ಶಯದೇವಿಸುತೆ ಮರವಂತೆಯವರ ಮುಡಿಗೇರಿದ,“ಕರ್ನಾಟಕ ಸಾಧಕ ರತ್ನ ಪ್ರಶಸ್ತಿ
ಶ್ರೀ ಮಹಾದೇವ ಎಜುಕೇಷನ್, ಆರ್ಟ್ & ಕಲ್ಚರಲ್ ಟ್ರಸ್ಟ್(ರಿ.) ಬಳ್ಳಾರಿ, ಜೆ.ಟಿ. ಫೌಂಡೇಷನ್ ಮತ್ತು ಶ್ರೀ ಎಸ್.ಆರ್.ಎಂ. ಸೇವಾ ಸಂಸ್ಥೆ(ರಿ.) ಬಳ್ಳಾರಿ ಹಾಗೂ, ಅಖಿಲ ಕರ್ನಾಟಕ ಕನ್ನಡ ರಾಜ್ಯೋತ್ಸವ ಸಮಿತಿ ಬಳ್ಳಾರಿ – ಇವರ ಸಹಯೋಗದಲ್ಲಿ, “ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ” ವು 2024, ನವೆಂಬರ್ 30 ಹಾಗೂ ಡಿಸೆಂಬರ್ 01ರಂದು ಬಳ್ಳಾರಿಯ ಡಾ. ಜೋಳದರಾಶಿ ದೊಡ್ಡನಗೌಡರ ರಂಗಮಂದಿರದಲ್ಲಿ ಸತತ ಎರಡು ದಿನಗಳ ಕಾಲ ಬಲು ಅದ್ಧೂರಿಯಾಗಿ ನಡೆಯಿತು.
ಈ ಸಂದರ್ಭದಲ್ಲಿ, ವಿವಿಧ ಹಲವಾರು ಕ್ಷೇತ್ರದ ಪ್ರಮುಖ ಗಣನೀಯ ಸಾಧನೆಗಾಗಿ ಉಡುಪಿ ಜಿಲ್ಲೆಯಿಂದ ಶಯದೇವಿಸುತೆ, ಮರವಂತೆ(ಜ್ಯೋತಿ ಜೀವನ್ಸ್ವರೂಪ್) ಅವರಿಗೆ “ಕರ್ನಾಟಕ ಸಾಧಕ ರತ್ನ” ಎಂಬ ಮಹೋನ್ನತ ಪ್ರಶಸ್ತಿ ಯನ್ನು ಬಸವ ಕಲ್ಯಾಣ ಸಂಸ್ಥಾನ ಗವಿಮಠದ ಸ್ವಾಮೀಜಿ ಪೂಜ್ಯ ಶ್ರೀ ಷ.ಬ್ರ ಡಾ. ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯ ಗುರುವರ್ಯರ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಸಕಲ ಗಣ್ಯಾತಿ-ಗಣ್ಯ ಮಹನೀಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು.
ಕಲಾರಾಧಕರು; ಕಲಾ ಪೋಷಕರೂ ಆದ ಶಯದೇವಿಸುತೆ ಮರವಂತೆಯವರು ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ, ಯಕ್ಷಗಾನ ಕ್ಷೇತ್ರದಲ್ಲಿ, ಪತ್ರಿಕೋದ್ಯಮ ಹಾಗೂ ಹಲವಾರು ಮಾಧ್ಯಮ ರಂಗ – ಹೀಗೆಯೇ, ಹಲವಾರು ವಿವಿಧ ಕ್ಷೇತ್ರದಲ್ಲಿ ಬಿಂಬಿಸಿದ ಇವರಲ್ಲಿ ಹುದುಗಿರುವ ಅಪಾರ ಕಲಾಪ್ರತಿಭೆಯ ನಿರಂತರ ಸೇವೆಗೆ, “ಸೃಜನಶೀಲ ಯುವ ಪ್ರತಿಭಾನ್ವಿತ ಲೇಖಕಿ”, “ವರ್ಷದ ಕನ್ನಡ ಬರಹಗಾರ ಪ್ರಶಸ್ತಿ”, “ರಂಗಸ್ಥಳ ರತ್ನ ಪ್ರಶಸ್ತಿ”, “ಕುಂದಶ್ರೀ ಪ್ರಶಸ್ತಿ”, “ವಿಶ್ವಕವಿ ಕುವೆಂಪು ಕಾವ್ಯ ಪುರಸ್ಕಾರ್”, “ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ”, “ಡಾ!! ಜಿ.ಡಿ ಜೋಶೀ ಗೌರವ ಪ್ರಶಸ್ತಿ”, “ಅತ್ಯುತ್ತಮ ಲೇಖಕಿ”, “ಅತ್ಯುತ್ತಮ ಅಂಕಣಕಾರ್ತಿ”, “ಅತ್ಯುತ್ತಮ ವರದಿಗಾರ್ತಿ”, “ಅತ್ಯುತ್ತಮ ಚಿತ್ರಕಥೆಗಾರ್ತಿ”, “ಹುಟ್ಟೂರ ಸಾಧಕ ಸಂಮ್ಮಾನ ಪ್ರಶಸ್ತಿ” ಹಾಗೂ, “ಮರವಂತೆಯ ಮಹಿಳಾ ಸಾಧಕಿ ಪ್ರಶಸ್ತಿ”, “ಸ್ಟೇಟ್ ಲೆವೆಲ್ ಅವಾರ್ಡ್”, “ಕನ್ನಡ ರಾಜ್ಯೋತ್ಸವ ಪ್ರಶಸ್ತಿ -2023, “ಕರುನಾಡ ಕಲಾ ಕೇಸರಿ; ಸಾಹಿತ್ಯ ರತ್ನ ಸಿರಿ” – ಎಂದೆಲ್ಲಾ ಹಲವೆಡೆ ಈಗಾಗಲೇ ಲಭಿಸಿರುವ ಸಾಕಷ್ಟು ಹಲವಾರು ಪ್ರಶಸ್ತಿ-ಪುರಸ್ಕಾರ; ಅಭಿನಂದನಾ-ಗೌರವ-ಸನ್ಮಾನ ಮನ್ನಣೆಗಳೆಲ್ಲಾ ಇವರ ಸ್ವಂತ ಪ್ರತಿಭೆಗೆ ಎಲ್ಲೆಡೆ ಸಿಕ್ಕಂತಹ ಪ್ರತ್ಯಕ್ಷ ಸಾಕ್ಷಿಗಳಾಗಿವೆ! ಸದ್ಯಕ್ಕೆ, ಇವರು ಕ.ಜಾ.ಪ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ನೇಮಕಗೊಂಡಿರುತ್ತಾರೆ.