Home Posts tagged #brammavara

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನೀರಿನ ಬಳಕೆ, ಸಂರಕ್ಷಣೆಯ ಅರಿವು ಕಾರ್ಯಕ್ರಮ

ಸಕಲ ಜೀವಿಗಳಿಗೂ ಬೇಕು ನೀರು, ನೀರಿಲ್ಲದೆ ಇರಲಾಗದು ಬದುಕು ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಸಲುವಾಗಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ “ಪ್ರತಿ ಹನಿಯ ಎಣಿಕೆ “ಎನ್ನುವ ವಿಚಾರದ ಕುರಿತು ಕಾರ್ಯಕ್ರಮ ನಡೆಸಲಾಯಿತು . ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಯಾಗಿ ಡಾ. ವಿನೋದ್ ಎ ಆರ್

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಏವಿಯೇಷನ್ ವಿಭಾಗದ ವಿದ್ಯಾರ್ಥಿಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಏವಿಯೇಷನ್ ವಿಭಾಗದ ವಿದ್ಯಾರ್ಥಿಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದರು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ತೆರಳಿ ವಿಮಾನ ಹಾರಾಟ, ನಿಲ್ದಾಣದ ವೀಕ್ಷಣೆ, ಅಲ್ಲಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸೂಕ್ತ ಮಾಹಿತಿಯನ್ನು ಪಡೆದರು. ವಿದ್ಯಾರ್ಥಿಗಳೊಂದಿಗೆ , ಉಪನ್ಯಾಸಕಿಯರಾದ ಸವಿತಾ ಮತ್ತು ವೈಷ್ಣವಿ ಉಪಸ್ಥಿತರಿದ್ದರು.

ಬ್ರಹ್ಮಾವರ : ಕರಾವಳಿಗೆ ಮಾದರಿಯಾದ ಎಳ್ಳಂಪಳ್ಳಿ ಕಿಂಡಿ ಅಣೆಕಟ್ಟು ತುಂಬಿತುಳುಕುವಷ್ಟು ನೀರು ಶೇಖರಣೆ

ಬ್ರಹ್ಮಾವರ : ನೀಲಾವರ ಗ್ರಾಮಪಂಚಾಯತಿ ವ್ಯಾಪ್ತಿಯ ಎಳ್ಳಂಪಳ್ಳಿ ಮತ್ತು ಕಾಡೂರು ನಡುವೆ ಹರಿಯುವ ಸೀತಾನದಿಗೆ ಕಳೆದ ವರ್ಷ ಮೆಟಲ್ ಡೋರ್ ಅಳವಡಿಸಿ ಮಾಡಲಾದ ಕಿಂಡಿ ಅಣೆಕಟ್ಟು ಯಶಸ್ಸು ಕಂಡಿದೆ. ಕರಾವಳಿ ಜಿಲ್ಲೆಯಲ್ಲಿ ಸಾಕಷ್ಟು ಜೀವ ನದಿಗಳು ಇದ್ದರೂ ಎಪ್ರಿಲ್, ಮೇ ತಿಂಗಳಲ್ಲಿ ಕುಡಿಯುವ ನೀರಿಗೆ ಬರ ಇದ್ದ ಕಾರಣ ಸಿಹಿ ನೀರಿನ ನದಿಗಳಿಗೆ ಮರದ ಮತ್ತು ಫೈಭರ್‍ನ ಕಿಂಡಿ ಅಣೆಕಟ್ಟಿನಿಂದ ನೀರು ಸೋರುವ ಸಮಸ್ಯೆಗೆ ಎಳ್ಳಂಪಳ್ಳಿ ಡ್ಯಾಂ ರೈತರ ಮತ್ತು ಕುಡಿಯುವ ನೀರಿನ

ಬ್ರಹ್ಮಾವರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ-2023

ಬ್ರಹ್ಮಾವರ : ಯಕ್ಷ ಶಿಕ್ಷಣ ಟ್ರಸ್ಟ್ , ಪ್ರದರ್ಶನ ಸಂಘಟನಾ ಸಮಿತಿ ಬ್ರಹ್ಮಾವರ ವತಿಯಿಂದ 8 ದಿನಗಳ ಕಾಲ ನಡೆಯುವ ಕಿಶೋರ ಯಕ್ಷಗಾನ ಸಂಭ್ರಮ -2023 ಬ್ರಹ್ಮಾವರ ಬಂಟರ ಭವನದ ಬಳಿ ನಡೆಯಿತು. ನಾಡೋಜ ಡಾ.ಜಿ ಶಂಕರ್ ಉದ್ಘಾಟಿಸಿದರು. ಬ್ರಹ್ಮಾವರದಲ್ಲಿ 14 ಶಾಲೆಯಿಂದ ಗುರುಗಳಿಂದ ತರಬೇತಿ ಪಡೆದ 15 ಪ್ರಸಂಗ ಪ್ರದರ್ಶನ ನಡೆಯಲಿದೆ. ನಾನಾ ಪ್ರಸಾಧನ ಕಲೆಗಾರರಿಂದ ದೇವ, ದಾನವರ ವೇಶ ಭೂಷಣ, ಯಕ್ಷಗಾನದ ಸಾಂಪ್ರದಾಯಕ ಹೆಜ್ಜೆ, ಮಾತು, ರಂಗಸ್ಥಳ ಸಂಪ್ರದಾಯದಿಂದ ನಡೆಯುವ

ಬ್ರಹ್ಮಾವರ: ಕೃಷಿ ಗದ್ದೆಯಲ್ಲಿ ಭತ್ತದ ಕಟಾವು ಯಂತ್ರಗಳದ್ದೇ ಸದ್ದು..!

