Home Posts tagged #accident (Page 6)

ನೆಲ್ಲಿಕಾರಿನಲ್ಲಿ ಭೀಕರ ಅಪಘಾತ : ಮಗು ಸೇರಿ ಮೂರು ಮಂದಿ ಮೃತ್ಯು

ಮೂಡುಬಿದಿರೆ: ಬಸ್ಸಿಗೆ ಢಿಕ್ಕಿ ಹೊಡೆದ ತಾಲೂಕಿನ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಎಂಬಲ್ಲಿ ಇಂದು ಬೆಳಿಗ್ಗೆ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಒಂದೂವರೆ ವರ್ಷದ ಮಗು ಸಹಿತ ಮೂರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ

ಪುತ್ತೂರಿನ: ಬೈಕ್ ಸ್ಕೂಟರ್ ಮಧ್ಯೆ ಅಪಘಾತ: ಸ್ಕೂಟರ್ ಸವಾರ ಮೃತ್ಯು

ಪುತ್ತೂರು : ಬೈಕ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ಸ್ ನಿಲ್ದಾಣ ಕಟ್ಟಡದಲ್ಲಿರುವ ರೆಡ್ ಕ್ಲಬ್ ಪ್ರೀಮಿಯಮ್ ಬಟ್ಟೆ ಅಂಗಡಿಯ ಸಿಬ್ಬಂದಿ ನೌಷದ್ (20) ಮೃತಪಟ್ಟವರು. ಇವರು ಪುತ್ತೂರು ತಾಲೂಕು ಅರ್ಯಾಪು ಗ್ರಾಮದ ಸಂಪ್ಯದ ನಿವಾಸಿ ಅಬ್ದುಲ್ ಅಝೀಜ್ ಎಂಬವರ ಪುತ್ರ. ನೌಷದ್ ಅಕ್ಟಿವಾ ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ. ವಿಷಯ ತಿಳಿದ ಮೃತನ ಸ್ನೇಹಿತರು,

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸ ಮಜಲು ಎಂಬಲ್ಲಿ ಲಾರಿಯೊಂದು ಮಗುಚಿ ಬಿದ್ದು ಸಂಚಾರಕ್ಕೆ ತಡೆ ಉಂಟಾದ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿಯು ಹೊಸ ಮಜಲು ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು ಪ್ರಯಾಣಿಕರಿಗೆ ಅಡಚಣೆಯಾಗಿದೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಬಿದ್ದ ಪರಿಣಾಮ

ಮಂಗಳೂರು : ಬಸ್ಸಿನ ಓವರ್ ಟೇಕ್ ಭರದಲ್ಲಿ ಮೊಟ್ಟೆ ಸಾಗಾಟ ವಾಹನಕ್ಕೆ ಡಿಕ್ಕಿ,

ಮಂಗಳೂರು: ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ವೆಲೆನ್ಸಿಯಾದಲ್ಲಿ ನಡೆದಿದೆ. ಮಂಗಳಾದೇವಿ ಕಡೆಯಿಂದ ಬರುತ್ತಿದ್ದ ಎರಡು ಬಸ್ ಗಳು ವೆಲೆನ್ಸಿಯಾದ ಸರ್ಕಲ್ ಬಳಿ ತಲುಪಿದಾಗ ಬಸ್ ಓವರ್ ಟೇಕ್ ಮಾಡಲು ಮುಂದಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮೊಟ್ಟೆ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಸ್, ಮೊಟ್ಟೆ ಸಾಗಾಟದ ವಾಹನ ಡಿಕ್ಕಿ ಹೊಡೆದ ಪರಿಣಾಮ

ಉಳ್ಳಾಲ: ಸಂಚಾರಿ ಪೇದೆಗೆ ಕಾರು ಢಿಕ್ಕಿ ಹೊಡೆದು ಪರಾರಿ

ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಪೇದೆಗೆ ಅಪರಿಚಿತ ಕಾರು ಢಿಕ್ಕಿ ಹೊಡೆದು, ಅವರು ತಲೆಗೆ ಗಾಯಗೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲಬೈಲ್ ರಸ್ತೆಯಲ್ಲಿ ಸಂಭವಿಸಿದ್ದು, ಶಿವಮೊಗ್ಗ ನಿವಾಸಿ ಲೋಕೇಶ್ (35) ಗಾಯಾಳು ಪೇದೆ ಎಂದು ಗುರುತಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೈವೇ ಪ್ಯಾಟ್ರಲ್ ವಾಹನದಲ್ಲಿ ಚಾಲಕನಾಗಿದ್ದ ಇವರು ಉಳ್ಳಾಲಬೈಲ್ ಬಳಿ ತಪಾಸಣೆಗೈಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ.

