Home Posts tagged #Arrest

ಮೂಡುಬಿದಿರೆ: ಲಾಡಿ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿದ ಬ್ಯಾನರ್ ಗೆ ಹಾನಿ – ಇಬ್ಬರ ಬಂಧನ

ಮೂಡುಬಿದಿರೆ: ಲಾಡಿ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಅಳವಡಿಸಿರುವ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿದಂತೆ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಪುರಸಭಾ ಸದಸ್ಯ ಇಕ್ಬಾಲ್ ಕರೀಂ ಅವರು ಲಾಡಿ ಶ್ರೀ ಚತುಮು೯ಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಹಾಕಿರುವ

ಸುಳ್ಯ : 24 ವರ್ಷದ ನಂತರ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಸುಳ್ಯ ಪೊಲೀಸ್ ಠಾಣಾ ಅಕ್ರ: 60/2002 ಕಲಂ: 457, 380 ಐಪಿಸಿ (LPC no. 04/2007)ರಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳಾದ V.T ಬಾಬು @ ಆಗಸ್ಟಿನ್ (55 ವರ್ಷ ) ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಮತ್ತು V.T.ರಾರಿ @ V. T ತೋಮಸ್ (52ವರ್ಷ )ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಎಂಬುವವರುಗಳನ್ನು ಕೇರಳದ ಕೊಟ್ಟಯಂ ಬಳಿ ಮಾನ್ಯ ಡಿವೈಎಸ್ಪಿ ಪುತ್ತೂರು ಉಪವಿಭಾಗ ಮತ್ತು ಮಾನ್ಯ ಸಿ ಪಿ […]

ಮೂಡುಬಿದಿರೆ: 25 ಗೂಡಂಗಡಿಗಳಿಂದ ಕಳವು ಗೈದ ಆರೋಪಿಗಳನ್ನು ಬಂಧಿಸಿದ ಮೂಡುಬಿದಿರೆ ಪೊಲೀಸರು

ಮೂಡುಬಿದಿರೆ: ಕಳೆದ 3 ವರುಷಗಳಿಂದ ವಿವಿಧ ಕಡೆಗಳಲ್ಲಿರುವ 25 ಗೂಡಂಗಡಿಗಳಿಂದ ಅಂದಾಜು 3,55,000/- ಮೌಲ್ಯದ ವಸ್ತುಗಳನ್ನು ಕಳವುಗೈದಿರುವ ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ನಿಡ್ಡೋಡಿಯ ನೀರುಡೆ ನಿವಾಸಿ ರೋಶನ್ ವಿಲ್ಸನ್ ಕ್ವಾಡ್ರಸ್, ಕೊಂಪದವು ನೆಲ್ಲಿ ತೀರ್ಥದ ನಿವಾಸಿ ನಿಶಾಂಕ್ ಪೂಜಾರಿ, ತೆಂಕು ಎಕ್ಕಾರು ಗ್ರಾಮದ ನಿವಾಸಿ ರೋಹಿತ್ ಮಸ್ಕರೇನಸ್ ಬಂಧಿತ ಕಳ್ಳರು. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಮುಲ್ಕಿ ಕ್ರಾಸ್

ಸುಬ್ರಮಣ್ಯ: ಆಂಜನೇಯ ದೇವಸ್ಥಾನ ಕಳ್ಳತನ ಪ್ರಕರಣ – ಆರೋಪಿ ಬಂಧನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಳಪಟ್ಟ ಸ್ಥಳೀಯ ಅಭಯ ಆಂಜನೇಯ ಗುಡಿ ದೇವಸ್ಥಾನದಲ್ಲಿ ಕಳವಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾದ 24 ಗಂಟೆಯೊಳಗೆ ಕಳ್ಳನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಧಾರವಾಡ ಮೂಲದ ವೀರಣ್ಣ ಗೌಡ (26ವ) ಕಳ್ಳತನ ಪ್ರಕರಣದಲ್ಲಿ ಬಂಧಿತನಾದ ಆರೋಪಿ.ದೇಗುಲದ ಪಾರ್ಕಿಂಗ್ ಜಾಗದಲ್ಲಿ ಸುತ್ತಾಡುತ್ತಿದ್ದ ಈತನನ್ನು ಎಸ್.ಐ ಕಾರ್ತಿಕ್.ಕೆ ನೇತೃತ್ವದ ಪೊಲೀಸರ ತಂಡ ಪತ್ತೆ ಹಚ್ಚಿದ್ದಾರೆ. ಜಾಗವೊಂದರ ಬಳಿ