ಬ್ರಹ್ಮಾವರ : ಕರಾವಳಿಯಲ್ಲಿ ಈ ಬಾರಿ ಭತ್ತದ ಬೇಸಾಯ ಮಾಡಿದ ರೈತರಲ್ಲಿ ಕೆಲವು ಭಾಗದಲ್ಲಿ ಉತ್ತಮ ಇಳುವರಿ ಬಂದರೂ ಗದ್ದೆಯಿಂದ ಮನೆಗೆ ತರಲು ಅಕಾಲಿಕ ಮಳೆರಾಯ ತೊಂದರೆ ಕೊಟ್ಟರೂ, ದೀಪಾವಳಿಯ ಬಳಿಕ ಕಟಾವಿಗೆ ವೇಗ ಹೆಚ್ಚಿದೆ. ಬಹತೇಕ ಕೃಷಿಕರು ಕೂಲಿ ಆಳುಗಳ ಕೊರತೆಯಿಂದ ಯಾಂತ್ರಿಕೃತ ಕಟಾವಿಗೆ ಹೊಂದಿಕೊಂಡ ಕಾರಣ, ನದಿ ತೀರದ ತಗ್ಗು ಪ್ರದೇಶದ ಗದ್ದೆಯಲ್ಲಿ ನೀರು ತುಂಬಿಕೊಂಡ ಕಟಾವು ಯಂತ್ರಗಳು ಗದ್ದೆಯಲ್ಲಿ ಸಂಚರಿಸಲು ಆಗದೆ ಮತ್ತಷ್ಟು ವಿಳಂಬವಾಗಿದೆ. ಬ್ರಹ್ಮಾವರ ಭಾಗದ

ಬ್ರಹ್ಮಾವರ|| ಅಂಬೇಡ್ಕರ್ ಭವನದಲ್ಲಿ ಭರ್ಜರಿ ಎಣ್ಣೆ ಪಾರ್ಟಿ: ವಿಡಿಯೋ ಮಾಡಿದ ಮಹಿಳೆಗೆ ಬೆದರಿಕೆ, ದೂರು ದಾಖಲು

ಬ್ರಹ್ಮಾವರದ ವಾರಂಬಳ್ಳಿ ತೆಂಕು ಬಿರ್ತಿಯ ದಲಿತ ಮುಖಂಡರ ಪುತ್ರ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಅಯ್ಕೆಯಾದ ಹಿನ್ನಲೆಯಲ್ಲಿ, ಅಭಿನಂದನಾ ಸಮಾರಂಭವನ್ನು ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿತ್ತು. ಅದೇ ದಿನ ಸಂಜೆ ಕಾರ್ಯಕ್ರಮದ ಯಶಸ್ವಿಯ ಹಿನ್ನಲೆಯಲ್ಲಿ ಅಂಬೇಡ್ಕರ್ ಭವನದಲ್ಲಿ ಎಣ್ಣೆ ಪಾರ್ಟಿ ನಡೆಸಿದ್ದರು. ಈ ವಿಚಾರ ತಿಳಿದ ಸ್ಥಳೀಯ ಮಹಿಳೆ ಸವಿತಾ ಎನ್ನುವವರು ಅಂಬೇಡ್ಕರ್ ಭವನಕ್ಕೆ ತೆರಳಿ ಮದ್ಯಪಾನ ಮಾಡುತ್ತಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿ, ವಿಡಿಯೋ

