Home Posts tagged #accident (Page 7)

ಮುಳ್ಳು ಹಂದಿಗೆ ಢಿಕ್ಕಿಯಾಗಿ ಕಾರು ಪಲ್ಟಿ

ರಸ್ತೆ ದಾಟುತ್ತಿದ್ದ ಮುಳ್ಳು ಹಂದಿಯೊಂದಕ್ಕೆ ಕಿಯಾ ಕಾರೊಂದು ಡಿಕ್ಕಿಯಾಗಿ ನಿಯಂತ್ರಣ ಕಳೆದು ಕೊಂಡು ಪಕ್ಕದ ತಗ್ಗಿನ ಪೊದೆಯೊಂದಕ್ಕೆ ಸಾಗಿ ಪಲ್ಟಿಯಾಗಿದ ಘಟನೆ ತಡರಾತ್ರಿ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗವಾಗಿ ಸಾಗುತ್ತಿದ್ದ ಮಂಗಳೂರು ನೊಂದಾಣಿ ಸಂಖ್ಯೆಯ ಕಿಯಾ ಕಾರು ತೆಂಕ ಎರ್ಮಾಳು ಗರೋಡಿ ಬಳಿ ಸಾಗುತ್ತಿದಂತೆ ಮಳ್ಳು ಹಂದಿಗೆ ಡಿಕ್ಕಿಯಾಗಿ

ಪುತ್ತೂರಿನ ಕೊಡನೀರು ಎಂಬಲ್ಲಿ ರಸ್ತೆ ಅಪಘಾತ : ದ್ವಿಚಕ್ರ ಸವಾರ ಮೃತ್ಯು

ಪುತ್ತೂರು – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಕೊಡನೀರು ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದ್ವಿ ಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನ .1 ರಂದು ನಡೆದಿದೆ.ಪೆರಮೊಗರಿನ ಕೋಳಿ ಅಂಗಡಿಯ ಸೋಮಶೇಖರ್ ರೈ ಮೃತಪಟ್ಟವರು.ಇವರು ಮೂಲತ: ಸವಣೂರು ಪುಣ್ಚಪ್ಪಾಡಿ ನಿವಾಸಿಯಾಗಿದ್ದು ಸದ್ಯ ಪೆರಮೊಗರಿನಲ್ಲಿ ವಾಸವಾಗಿದ್ದರು . ಇವರಿಗೆ ಪುಣ್ಚಪ್ಪಾಡಿಯಲ್ಲಿ ತೋಟವಿದ್ದು ಅಲ್ಲಿ ಕೆಲಸ ಮಾಡಿಸಿ ವಾಪಸ್ಸು ಪೆರಮೊಗರುವಿಗೆ

ಬಿ.ಸಿ. ರೋಡ್‍ನ ಕೊಡಂಗೆಯಲ್ಲಿ ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತ್ಯು

ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಕೈಕಂಬ ಸಮೀಪದ ಪರ್ಲಿಯಾ ಕೊಡಂಗೆ ಎಂಬಲ್ಲಿ ವೇಳೆ ನಡೆದಿದೆ. ಬಾಗಲಕೋಟ ಜಿಲ್ಲೆಯ ಜಾವೂರು ನಿವಾಸಿ ಬಾಲಪ್ಪ ಎ.ಜಾವೂರು ಮೃತಪಟ್ಟ ವ್ಯಕ್ತಿ.ಬಾಲಪ್ಪ ಅವರು ಇಲ್ಲಿನ ರಸ್ತೆ ಕಾಮಗಾರಿ ಗುತ್ತಿಗೆ ಸಂಸ್ಥೆಯೊಂದರಲ್ಲಿ ಕಳೆದ ಕೆಲ ವರ್ಷಗಳಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪರ್ಲಿಯಾ ಕೊಡಂಗೆ ಎಂಬಲ್ಲಿ ರಸ್ತೆ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದು ಪ್ರಸ್ತುತ ಕಾಮಗಾರಿ

ಎರಡು ದಿನಗಳ ಬಳಿಕ ನೀರುಪಾಲಾದ ಯುವಕನ ಮೃತದೇಹ ಪತ್ತೆ

ಕುಂದಾಪುರ: ಮೊವಾಡಿ ಸೇತುವೆ ಬಳಿ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. ಇಲ್ಲಿನ ತ್ರಾಸಿ ಸಮೀಪದ ಹೋಲಿಕ್ರಾಸ್ ನಿವಾಸಿ ಮಹೇಂದ್ರ (24) ಮೃತ ಯುವಕ. ಭಾನುವಾರ ಸಂಜೆ ಮೊವಾಡಿಯ ಸೌಪರ್ಣಿಕಾ ನದಿ ತೀರಕ್ಕೆ ಮಹೇಂದ್ರ, ಆಶಿಕ್ ಹಾಗೂ ಶರತ್ ತೆರಳಿದ್ದರು. ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಇನ್ನೋರ್ವ

ಕಾರಿನಡಿ ಬಿದ್ದ ಬಾಲಕ ಪವಾಡಸದೃಶ ಪಾರು

ಉಳ್ಳಾಲ : ಕಾರಿನಡಿಗೆ ಬಿದ್ದ ಬಾಲಕನೋರ್ವ ಪವಾಡಸದೃಶವಾಗಿ ಪಾರಾದ ಘಟನೆ ಬಂಟ್ವಾಳದ ಇರಾ ಬಳಿ ನಡೆದಿದೆ. ಘಟನೆ ಕುರಿತ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಾನಂದ್ ಎಂಬವರ ಪುತ್ರ ಮನೋಜ್ (12) ಗಾಯಾಳು ಬಾಲಕ. ಆಟವಾಡಲೆಂದು ಮನೆಯಿಂದ ಹೊರ ಓಡಿಬಂದ ಬಾಲಕ ರಸ್ತೆ ದಾಟುವಾಗ ಕಾರು ಆತನ ಮೇಲೆ ಹರಿದಿದೆ. ಕಾರಿನಡಿಗೆ ಬಾಲಕ ಬಿದ್ದು ಎಡಕಾಲು ಮುರಿತಕ್ಕೊಳಗಾಗಿದ್ದು, ಪ್ರಾಣಾಪಾಯದಿಂದ ಪವಾಡಸದೃಶವಾಗಿ ಪಾರಾಗಿದ್ದಾರೆ