ಪುತ್ತೂರು: ಅಪಘಾತದಲ್ಲಿ ಬೈಕ್ ಸವಾರ ಮೃತ್ಯು

ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್‌ಗೆ ಡಿಕ್ಕಿಯಾದ ಘಟನೆ ಸೆ.3ರಂದು ರಾತ್ರಿ ಪರ್ಲಡ್ಕ  ರಸ್ತೆಯಲ್ಲಿ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ವೀರಮಂಗಲದ ಭರತ್‌ರಾಜ್ ಗೌಡ ಎಂಬವರು ಮೃತಪಟ್ಟಿದ್ದಾರೆ. ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆಗೆಂದು ಬಂದಿದ್ದ ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಜಯದೀಪ್ ಅವರ ಪುತ್ರ ಧನುಷ್(24ವ) ಮತ್ತು ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ ಭರತ್ ರಾಜ್ ಗೌಡ(22ವ)ರವರು ಡ್ಯೂಕ್

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತ : ಪುತ್ತೂರಿನ ಉರ್ಲಾಂಡಿಯಲ್ಲಿ ನಡೆದ ಘಟನೆ

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಶುಂಠಿಕೊಪ್ಪದ ಚಂಗಪ್ಪ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಶ್ರೀ ಶರವು ಗಣೇಶ್ ಆಂಬ್ಯುಲೆನ್ಸ್ ನಲ್ಲಿ ಶುಂಠಿಕೊಪ್ಪಕ್ಕೆ ಕೊಂಡೊಯ್ಯುವಾಗ ಘಟನೆ ಸಂಭವಿಸಿದೆ. ಘಟನೆಯಲ್ಲಿ ಆಂಬ್ಯುಲೆನ್ಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮೃತರ ಪತ್ನಿ ಲಲಿತಾ ಹಾಗೂ ಇನ್ನೋರ್ವ ಮಹಿಳೆ ಇನ್ನೊಂದು

ಪುತ್ತೂರು : ಓಮ್ನಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ , ದ್ವಿಚಕ್ರ ವಾಹನ ಸವಾರನಿಗೆ ಗಾಯ

ಪುತ್ತೂರು ತಾಲ್ಲೂಕು ಬಪ್ಪಳಿಗೆಯ ಬಲ್ನಾಡ್ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ- ಆಕ್ಟಿವಾ ಸವಾರನಿಗೆ ಗಾಯ.ಪುತ್ತೂರು ತಾಲೂಕಿನ ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಪುತ್ತೂರು ಕಡೆಯಿಂದ ಬರುತ್ತಿದ್ದ ರಿಕ್ಷಾ ಒಂದನ್ನು ಹಿಂದಿಕ್ಕುವ ಭರದಲ್ಲಿದ್ದ ಆಕ್ಟಿವಾಗೆ ದಿಕ್ಕಿಯಾಗಿದೆ. ಘಟನೆಯಿಂದ

ಪಡುಬಿದ್ರಿ ಜಂಕ್ಷನ್‍ ಮೋಪೆಡ್ ಸವಾರನ ಮೇಲೆ ಮುಗುಚಿ ಬಿದ್ದ ಲಾರಿ : ಅಪಘಾತದಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಜಂಕ್ಷನ್ ನಲ್ಲಿ ನಡೆದಿದೆ.ಮೃತರನ್ನು ಕಂಚಿನಡ್ಕ ನಿವಾಸಿ ಶಂಸುದ್ದೀನ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿ ಪಡುಬಿದ್ರಿ ಜಂಕ್ಷನ್‍ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಮಗುಚಿಬಿತ್ತು. ಸ್ಥಳದಲ್ಲೇ ಮೃತಪಟ್ಟ ಶಂಶುದ್ದೀನ್ ಅವರ ಮೃತದೇಹವನ್ನು ಪೋಲಿಸರು ಸ್ಥಳೀಯರ

ಬೈಂದೂರಿನ ನಾವುಂದಲ್ಲಿ ಅಪಘಾತದಲ್ಲಿ ಮೂವರಿಗೆ ಗಾಯ ಒರ್ವನ ಸ್ಥಿತಿ ಗಂಭೀರ

ಬೈಂದೂರು: ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಸಂಭವಿಸಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಬಸ್‍ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿತು. ಕಾರು ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿತ್ತು. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಠಾಣೆ ಪಿ.ಎಸ್.ಐ ಪವನ್