ಬ್ರಹ್ಮಾವರ: ಒಂದು ತಂತಿಯಿಂದ ನಾದ ಹೊರಹೊಮ್ಮಿಸುವ ಕಿಂದರಜೋಗಿ

ದಸರಾ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕರಾವಳಿ ಭಾಗಕ್ಕೆ ಬಂದು ದಾಸರ ಮತ್ತು ಸಂತರ ಪದಗಳನ್ನು ಹಾಡಿ ಜನರನ್ನು ಬೆರಗುಗೊಳಿಸುತ್ತಿದ್ದರು. ಇದೀಗ ದಾವಣಗೆರೆ ಮೂಲದ ಭೈರಪ್ಪ ಅವರು ಕರಾವಳಿ ಭಾಗಕ್ಕೆ ಆಗಮಿಸಿದ್ದು, ದಾಸರ ಮತ್ತು ಸಂತರ ಪದಗಳನ್ನು ಹಾಡಿ ಜೀವನದ ಮೌಲ್ಯವನ್ನು ಬಿತ್ತರಿಸುವ ಕಾಯಕಕ್ಕೆ ಮುಂದಾಗಿದ್ದಾರೆ. 4 ಅಡಿ ಉದ್ದದ ಬಿದಿರಿನ ದಂಡವೊಂದಕ್ಕೆ 3 ಸ್ಥರದ ಸೋರೆ ಕಾಯಿ ಬುರುಡೆಗೆ ತಂತಿಯೊಂದನ್ನು ಅಳವಡಿಸಿ ಹಾಡು ಹಾಡುವಾಗ ಸ್ವರ ತಂತುಗಳು ತಂತಿ ಮೂಲಕ

ಬ್ರಹ್ಮಾವರ : 7ನೇ ದಿನಕ್ಕೆ ಕಾಲಿಟ್ಟ ಕಟ್ಟಡ ಸಾಮಾಗ್ರಿಗಳ ಸಾಗಾಟ ವಾಹನದ ಮಾಲಕರ ಮುಷ್ಕರ

ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿಗಳ ಸಾಗಾಟ ವಾಹನಗಳ ಮಾಲಕರು ಮತ್ತು ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸುತ್ತಿದ್ದು, 7ನೇ ದಿನವೂ ಮುಷ್ಕರವನ್ನು ಮುಂದುವರಿಸಿದ್ದಾರೆ. ಮುಷ್ಕರ ನಿರತರು ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹುದ್ದೂರು ಶಾಸ್ತ್ರಿ ಅವರ ಜಯಂತಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಕೋಟದಲ್ಲಿ ಜಿಲ್ಲಾ ಮಟ್ಟದ ಸಭೆ ನಡೆಸಿ ಮುಂದಿನ ಹೋರಾಟದ ಮಾತುಕತೆ ನಡೆಸಿದರು. ಟಿಪ್ಪರ್ ಮಾಲಕರ ಸಂಘದ ವಿಜಯ ಕುಮಾರ್,

ಬ್ರಹ್ಮಾವರ: 3ನೇ ದಿನವೂ ಕಟ್ಟಡ ಸಾಮಾಗ್ರಿ ಸಾಗಾಟ ವಾಹನ ಮಾಲಕರ ಮುಷ್ಕರ, ಮಾತುಕತೆ, ವಿಫಲ

ಬ್ರಹ್ಮಾವರ : ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿಗಳ ಸಾಗಾಟ ಸಾಮಗ್ರಿಗಳ ವಾಹನಗಳ ಮಾಲಕರು ಕಾರ್ಮಿಕರು 3ನೇ ದಿನವೂ ಮುಷ್ಕರವನ್ನು ಮುಂದುವರಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಉಡುಪಿ ಜಿಲ್ಲೆಯ ಐವರು ಶಾಸಕರು ಗಣಿ ಇಲಾಖೆ ಮತ್ತು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಮೂಲಕ ಮುಷ್ಕರ ನಿರತರೊಂದಿಗೆ ನಡೆದ ಮಾತುಕತೆ ವಿಫಲತೆ ಕಂಡುಬಂದ ಹಿನ್ನೆಲೆಯಲ್ಲಿ ಅರ್ನಿಷ್ಟಾವಧಿ ಮುಷ್ಕರ ಮುಂದುವರಿಯುವ ಸೂಚನೆ ಕಂಡು ಬಂದಿದೆ. ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರ ಬಸ್

ಬ್ರಹ್ಮಾವರ: ಬ್ರಹ್ಮಾವರದಲ್ಲಿ ವಿಭಿನ್ನ ರೀತಿಯಲ್ಲಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ

ಬ್ರಹ್ಮಾವರದಲ್ಲಿ 41ನೇ ಸಾರ್ವಜನಿಕ ಶ್ರೀ ಗಣೇಶೋತ್ಸವದ ಗಣಪತಿ ವಿಗ್ರಹ ಮತ್ತು ಅಲಂಕಾರ ಈ ಬಾರಿ ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದ ವತಿಯಿಂದ ನಡೆಯಲಿದೆ. ಬೈಟ್: ಶೇಖರ ದೇವಾಡಿಗ ಅಧ್ಯಕ್ಷರು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ವಿಭಿನ್ನ ಕಾರ್ಯಕ್ರಮವನ್ನು ನಡೆಸಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದ ನಿರ್ಧರಿಸಿದ್ದಾರೆ. ಗಣಪತಿಗೆ ಕಿರೀಟವನ್ನು ಮತ್ತು ಚೌತಿಯ ಸಮಯದಲ್ಲಿ ಅಲಂಕಾರವನ್ನು ತಿರುಪತಿ ತಿಮ್ಮಪ್ಪನ ಮಾದರಿಯಲ್ಲಿ ಗಣಪತಿ ಮೂರ್ತಿಯನ್ನು ಸಿಂಗರಿಸುವ ಹೊಸ