ಬೆಳ್ತಂಗಡಿ ತಾಲೂಕಿನ ಮೊಗ್ರೂ ಗ್ರಾಮದ ಮುಗೇರಡ್ಕ ಎಂಬಲ್ಲಿ ನಡೆಯುವ ಅಕ್ರಮ ಮರಳು ದಂಧೆ ಮತ್ತು ನೀರಾವರಿ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕರಾದ ವಸಂತ ಬಂಗೇರ ಹೇಳಿದರು. ಅವರುಬೆಳ್ತಂಗಡಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಮುಗೇರಡ್ಕದಲ್ಲಿ ನಡೆಯುವ ಅಕ್ರಮ ಮರಳು ದಂಧೆ ಮತ್ತು 250 ಕೋಟಿಯ ಕಾಮಗಾರಿಯಲ್ಲಿ
ಅಡಿಕೆಯ ಬಗ್ಗೆ ಹಗುರವಾಗಿ ಮಾತನಾಡಿದ ಗೃಹ ಸಚಿವರ ವಿರುದ್ಧ ಗರಂ ಆದ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಅವರ ಮಾತು ಖಂಡನಾರ್ಹ ಎಂದು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಗೃಹ ಸಚಿವರು ಆ ರೀತಿ ಹೇಳಬಾರದಿತ್ತು ಅಡಿಕೆ ಬೆಳೆಗಾರರ ಬಗ್ಗೆ ಕೀಳಾಗಿ ಮಾತನಾಡಬಾರದು ಅಡಿಕೆ ಬೆಳೆಗಾರರು ಹೆದರುವಂಥ ಅವಶ್ಯಕತೆ ಇಲ್ಲ ಅಡಿಕೆಗೆ ಬೆಲೆ ಯಾವತ್ತೂ ಕಡಿಮೆಯಾಗುವುದಿಲ್ಲ ಎಂದು ಅಡಿಕೆ ಬೆಳೆಗಾರರಿಗೆ ಧೈರ್ಯ ಹೇಳಿದರು ಈ ಸಂದರ್ಭದಲ್ಲಿ ಮಾಜಿ ಸಚಿವ
ಬೆಳ್ತಂಗಡಿ : ಉಪ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರಿಗೆ ಸಂಘಪರಿವಾರಗಳ ಬೆದರಿಕೆ ಇರುವ ಕಾರಣ ಅವರಿಗೆ ರಕ್ಷಣೆಗೆ ಆಗ್ರಹಿಸಿ ಹಾಗೂ ಸಂಘಪರಿವಾರದ ಹಿಂದುತ್ವವಾದಿಗಳು ಜಾತ್ಯಾತೀತವಾದ ಹಿಂದು ಧರ್ಮದ ಮಾನ ತೆಗೆಯವುದರ ವಿರುದ್ದ, ಹಿಂದುಗಳ ದೇವರ ಸ್ಮರಣೆಯ ಭಾಗವಾದ ಭಜನೆಯನ್ನು ಗೇಲಿ ಮಾಡುವಂತೆ ಪೋಲೀಸ್ಟೇಶನ್ ಎದುರು ಭಜನೆ ನಡೆಸಿ ಹಿಂದುಗಳಿಗೆ ಅವಮಾನಿಸಿದ ಸಂಘಪರಿವಾರದ ವಿರುದ್ದ ಹಾಗೂ ಹಿಂದುಳಿದ , ದಲಿತ ವರ್ಗದವರ ಧ್ವನಿ ಅಡಗಿಸುವ ಕುತಂತ್ರ ನಡೆಸುವ
ಬೆಳ್ತಂಗಡಿ ತಾಲೂಕಿನ ಶಿಬಾಜೆ ಕುರುಂಜಿ ಗ್ರಾಮದ ತೋಟದ ಕಾರ್ಮಿಕನಾಗಿ ದುಡಿಯುತ್ತಿದ್ದ ದಲಿತ ಸಮುದಾಯಕ್ಕೆ ಸೇರಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಗೈದಿರುವ ಆರೋಪಿಗಳ ಮೇಲೆ ಕೊಲೆ, ದರೋಡೆ, ಹಲ್ಲೆ, ದಲಿತ ದೌರ್ಜನ್ಯ ದಾಖಲಾದರೂ ರಾಜಕೀಯ ಒತ್ತಡಕ್ಕೆ ಒಳಗಾದ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸದೆ ರಕ್ಷಣೆಗೆ ಮುಂದಾಗಿರುವ ಘಟನೆ ನಡೆದಿದೆ. ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕ್ರಮ ಜರುಗಿಸಬೇಕೆಂದು ಮೊಗೇರ ಸಂಘ ಮತ್ತು ದಲಿತ ಸಂಘಗಳು ಒತ್ತಾಯಿಸಿವೆ. ಈ
