ಅಗತ್ಯ ವಸ್ತುಗಳು ಮತ್ತು ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಆರಂಭಿಸಿರುವ ಕಾಂಗ್ರೆಸ್, ವಿಧಾನಸೌಧಕ್ಕೆ ಎತ್ತಿನ ಬಂಡಿ ಪ್ರಯಾಣ ಆರಂಭಿಸಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಎತ್ತಿನ ಬಂಡಿಯಲ್ಲಿ ವಿಧಾನಸೌಧದತ್ತ ತೆರಳಿದರು. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ
ಬೆಂಗಳೂರು: ಈಗ ಹೆಚ್ಚು ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವ ಕಾರಣ ಎಲೆಕ್ಟ್ರಿಕ್ ರಿಚಾರ್ಜ್ ಸೆಂಟರ್ಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಶ್ರೀ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಇಂದು ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಲು ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ
ಬೆಂಗಳೂರು: ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕ, ಗಾಯತ್ರಮ್ಮ ,ಕಿರಿಯ ಸಹಾಯಕಿ ಹಾಗೂ ಸುಜಾತಮ್ಮ, ಕಿರಿಯ ಸಹಾಯಕಿ ,ಈ ಮೂವರು ಅಮಾನತಿ ಗೊಳಗಾದ ಸಿಬ್ಬಂದಿ ಯಾಗಿದ್ದಾರೆ. ಇವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ
ಬೆಂಗಳೂರು, ಆ 31; ಕೋವಿಡ್ ಸಂಕಷ್ಟದಿಂದ ಜನತೆ ಹೊರ ಬರುತ್ತಿರುವ ಸಂದರ್ಭದಲ್ಲೇ ಈ ಬಾರಿ ಗೌರಿ – ಗಣೇಶ ಹಬ್ಬಕ್ಕಾಗಿ ವಿಶೇಷವಾಗಿ ಯಲಹಂಕದ ಜಕ್ಕೂರಿನ ಮಧುರ ಮಿಲನ ಕಲ್ಯಾಣ ಮಂಟಪದಲ್ಲಿ ಸೆಪ್ಟೆಂಬರ್ 3 ರಿಂದ 5 ರ ವರೆಗೆ ಮಹಿಳೆಯರಿಂದಲೇ ವಿಶೇಷ ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ಈ ಬಾರಿ ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಲು ಎಲ್ಲೆಡೆ ಸಿದ್ಧತೆಗಳು ನಡೆಯುತ್ತಿದ್ದು, ಹಬ್ಬಕ್ಕೆ ಹೊಳಪು ಮತ್ತು ಮೆರಗು ನೀಡಲು ಮಹಿಳೆಯರಿಂದಲೇ ವಿಶೇಷ ಆಭರಣ ಮೇಳ
ಬಂಟ್ವಾಳ: ಶಾಸಕ ರಾಜೇಶ್ ನಾಕ್ ನೇತೃತ್ವದಲ್ಲಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಅವರಿದ್ದ ನಿಯೋಗ ಬುಧವಾರ ಬೆಂಗಳೂರಿನ ಕಚೇರಿಯಲ್ಲಿ ರಾಜ್ಯ ಪ್ರಾಥಮಿಕ ಹಾಗೂ ಪೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರನ್ನು ಭೇಟಿ ಮಾಡಿತು. ಕೋವಿಡ್ ಕಾರಣದಿಂದಾಗಿ ಸ್ಥಗಿತಗೊಂಡಿರುವ ಶಾಲೆಗಳನ್ನು ಒಂದನೇ ತರಗತಿಯಿಂದಲೇ ಆರಂಭಿಸಬೇಕು ಎನ್ನುವ ನಿಯೋಗದ ಮನವಿಗೆ ಸ್ಪಂದಿಸಿದ ಸಚಿವರು 9 ಮತ್ತು 10ನೇ ತರಗತಿಗಳು ಆರಂಭಗೊಂಡ ಬಳಿಕ ಎರಡು ದಿನದಲ್ಲಿ
