ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ನಟ ರಕ್ಷಿತ್ ಶೆಟ್ಟಿ ಆಗಮನ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ‘ಅತಿರುದ್ರ ಮಹಾಯಾಗ’ದ ಸಲುವಾಗಿ ಶಿವಪಾಡಿಯ ಸಾನಿಧ್ಯದಲ್ಲಿ ಅನೇಕ ಕಾರ್ಯಕ್ರಮಗಳೊಂದಿಗೆ ಜೋರಾಗಿ ತಯಾರಿಗಳು ಕೂಡ ಸಾಗುತ್ತ ಇವೆ. ಮಹಾಯಾಗದ ಪ್ರಯುಕ್ತ ಫೆಬ್ರವರಿ 20, 2023 ರ ಸೋಮವಾರದಂದು ಶಿವಪಾಡಿಯ ಉಮಾಮಹೇಶ್ವರ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಅವರು ಆಗಮಿಸಿ, ದೇಗುಲದಲ್ಲಿ ನಡೆಯುತ್ತಿರುವ ಸಕಲ ತಯಾರಿಗಳನ್ನು ವೀಕ್ಷಿಸಿ, ಪುಂಗನೂರು ತಳಿಯ ಗೋವುಗಳನ್ನು ಮುದ್ದಾಡಿ ತಮ್ಮ ಬಿಡುವಿನ ಸಮಯವನ್ನು ಕಳೆದರು. ಈ ಸಂದರ್ಭದಲ್ಲಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ ಮಹೇಶ್ ಠಾಕೂರ್, ಅವರ ಜೊತೆಯಿದ್ದರು.