ಮಂಗಳೂರು: ಸಿಸಿಬಿ ಕಾರ್ಯಾಚರಣೆ- ಅಕ್ರಮ ಪಿಸ್ತೂಲ್ ಹೊಂದಿದ ಇಬ್ಬರ ಸೆರೆ

ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡು ಕಾರಿನಲ್ಲಿ ಕುಳಿತು ಯಾವುದೋ ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ‌ ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು ಬಣ್ಣದ ಕಾರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿ ಯಾವುದೋ ದುಷ್ಕೃತ್ಯಕ್ಕೆ ಸಂಚು ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ

ಕೊಡಗು : SSLC ವಿದ್ಯಾರ್ಥಿನಿಯ ಕೊಲೆ ಪ್ರಕರಣ – ಆರೋಪಿಯ ಬಂಧನ

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಸುಳ್ಯ: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ-ಪ್ರಮುಖ ಆರೋಪಿ ಮುಸ್ತಾಫ ಪೈಚಾರ್ NIA ಬಲೆಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಹಾಗೂ ಇಲ್ಯಾಸ್ ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದ್ದು, ಆರೋಪಿಗಳಿಗೆ ಆಶ್ರಯ ನೀಡಿದ್ದ

ಮಂಗಳೂರು: ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ- ವಶಕ್ಕೆ ಪಡೆಯಲು SIT ಸಿದ್ಧತೆ

ಅಶ್ಲೀಲ ವಿಡಿಯೋ ಪ್ರಕರಣ ಆರೋಪದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದ್ದು, ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಣಾವಲಿರಿಸಲಾಗಿದೆ. ಪ್ರಜ್ವಲ್ ಪತ್ತೆಗಾಗಿ ಈಗಾಗಲೇ ಲುಕ್‌ಔಟ್ ನೋಟಿಸ್ ಕೂಡಾ ಜಾರಿಯಾಗಿರುವುದರಿಂದ ಪ್ರಜ್ವಲ್ ಭಾರತಕ್ಕೆ

ಕಾರ್ಕಳ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ : ಶಾಲಾ ಮುಖ್ಯೋಪಾಧ್ಯಾಯನ ಬಂಧನ 

ಸುಮಾರು 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬೋಳ ಗ್ರಾಮದ ಪಿಲಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಎ.6ರಂದು ಬಂಧಿಸಿದ್ದಾರೆ. ಬೋಳ ವಂಜಾರಕಟ್ಟೆ ನಿವಾಸಿ, ಇಚ್ಚೋಡಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ಯ(58) ಬಂಧಿತ ಆರೋಪಿ. ಈತ ಶಾಲೆಯ 13 ಮಕ್ಕಳಿಗೆ 2023ರ ಜೂ.5ರಿಂದ 2024ರ ಎ.3ರ ಮಧ್ಯಾವಧಿಯಲ್ಲಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಅಲ್ಲದೆ

ಕುಂದಾಪುರ: ಅಡಿಕೆ ಕಳವು ಪ್ರಕರಣದ ಮೂವರ ಬಂಧನ

ಹಲವು ಕಡೆಗಳಲ್ಲಿ ನಡೆದ ಅಡಿಕೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಂದಾಪುರ ಗುಲ್ವಾಡಿ ಗ್ರಾಮದ ಅಮೀರ್ ಝೈನುದ್ದೀನ್ ಭಟ್ಕಳ ಬಿಳಲಖಂಡ ಗ್ರಾಮದ ಮುನಾವರ್,ಭಟ್ಕಳ ಉಸ್ಮಾನ್ ನಗರದ ನಿಸಾರ್ ಆಸೀಫ್ ಅನ್ನಾರ್ ಬಂಧಿತ ಆರೋಪಿಗಳು. ಇವರು ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿ ಎಂಬಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