ಇದೇ ತಿಂಗಳ 17 ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ ಎಂದು ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಮಾದ್ಯಮದ ಜೊತೆ ಮಾತನಾಡಿ ಈ ತಿಂಗಳ 17ರಂದು ವಸಂತ ವಿನ್ಯಾಸ ಪುಸ್ತಕ ಬಿಡುಗಡೆ ಗೊಳಿಸಿ ನಂತರ ಕಾಂಗ್ರೆಸ್ ವತಿಯಿಂದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು.ಬೆಳ್ತಂಗಡಿ ಕಾಂಗ್ರೆಸ್ ಕಾರ್ಯಕರ್ತರ ಹುರಿದುಂಬಿಸಲು ಪಕ್ಷ ಬಲವರ್ಧನೆ ಮತ್ತು ಪಕ್ಷ
ಬೆಳ್ತಂಗಡಿ: ಆಟೋ ಮತ್ತು ಸ್ಕೂಟರ್ ಪರಸ್ಪರ ಢಿಕ್ಕಿ ಹೊಡೆದು ಪ್ರಗತಿಪರ ಕೃಷಿಕರೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿಯ ಕಾಶಿಪಟ್ಟ ಗ್ರಾಮದಲ್ಲಿ ನಡೆದಿದೆ.ಕೊಕ್ರಾಡಿ- ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಹಂಬಡ ನಿವಾಸಿ,ನಿತ್ಯಾನಂದ ಪೂಜಾರಿ (48) ಮೃತಪಟ್ಟ ದುರ್ದೈವಿ. ನಿತ್ಯಾನಂದ ಪೂಜಾರಿ ಅವರು ಶಿರ್ತಾಡಿ ಕಡೆಯಿಂದ ಪೆರಾಡಿಯತ್ತ ಸ್ಕೂಟರ್ನಲ್ಲಿ ಸಾಗುತ್ತಿದ್ದರು. ವಿರುದ್ಧ
ಬೆಳ್ತಂಗಡಿ : ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಕನ್ನಡ ಚಿತ್ರ ನಟ ಶಿವರಾಜ್ ಕುಮಾರ್ ಅವರು ಕುಟುಂಬ ಸಹಿತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾಜ್ ಕುಮಾರ್ ಕುಟುಂಬ ಅಗಮಿಸಿದ್ದು ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ
ವಕೀಲರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ವಕೀಲರ ಸಂಘದವರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ.ಎಸ್. ಅವರು, ವಕೀಲರ ಮನೆಗೆ ಬಂದು ಪೊಲೀಸರು ಹಲ್ಲೆ ಮಾಡಿರುವುದು ಖಂಡನೀಯ, ಹಲ್ಲೆಗೈದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಲ್ಲದೆ ಪುಂಜಾಲಕಟ್ಟೆ ಲೀಸ್ ಉಪನಿರೀಕ್ಷಕರನ್ನು ಕೂಡಲೇ ಅಮಾನತು ಮಾಡಬೇಕು ಇಲ್ಲದೆ ಹೋದರೆ ಮುಂದಕ್ಕೆ ಉಗ್ರವಾದ ಹೋರಾಟ ಮಾಡುವುದಾಗಿ ಹೇಳಿದರು.
ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢೀಕರಿಸಲ್ಪಟ್ಟಿಲ್ಲ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ. ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ, ಭಾರೀ ಸ್ಫೋಟದ ಸದ್ದು ಕೇಳಿಸಿದೆ ಎನ್ನುವ ವದಂತಿ ಹರಡಿದ ಹಿನ್ನೆಲೆಯಲ್ಲಿ
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್ ಅವರು ಡಿ. ವೀರೇಂದ್ರ ಹೆಗ್ಗಡೆಯಾಗಿ 1964ರ ಅ. 24ರಂದು ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