Home Posts tagged #belthangadi (Page 5)

ಬೆಳ್ತಂಗಡಿ: ಸ್ವರಾಜ್ ಆತ್ಮಹತ್ಯೆಗೆ ಲೋನ್ ಆ್ಯಪ್ ಕಿರುಕುಳ ಕಾರಣವೇ?

ಬೆಳ್ತಂಗಡಿಯ ಪುದುವೆಟ್ಟುನಲ್ಲಿ ಗುರುವಾರ ಕಬಡ್ಡಿ ಆಟಗಾರ, 24ರ ಹರೆಯದ ಸ್ವರಾಜ್ ಆತ್ಮಹತ್ಯೆ ಮಾಡಿಕೊಳ್ಳಲು ಲೋನ್ ಆ್ಯಪ್ ಕಿರುಕುಳವೇ ಕಾರಣ ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಜಿಲ್ಲಾ ಮಟ್ಟದ ಕಬಡ್ಡಿ ಆಟಗಾರ, ಉಜಿರೆಯ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಸ್ವರಾಜ್ ನಿನ್ನೆ ಬೆಳ್ತಂಗಡಿಯ ಪುದುವೆಟ್ಟುವಿನಲ್ಲಿರುವ ತನ್ನ ಮನೆಯ ಸ್ನಾನದ ಕೊಠಡಿಯಲ್ಲಿ

ಬೆಳ್ತಂಗಡಿ: ಕಬಡ್ಡಿ ಆಟಗಾರ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಪುದುವೆಟ್ಟು ಎಂಬಲ್ಲಿ ನಡೆದಿದೆ.ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24 ) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು, ಇಂದು ಪುದುವೆಟ್ಟುವಿನಲ್ಲಿದ್ದ ಅವರ ಹಳೆಮನೆಯ ಸ್ನಾನಗೃಹದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅತ್ಯುತ್ತಮ ಕಬಡ್ಡಿ ಆಟಗಾರರಾಗಿದ್ದ ಇವರು ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ

ಬೆಳ್ತಂಗಡಿ || ರಾಜ್ಯ ಸರ್ಕಾರದ ಜನಪರ ಯೋಜನೆ ಜನಸಾಮಾನ್ಯರಿಗೆ ತಲುಪಬೇಕು : ಸಚಿವ ಶರಣಬಸಪ್ಪ ದರ್ಶನಾಪೂರ

ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಬೇಕು. ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಯಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡುತ್ತಿದೆ ಎಂದು ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭ ಕಾರ್ಯಕರ್ತರನ್ನು ಉದ್ದೇಶಸಿ ಮಾತನಾಡಿದರು. ಬಳಿಕ ಸಚಿವರು ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು.

ಧರ್ಮಸ್ಥಳ: ನೇತ್ರಾವತಿ ನದಿಯ ಅಂಬ್ಯ ದಡದಲ್ಲಿ ವ್ಯಕ್ತಿಯ ಶವ ಪತ್ತೆ

ಧರ್ಮಸ್ಥಳದ ನೇತ್ರಾವತಿ ನದಿಯ ತೀರದಲ್ಲಿ ಅನಾಥ ಶವ ಪತ್ತೆಯಾದ ಘಟನೆ ನಡೆದಿದೆ. ಸ್ಥಳೀಯ ವ್ಯಕ್ತಿಯೊಬ್ಬರು ನದಿಯಲ್ಲಿ ಮೃತದೇಹ ಕಂಡು ಧರ್ಮಸ್ಥಳ ಶೌರ್ಯ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿಯನ್ನು ನೀಡಿದ್ದರು. ಸ್ಥಳಕ್ಕೆ ಬಂದ ತಂಡದವರು ತಕ್ಷಣ ಧರ್ಮಸ್ಥಳ ಪೊಲೀಸರಿಗೆ ಮಾಹಿತಿಯನ್ನು ನೀಡಿದರು. ಧರ್ಮಸ್ಥಳ, ಬೆಳಾಲು, ಉಜಿರೆಯ ವಿಪತ್ತು ತಂಡದ ಸದಸ್ಯರು ಶವವನ್ನು ಮೇಲಕ್ಕೆತ್ತಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಿದರು. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲ್ಯಾಡಿ: ಬೈಕ್ ಮತ್ತು ಕಾರುಗಳ ಮಧ್ಯೆ ಅಪಘಾತ – ಗಂಭೀರ ಗಾಯಗೊಂಡ ಬೈಕ್ ಸವಾರ ತಾ.ಪಂ ಮಾಜಿ ಸದಸ್ಯ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಮಧ್ಯೆ ನೆಲ್ಯಾಡಿ ಎಚ್‍ಪಿ ಪೆಟ್ರೋಲ್ ಬಂಕ್ ನ ಬಳಿ ಆಲ್ಟೊ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಕಾಲಿಗೆ ತೀವ್ರವಾದ ಗಾಯವಾಗಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ನೆಲ್ಯಾಡಿಯಿಂದ ಮಂಗಳೂರಿಗೆ ತೆರಳುತ್ತಿರುವ ಆಲ್ಟೊ ಕಾರು ಹಾಗೂ ಪೆಟ್ರೋಲ್ ಬಂಕ್ ನಿಂದ ಪೆಟ್ರೋಲ್ ಅನ್ನು