ಉಳ್ಳಾಲದಲ್ಲಿ ಕಾರು ಚಾಲಕನ ಅವಾಂತರ: ಸರಣಿ ಅಪಘಾತ:ರಿಕ್ಷಾ ಚಾಲಕಗೆ ಗಾಯ

ಉಳ್ಳಾಲ: ಕಾರು ಚಾಲಕನ ಅವಾಂತರದಿಂದ ರಿಕ್ಷಾ ಸಹಿತ ಕಾರೊಂದು ಜಖಂಗೊಂಡು ಸರಣಿ ಅಪಘಾತ ನಡೆದು, ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಕುತ್ತಾರು ಮದನಿನಗರ ಸಮೀಪ ತಡರಾತ್ರಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಹೋಂಡ ಸಿವಿಕ್ ಕಾರೊಂದು ಧಾವಿಸಿ ಎದುರಿನಿಂದ ಬರುತ್ತಿದ್ದ ರಿಕ್ಷಾಗೆ ಢಿಕ್ಕಿ ಹೊಡೆದು ಬಳಿಕ ವೈದ್ಯ ವಿದ್ಯಾರ್ಥಿಗಳಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಚಾಲಕ ಬದ್ಯಾರು ನಿವಾಸಿ

ಸೈಕಲ್‌ಗೆ ಢಿಕ್ಕಿಯಾದ ಕಾರು: ಸೈಕಲ್ ಸವಾರ ಸಾವು

ಕುಂದಾಪುರ: ಸೈಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಕಾರೊಂದು ಢಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡು ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ಹೆಮ್ಮಾಡಿ ಸಮೀಪದ ಜಾಲಾಡಿಯಲ್ಲಿ ನಡೆದಿದೆ. ಹೆಮ್ಮಾಡಿಯ ಸಂತೋಷನಗರ ನಿವಾಸಿ ರಾಮ ಕುಲಾಲ್(60) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ.ರಾಮ ಕುಲಾಲ್ ಅವರು ಹೆಮ್ಮಾಡಿಯಿಂದ ತಮ್ಮ ಸೈಕಲ್ ನಲ್ಲಿ ತಲ್ಲೂರಿಗೆ ತೆರಳುತ್ತಿರುವ ಹೊತ್ತಿಗೆ ಈ ಅಪಘಾತ ನಡೆದಿದೆ. ಸೈಕಲ್ ಡಿವೈಡರ್

ಹುತಾತ್ಮರ ದಿನಾಚರಣೆ ಆಚರಿಸಿ ವಾಪಸ್ಸಾಗುತ್ತಿದ್ದಾಗ ಅಪಘಾತ: ರೈತ ಮುಖಂಡರಿಬ್ಬರು ಮೃತ್ಯು

ಹುತಾತ್ಮ ದಿನಾಚರಣೆಯ ಅಂಗವಾಗಿ ಐತಿಹಾಸಿಕ ನರಗುಂದ ಬಂಡಾಯದ ಹೋರಾಟ ಮುಗಿಸಿ ವಾಪಸ್ ಹಾಸನಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ ಮತ್ತು ಚನ್ನಪಟ್ಟಣ ರಾಮಣ್ಣನವರು ನಿಧನರಾಗಿದ್ದಾರೆ. ಚಿಕ್ಕಮಗಳೂರು ಬಳಿ ಅಪಘಾತ ಸಂಭವಿಸಿದ್ದು ತಕ್ಷಣವೇ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ.ಅವರೊಡನಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ರವಿಕಿರಣ್ ಪುಣಚರವರಿಗೆ 

ಸುಬ್ರಹ್ಮಣ್ಯದಲ್ಲಿ ಸರಕಾರಿ ಬಸ್-ಕಾರು ಮಧ್ಯೆ ಅಪಘಾತ

ಕಡಬ: ಸರಕಾರಿ ಬಸ್ ಹಾಗೂ ಕಾರೊಂದರ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಬಳಿ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಹಾಸನದವರಿದ್ದ ಕಾರು ಕೈಕಂಬ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಹಾಸನದ ಚಾಲಕ ಪುಟ್ಟರಾಜು, ಜಯಂತಿ, ಲೀಲಾ ಎಂಬವರು ಸಣ್ಣ ಪುಟ್ಟ

ವಿಟ್ಲದಲ್ಲಿ ಕಾಲೇಜ್ ಬಸ್ ಮತ್ತು ಬೈಕ್ ನಡುವೆ ಅಪಘಾತ

ವಿಟ್ಲ: ಮಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಮಹಿಳಾ ಸಿಬ್ಬಂದಿಗಳು ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಬಸ್ ರಸ್ತೆ ಬದಿಯ ಪ್ರಪಾತದ ಬಳಿ ಸಿಕ್ಕಿಹಾಕಿಕೊಂಡಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಮೂವರು ಸ್ಟಾಪ್ ನರ್ಸ್ ಮತ್ತು ಬೈಕ್ ಸವಾರ