Home Posts tagged #abhayachandra jain

ಪುತ್ತೂರಿನಲ್ಲಿ ಆಯೋಜನೆಗೊಳ್ಳಲಿದೆ ಬೃಹತ್ ಚುನಾವಣಾ ಪ್ರಚಾರ ಸಭೆ : ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ

ಲೋಕಸಭಾ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಜನಾರ್ದನ ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಉದ್ಘಾಟನೆಗೊಂಡಿತು.ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ,

ಕರಾವಳಿ ಭಾಗದಲ್ಲೂ ಕಾಂಗ್ರೆಸ್ ಗೆಲುವು ಖಚಿತ : ಕೆ.ಅಭಯಚಂದ್ರ ಜೈನ್ ವಿಶ್ವಾಸ

ಮೂಡುಬಿದಿರೆ: ಕಾಂಗ್ರೆಸ್ ಯಾವತ್ತಿಗೂ ಹರಿಯುವ ನದಿ. ಕರ್ನಾಟಕದಲ್ಲಿ ಕಾಂಗ್ರೆಸನ್ನು ನಿರ್ನಾಮ ಮಾಡುವುದಾಗಿ ಹೇಳಿದ್ದ ಬಿಜೆಪಿ ಇಂದು ಅಧಿಕಾರವನ್ನು ಕಳೆದುಕೊಂಡಿದೆ. ಜನಸಾಮಾನ್ಯರಿಗೆ ಸದಾ ಸ್ಪಂದಿಸುವ ಗುಣ ಹೊಂದಿರುವ ಕಾಂಗ್ರೆಸನ್ನು ನಿರ್ನಾಮ ಮಾಡಲು ಸಾಧ್ಯವೇ ಇಲ್ಲ. ಈ ಬಾರಿ ಸಂಸತ್ ಚುನಾವಣೆಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಈ ಮೂಲಕ ಕರಾವಳಿ ಭಾಗದಲ್ಲೂ ಕಾಂಗ್ರೆಸ್ ಗೆಲುವು ಪಡೆದುಕೊಳ್ಳಲಿದೆ ಎಂದು ಮಾಜಿ ಸಚಿವ

ಮೂಡುಬಿದಿರೆ: ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗಡೆ: ಕಾಂಗ್ರೆಸ್‌ನಿಂದ ಪ್ರತಿಭಟನೆ ಆಕ್ರೋಶ

ಮೂಡುಬಿದಿರೆ: ಲೋಕಸಭೆಯಲ್ಲಿ 400 ಸದಸ್ಯ ಬಲ ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆಂಬ ಹೇಳಿಕೆ ನೀಡಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಭಾವಚಿತ್ರಕ್ಕೆ ಪೊರಕೆಯಲ್ಲಿ ಹೊಡೆಯುವ ಮೂಲಕ ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ತಾಲೂಕು ಆಡಳಿತ ಸೌಧದ ಮುಂಭಾಗ ನಡೆದಿದೆ. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ನಮ್ಮ ದೇಶಕ್ಕೆ ಬೇಕಾದಂತಹ ಸಂವಿಧಾನವನ್ನು ಬರೆದವರು

ಮೂಡುಬಿದಿರೆ : ಸಹಕಾರಿ ಕ್ಷೇತ್ರಕ್ಕಿಳಿದ ಮಾಜಿ ಸಚಿವ ಅಭಯಚಂದ್ರ ಜೈನ್

ಮೂಡುಬಿದಿರೆ : ಕಳೆದ ಮೂರು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ವಿವಿಧ ಸಾಧನೆಗಳನ್ನು ಮಾಡಿ ಗುರುತಿಸಿಕೊಂಡಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಈ ಬಾರಿ ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿ ಚುನಾವಣೆಗೆ ಸ್ಪರ್ಧಿಸುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿಯ ನಿರ್ದೇಶಕ ಸ್ಥಾನಗಳಿಗೆ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭಯಚಂದ್ರ ಜೈನ್ ಕೆ. ಅವರು ಮೂಡುಬಿದಿರೆ ವಿಧಾನ ಸಭಾ

ಮೂಡುಬಿದಿರೆ: ಬಲಿಷ್ಠ ಭಾರತ ನಿರ್ಮಾಣಕ್ಕೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ : ಸಭಾಪತಿ ಯು.ಟಿ.ಖಾದರ್

ಮೂಡುಬಿದಿರೆ: ಬಲಿಷ್ಠ ಭಾರತ ನಿರ್ಮಾಣವಾಗಬೇಕಾದರೆ ತರಗತಿಯಲ್ಲಿ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಸಿಗಬೇಕು. ಶಿಕ್ಷಣ ಸಂಸ್ಥೆಗಳು ಸಮಾಜಕ್ಕೆ ಓರ್ವ ಉತ್ತಮವಾದ ಡಾಕ್ಟರ್, ಎಂಜಿನಿಯರ್, ಸಿ.ಎ ಹಾಗೂ ವಕೀಲರನ್ನು ಮಾತ್ರ ತಯಾರು ಮಾಡುವುದಲ್ಲ ಬದಲಾಗಿ ಎಲ್ಲಾ ಕ್ಷೇತ್ರಗಳನ್ನು ನಿಭಾಯಿಸಬಲ್ಲ ಓರ್ವ ಉತ್ತಮವಾದ ರಾಜಕರಣಿಯನ್ನು ನೀಡುವ ಶಕ್ತಿ ಕೇಂದ್ರಗಳಾಗಬೇಕು ಎಂದು ರಾಜ್ಯ ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಹೇಳಿದರು. ಅವರು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ

ಮೂಡುಬಿದಿರೆ: ಹಿರೇ ಅಮ್ಮನವರ ಬಸದಿ ಧಾಮ ಸಂಪ್ರೋಕ್ಷಣೆ-ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ: ಇಲ್ಲಿನ ಜೈನಪೇಟೆಯಲ್ಲಿರುವ ಹಿರೇ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರಗೊಳಿಸಲಾಗಿದ್ದು, ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ರಥೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೈನ ಮಠದಲ್ಲಿ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಂಗಳವಾರ ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಸ್ವಾಮೀಜಿ ಅವರು, ಹಿರೇ ಬಸದಿಯು ಅತ್ಯಂತ ಪ್ರಾಚೀನ ಬಸದಿಯಾಗಿದೆ. 24 ತೀರ್ಥಂಕರರ ಲೆಪ್ಪದ ಮೂರ್ತಿಗಳನ್ನು

ಮೂಡುಬಿದರೆ : 60ನೇ ಶ್ರೀ ಸಾರ್ವಜನಿಕ ಗಣೇಶೋತ್ಸವ : ಡಾ.ಎಂ. ಮೋಹನ್ ಅಳ್ವಾರಿಂದ ಲೋಗೋ ಅನಾವರಣ

ಮೂಡುಬಿದಿರೆ: 1964ರಲ್ಲಿ ಆರಂಭಗೊಂಡಿರುವ ಇಲ್ಲಿನ ಶ್ರೀ ಸಾರ್ವಜನಿಕ ಗಣೇಶೋತ್ಸವವು 60ನೇ ವರ್ಷದ ಸಂಭ್ರಮದಲ್ಲಿದ್ದು ಅದಕ್ಕಾಗಿ ಈ ವರ್ಷ ಹಬ್ಬವನ್ನು ವಿಶೇಷವಾಗಿ ಆಚರಿಸುವ ಉದ್ದೇಶವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಶನಿವಾರ ಲೋಗೋವನ್ನು ಅನಾವರಣಗೊಳಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಲೋಗೋ ಅನಾವರಣಗೊಳಿಸಿ ಮಾತನಾಡಿ ಮೂಡುಬಿದಿರೆಯು ಹಲವು ವಿಚಾರಗಳಲ್ಲಿ ಸಾಧನೆ ಮಾಡಿದೆ. ಇಲ್ಲಿನ ಸಾರ್ವಜನಿಕ ಗಣೇಶೋತ್ಸವಕ್ಕೆ ಅದರದ್ದೇ ಆದ

ಮೂಡುಬಿದಿರೆ : ಶಿಷ್ಯನ ಪರವಾಗಿ ಮಾಜಿ ಸಚಿವ ಜೈನ್ ಮತಯಾಚನೆ

ಮೂಡುಬಿದಿರೆ – ತನ್ನ ಶಿಷ್ಯ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಗುರುವಾರ ಪುರಸಭಾ ವ್ಯಾಪ್ತಿಯ ವಾರ್ಡ್ ನಂಬ್ರ 15ರ ಕೊಡಂಗಲ್ಲು ಪರಿಸರದ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಚುನಾವಣೆ ಪ್ರಣಾಳಿಕೆಯ 300 ಗ್ಯಾರಂಟಿ ಕಾರ್ಡ್ ಹಸ್ತಾಂತರಿಸಿದ ಅಭಯಚಂದ್ರ ಅವರು ಮಿಥುನ್ ರೈಯನ್ನು ಮರೆಯದಿರಿ ಎಂದರು. ವಾರ್ಡ್ ಸದಸ್ಯೆ ರೂಪಾ ಸಂತೋಷ್ ಶೆಟ್ಟಿ, ಪುರಸಭಾ ಸದಸ್ಯರಾದ ಸುರೇಶ್

ಮೂಡುಬಿದಿರೆ ಮೆಸ್ಕಾಂ ಬಳಿ ಅವೈಜ್ಞಾನಿಕ ವೃತ್ತ ತೆರವಿಗೆ ಆಗ್ರಹ

ಮೂಡುಬಿದಿರೆ-ವೇಣೂರು, ಮೂಡುಬಿದಿರೆ-ಬಿಸಿರೋಡನ್ನು ಸಂಧಿಸುವ ಮೆಸ್ಕಾಂ ಬಳಿ ರಾಜ್ಯ ಹೆದ್ದಾರಿಯಲ್ಲಿ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ವೃತ್ತ ಅವೈಜ್ಞಾನಿಕ ರೀತಿಯಲ್ಲಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿ ಸರ್ಕಲ್ ತೆರವುಗೊಳಿಸುವಂತೆ ಆಗ್ರಹಿಸಿದೆ. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಶಾಸಕರ ನಿಧಿಯಿಂದ ರೂ 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ವೃತ್ತ ಅವೈಜ್ಞಾನಿಕ ರೀತಿಯಲ್ಲಿದೆ.