ವಿಭಾಗದ ಮುಖ್ಯಸ್ಥರು

ಅತಿರುದ್ರ ಮಹಾಯಾಗದ ಹತ್ತನೇ ದಿನವಾದ ಮಾರ್ಚ್ 03, 2023 ರ ಶುಕ್ರವಾರದಂದು, ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ 07:30 ರಿಂದ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರುತ್ತಿದೆ. ಸಹಸ್ರಾರು ಭಕ್ತಾಭಿಮಾನಿಗಳು ದೇವಸ್ಥಾನಕ್ಕೆ ಬಂದು ಪಾಲ್ಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್ ಚಾನೆಲ್ ನ ಸುದ್ದಿ ವಿಭಾಗದ ಮುಖ್ಯಸ್ಥರಾದ ಶ್ರೀ ಅಜಿತ್ ಹನುಮಕ್ಕನವರ್ ಶಿವಪಾಡಿಯ ಸನ್ನಿಧಾನಕ್ಕೆ ಭೇಟಿ ನೀಡಿ, ಶ್ರೀ ಉಮಾಮಹೇಶ್ವರ ದೇವರ ದರ್ಶನ ಮಾಡಿದರು. ನಂತರ ಅತಿರುದ್ರ ಮಹಾಯಾಗದಲ್ಲಿ ಪಾಲ್ಗೊಂಡರು. ಇಂದು ಸಂಜೆ 5 ರಿಂದ ಅತಿರುದ್ರ ಮಹಾಯಾಗದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಜಿತ್ ಹನುಮಕ್ಕನವರ್ ದಿಕ್ಸೂಚಿ ಭಾಷಣ ಇರಲಿದೆ.

Related Posts

Leave a Reply

Your email address will not be published.