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಶರಣಬಸಪ್ಪ ದರ್ಶನಾಪುರ ಭೇಟಿ, ಪೂಜೆ ಸಲ್ಲಿಕೆ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಭೇಟಿ ನೀಡಿದರು. ಶ್ರೀ ಮಂಜುನಾಥ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಶ್ರಾವಣ ಮಾಸದ ಶುಭ ಸೋಮವಾರದಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ಶ್ರೀ ಮಂಜುನಾಥ ದೇವರು ರಾಜ್ಯದ ಜನರಿಗೆ ಸುಭೀಕ್ಷೆಯನ್ನು ತರಲಿ ಎಂದರು.

ನೆಲ್ಯಾಡಿ: ಪಡುಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ವಾಲಿಬಾಲ್ ಪಂದ್ಯಾಟ

ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರಕಾರಿ ಪ್ರೌಢಶಾಲೆ ಪಡುಬೆಟ್ಟು ನೆಲ್ಯಾಡಿ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಯಾಕೂಬ್ ಯು.,ಯಾನೆ ಸಲಾಂ ಬಿಲಾಲ್ ಉದ್ಘಾಟಿಸಿದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಟಿ.ಕ್ರೀಡಾಂಗಣ ಉದ್ಘಾಟಿಸಿದರು.

ಬೆಳ್ತಂಗಡಿ: ಪಟ್ರಮೆ ಮೀಸಲು ಅರಣ್ಯದಲ್ಲಿ ಕಡವೆ ಬೇಟೆ- ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿದ ಮೂವರನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಬಂಧಿಸಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ. ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಸಂಕೇಶ ನಿವಾಸಿ ಕೊಟ್ಯಪ್ಪ ಗೌಡ, ಪುನೀತ್ ಮಣಿಯೇರು, ಎಸ್.ಜೆ.ಸುದೇಶ ಸಂಕೇಶ ಬಂಧಿತ ಆರೋಪಿಗಳು. ಲೋಕೇಶ್ ಸಂಕೇಶ ಎಂಬಾತ ಕಾಡಿನಲ್ಲಿ ಪರಾರಿಯಾಗಿದ್ದು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳಿಂದ ಕಡವೆಯ ಮೃತ ದೇಹ ಮತ್ತು

ಕೌಕ್ರಾಡಿ ಗ್ರಾಮದ ಮೂಲಕ ನೆಲ್ಯಾಡಿ ಪೇಟೆಯನ್ನು ಸಂಪರ್ಕಿಸುವ ಪುತ್ಯೆ ರಸ್ತೆಗಿಲ್ಲವೇ ದುರಸ್ತಿ ಭಾಗ್ಯ?

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಿಂದ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮೂಲಕ ನೆಲ್ಯಾಡಿ ಪೇಟೆಯನ್ನು ಸಂಪರ್ಕಿಸುವ ಪುತ್ಯೆ ಪ್ರದೇಶದ 800 ಮೀಟರ್ ರಸ್ತೆಗೆ ಡಾಂಬರು ಅಥವಾ ಕಾಂಕ್ರೀಟ್ ಕಾಣದೆ ದಶಕಗಳ ಕಾಲವೇ ಸಂದಿದ್ದು ಸಂಚಾರಕ್ಕೆ ಆಯೋಗ್ಯವಾಗಿದೆ. ದಿನಂಪ್ರತಿ ನೂರಾರು ನೌಕರರು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಶ್ರೀ ಕ್ಷೇತ್ರ ಕೊಕ್ಕಡ, ಸೌತಡ್ಕ, ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಪ್ರಯಾಣಿಸುವ ಭಕ್ತರೂ ಕೂಡ ಈ ರಸ್ತೆ ಮೂಲಕವೇ ಪ್ರಯಾಣಿಸುತ್ತಿದ್ದಾರೆ. ಆದರೆ

ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲೋಕೇಶ್ ಬಾಣಜಾಲು, ಉಪಾಧ್ಯಕ್ಷರಾಗಿ ವನಿತಾ ಎಂ.ಆಯ್ಕೆ

ನೆಲ್ಯಾಡಿ: ಕೌಕ್ರಾಡಿ ಗ್ರಾ.ಪಂ.ನ 2ನೇ ಅವಧಿಗೆ ಅಧ್ಯಕ್ಷರಾಗಿ ಲೋಕೇಶ್ ಬಾಣಜಾಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವನಿತಾ ಎಂ.ಆಯ್ಕೆಯಾಗಿದ್ದಾರೆ. ಇಬ್ಬರೂ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದಾರೆ.