ಸ್ವಾತಂತ್ರ್ಯ ಹೋರಾಟಗಾರ, ಅಪ್ರತಿಮ ಕ್ರಾಂತಿಕಾರಿ ಭಗತ್ ಸಿಂಗ್ ಮತ್ತಾತನ ಸಂಗಾತಿ ರಾಜ್ ಗುರು, ಸುಖದೇವರಂತಹ ಕ್ರಾಂತಿಕಾರಗಳ ಆಶಯ ಇವತ್ತಿಗೂ ಈಡೇರಲಿಲ್ಲ. ಸ್ವಾತಂತ್ರ್ಯ ಅಂದರೆ ಕೇವಲ ಯಜಮಾನರ ಬದಲಾವಣೆಯಲ್ಲ ಬದಲಾಗಿ ಶೋಷಣೆರಹಿತ ಸಮಾಜ ಕಟ್ಟುವುದು ಭಗತ್ ಸಿಂಗರ ಕನಸಾಗಿತ್ತು ಎಂದು ಡಿವೈಎಫ್ಐ ದ.ಕ ಜಿಲ್ಲಾ ಮುಖಂಡರಾದ ಶ್ರೀನಾಥ್ ಕುಲಾಲ್ ಇಂದು 23-3-2023
ಸ್ವಾತಂತ್ರ್ಯ ಚಳುವಳಿಯ ಧ್ರುವತಾರೆಗಳಾದ ಶಹೀದ್ ಭಗತ್ ಸಿಂಗ್ ಮತ್ತು ಅವರ ಸಂಗಾತಿಗಳಾದ ರಾಜ್ ಗುರು, ಸುಖದೇವ್ ಅವರು ಬ್ರಿಟಿಷರ ನೇಣುಗಂಬಕ್ಕೆ ನಗು ನಗುತ್ತಲೇ ಏರಿದ ಹುತಾತ್ಮರಾದ ಕ್ರಾಂತಿಕಾರಿಗಳ ಬಲಿದಾನವನ್ನು ನೆನಪಿಸಿ ಡಿವೈಎಫ್ಐ ಸುರತ್ಕಲ್ ಘಟಕದ ಆಶ್ರಯದಲ್ಲಿ ಕಾನ ಜಂಕ್ಷನ್ ಬಳಿ ಕ್ಯಾಂಡಲ್ ದೀಪ ಬೆಳಗಿ ಹುತಾತ್ಮರಾದ ಧೀರ ಸಂಗಾತಿಗಳಿಗೆ ಕೆಂಪು ವಂದನೆ ಸಲ್ಲಿಸಲಾಯಿತು.ಈ ಸಂಧರ್ಭದಲ್ಲಿ ಭಾಗವಹಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್