ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಆರಕ್ಷಕ ಠಾಣೆ ಬೈಂದೂರು ಇದರ ವತಿಯಿಂದ ಪೊಲೀಸ್ ಇಲಾಖೆಯ ಮಹತ್ವಕಾಂಕ್ಷೆಯ ದೃಷ್ಟಿ ಯೋಜನೆ ಉದ್ಘಾಟನೆ ಬೈಂದೂರು ರೋಟರಿ ಭವನದಲ್ಲಿ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠ ಹರಿರಾಂ ಶಂಕರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ
ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಇದರ 354ನೇ ಆರಾಧನ ಮಹೋತ್ಸವ ನಡೆಯಿತು. ಬೆಳಿಗ್ಗೆ ಪಾದಪೂಜೆ, ಅರ್ಚನೆ, ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ, ಮಹಾಪೂಜೆ, ಮಹಾಮಂಗಳಾರತಿ,ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸಾವಿರಾರು ಭಕ್ತರು ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗುರು ಸಾರ್ವಭೌಮರ ಆರಾಧನ ಮಹೋತ್ಸವದ ಪ್ರಯುಕ್ತ ಸೇವಾ ಸಂಗಮ ಶಿಶು ಮಂದಿರ
ಬೈಂದೂರು: ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ಇವರ 30ರ ಸಂಭ್ರಮ 2025ರ ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪತ್ರಿಕಾ ಗೋಷ್ಟಿ ಬುಧವಾರ ಸಂಜೆ ಬೈಂದೂರು ಬಂಟರ ಸಮುದಾಯ ಭವನದಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ 30ನೇ ವರ್ಷದ ಸಂಭ್ರಮದ ಅವಧಿಯಲ್ಲಿ
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಲವರಿಮಠ ಬೈಂದೂರು ವಲಯ ಉಡುಪಿ ಜಿಲ್ಲೆ. ಇಂದು ಶಾಲೆಯಲ್ಲಿ ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 21 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ ಕಿರಣ್ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಸರಳವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹಾಗು ಸಹಾಯ ಮನೋಭಾವದ ಕುರಿತು ಮಾತನಾಡಿದರು.
ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 23 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡಮೊಗೆ. ಬೈಂದೂರು ವಲಯ ಉಡುಪಿ ಜಿಲ್ಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ ಶ್ರೀಯುತ ಕಿರಣ್ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಸರಳವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹಾಗು ಸಹಾಯ ಮನೋಭಾವದ ಕುರಿತು ಮಾತನಾಡಿದರು.
ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಕ್ಷೇತ್ರವನ್ನು ಬಲ ವರ್ಧನೆ ಮಾಡುವ ನಿಟ್ಟಿನಲ್ಲಿ 2023-24 ನೇ ಸಾಲಿನಲ್ಲಿ 15 ನೇ ಹಣಕಾಸು ಆಯೋಗದಡಿ ರಾಜ್ಯದ ಆರೋಗ್ಯ ವಲಯದ ಕಾರ್ಯಕ್ರಮ ಗಳಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ ಕಾರ್ಯಕ್ರಮ ಇದಾಗಿದೆ. ಕ್ಷೇತ್ರದ 3 ಕಡೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕ್ಕೆ ಸರಕಾರಿ ಜಾಗ ಮಂಜೂರಾತಿ ಮಾಡಲಾಗಿದ್ದು ಶೀಘ್ರದಲ್ಲೇ ಹೊಸದಾಗಿ 1.95 ಕೋಟಿ ವೆಚ್ಚದಲ್ಲಿ 3 ಕಡೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ
ಕೇಂದ್ರ ಸರಕಾರದ ಪಿ.ಎಂ ಜನ್ ಮನ್ ಯೋಜನೆಯಡಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊರಗ ಸಮುದಾಯ ವಾಸವಾಗಿರುವ ಪ್ರದೇಶಗಳ ಅಭಿವೃದ್ಧಿಗೆ ರೂ. 4.39 ಕೋಟಿ ಅನುದಾನ ಮಂಜೂರು. ಕೇಂದ್ರ ಸರಕಾರದ ಪಿಎಂ ಜನ್ ಮನ್( ಪ್ರಧಾನ ಮಂತ್ರಿ ಜನ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ) ಯೋಜನೆಯಡಿ ನೈಜ ದುರ್ಬಲ ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ ಸುಧಾರಣೆ ನಿಟ್ಟಿನಲ್ಲಿ ಹೊಸ ಅಭಿಯಾನವನ್ನು ಆರಂಭಿಸಿದ್ದು ಕರ್ನಾಟಕ ರಾಜ್ಯದಲ್ಲಿ ಕೊರಗ ಮತ್ತು ಜೇನು
ಉಳ್ತೂರು ಮೋಹನ್ ದಾಸ್ ಶೆಟ್ಟಿಯವರ ವಿಶೇಷ ಮನವಿಯ ಮೇರೆಗೆ ನಮ್ಮ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರ ಆಪ್ತ ಅಭಿಮಾನಿಗಳಾದ ಶೈಕ್ಷಣಿಕ,ಧಾರ್ಮಿಕ, ಪ್ರಾಮಾಣಿಕ,ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಅದೆಷ್ಟೋ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಮತ್ತು ಅಶಕ್ತರಿಗೆ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಾ ಬಂದಿರುವ ಪ್ರಸಿದ್ಧ ಉದ್ಯಮಿ ಮೆರಿಟ್ & ಅರ್ಜುನ್ ಹಾಸ್ಪಿಟಲ್ ಸರ್ವಿಸಸ್ ಪ್ರೈ. ಲಿ ನ ಮಾಲೀಕರಾದ ಗೌರವಾನ್ವಿತ
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಸರಕಾರಿ ಶಾಲೆಗಳನ್ನು ಉಳಿಸುವ ವಿಶೇಷ ಯೋಜನೆ 300 ಟ್ರೀಸ್ ಇದರ ಸಮಾಲೋಚನ ಸಭೆ ನಡೆಸಿ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸುವಂತೆ ಮನವಿ ಮಾಡಿದರು. 300 ಟ್ರೀಸ್ ಸಮಿತಿ ರಚನೆ ಹಾಗೂ ಈ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅಳವಡಿಸುವ ಬಗ್ಗೆ ಶಿಕ್ಷಣ ಪ್ರೇಮಿಗಳು, ಅಧ್ಯಾಪಕರು, ದಾನಿಗಳು ಹಾಗೂ ಕಾರ್ಯಕರ್ತರಿಂದ ಸಲಹೆಗಳನ್ನು ಸ್ವೀಕರಿಸಿದರು. ಸಭೆಯಲ್ಲಿ, ಬೆಂಗಳೂರಿನಲ್ಲಿ ನೆಲೆಸಿರುವ
ಬೈಂದೂರು ವಿಧಾನ ಸಭಾ ಕ್ಷೇತ್ರದ ಬೈಂದೂರು ತಾಲೂಕಿನ ನಾಡ ಗ್ರಾಮದಲ್ಲಿ ಈಗಾಗಲೇ ಗ್ರಾಮ ಪಂಚಾಯತ್ ಮೂಲಕ ಕೇಂದ್ರ ಸರಕಾರದ ನರೇಗಾ ಯೋಜನೆ ಹಾಗೂ ಇತರೆ ಅನುದಾನದಡಿ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಇದೀಗ ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷೇತ್ರದ 2 ನೇ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಗೋಮಾಳ ಜಾಗದ ಸುತ್ತ ಕಂದಕ ನಿರ್ಮಾಣ ಮಾಡಲಾಗುತ್ತಿದ್ದು, ಒಟ್ಟು 13 ಮಂದಿ ನರೇಗಾ ಕೂಲಿ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಕೊಂಡಿದ್ದಾರೆ.