ಬೆಂಗಳೂರು: ರಾಮಯ್ಯ ಎವುಲೂಟ್, ಗೋಕುಲ ಶಿಕ್ಷಣ ಸಂಸ್ಥೆ ಹಾಗೂ ರಾಮಯ್ಯ ಸಮೂಹ ಸಂಸ್ಥೆಗಳ ನೆರವಿನಿಂದ ನಾವೀನ್ಯತೆ, ಭವಿಷ್ಯದ ಉತ್ಪನ್ನಗಳ ಉತ್ಪಾದನೆ, ಮುಂದಿನ ತಲೆಮಾರು ಬಳಕೆಯ ತಂತ್ರಜ್ಞಾನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ 24 ನವೋದ್ಯಮಗಳ [ಸ್ಟಾರ್ ಸ್ಟಾರ್ಟ್ ಅಪ್ ಗಳು] ಅಭ್ಯುದಯಕ್ಕಾಗಿ ತಲಾ 50 ಲಕ್ಷ ರೂಪಾಯಿ ನೆರವು ನೀಡಿ ಗೌರವಿಸಲಾಯಿತು. ಮತ್ತೀಕೆರೆಯ ಎಂ.ಎಸ್.ಆರ್.ಟಿ ಕ್ಯಾಂಪಸ್ ನಲ್ಲಿರುವ ಆಡಿಟೋರಿಯಂನಲ್ಲಿ ನವೋದ್ಯಮಗಳಿಗೆ
ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನಕ್ಕೆ ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಚಾಲನೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎನ್.ಇ.ಪಿ ಸಹಾಯವಾಣಿ, ಉನ್ನತ ಶಿಕ್ಷಣ ಅಂತರಾಷ್ಟೀಕರಣ , 2021- 22 ನೇ ಸಾಲಿಗೆ ಉನ್ನತ ಶಿಕ್ಷಣಕ್ಕೆ ಪ್ರವೇಶಾತಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು.
ಕು. ಅಮನ, 8 ನೇ ತರಗತಿ, ಬಿಷಪ್ ಕಾಟನ್ ಗಲ್ರ್ಸ್ ಸ್ಕೂಲ್, ಬೆಂಗಳೂರಿನಲ್ಲಿ ಓದುತ್ತಿದ್ದು, ಪ್ರತಿಷ್ಠಿತ ‘ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್’ ನಲ್ಲಿ “ಕಿರಿಯ ಕವಯಿತ್ರಿ” ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ “ಗ್ರ್ಯಾಂಡ್ ಮಾಸ್ಟರ್” ಆಗಿ ದಾಖಲಾಗಿದೆ. ವಿವರಗಳು ಹೀಗಿವೆ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್: ಅತ್ಯಂತ ಕಿರಿಯ ಕವಯಿತ್ರಿ ಎಂಬ ದಾಖಲೆಯನ್ನು ಬೆಂಗಳೂರಿನ ಕು. ಅಮನ (ಜನನ ಜೂನ್ 20, 2008 ರಂದು) ಮಾಡಿದ್ದಾರೆ. ಅವರು 61 ಕವನಗಳ
ಬೆಂಗಳೂರು ಆಗಸ್ಟ್ 11-ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ, ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರೂ ಸಹ ಪಾಲುಗೊಳ್ಳಲು ಸಾಧ್ಯವಾಗುತ್ತದೆ ಎಂದು ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ
ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸ ಎದುರು ಇಂದು ಮಹಿಳೆಯೊಬ್ಬರು ಏಕಾಂಗಿ ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದಾರೆ.ಡಾ.ಗಿರಿಜಾ ಎಂಬವವರು ಪ್ರತಿಭಟನೆ ನಡೆಸಿದ್ದು, ಮಾಣಿಕ್ ಶಾ ಪರೇಡ್ ಮೈದಾನದ ನಿರೂಪಕರ ಬದಲಾವಣೆ ಮಾಡಲು ಈ ವೇಳೆ ಆಗ್ರಹಿಸಿದ್ದಾರೆ. ಪ್ರತಿ ಸರ್ಕಾರಿ ಕಾರ್ಯಕ್ರಮಕ್ಕೆ ಇಬ್ಬರೇ ನಿರೂಪಕರಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ಕನ್ನಡದಲ್ಲಿ ಸಾಕಷ್ಟು ಉತ್ತಮವಾದ ನಿರೂಪಕರಿದ್ದಾರೆ. ಈಗಿದ್ದರೂ ಯಾವ ಕಲಾವಿದರಿಗೂ ಅವಕಾಶ ಸಿಗುತ್ತಿಲ್ಲ. ಇದೇ ರೀತಿ