Home Posts tagged #bynduru

ಬೈಂದೂರು : 71ನೇ ಅಖಿಲ ಭಾರತ ಸಹಕಾರ ಸಪ್ತಾಹ

ಕರ್ನಾಟಕ ಸಹಕಾರಿ ಮಹಾಮಂಡಲ ಬೆಂಗಳೂರು, ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ ಕಂಬದಕೊಣೆ ರೈತರ ಸೇವಾ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವಧನ ವಿತರಣಾ ಸಮಾರಂಭ ನಾಗೂರು ನಲ್ಲಿ ನೆಡೆಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ

ಬೈಂದೂರು: ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ದುರ್ಮರಣ

ಬೈಂದೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಸೋಮವಾರ ಬೈಂದೂರಿನಲ್ಲಿ ನಡೆದಿದೆ. ಸೋಮವಾರ ಮದ್ಯಾಹ್ನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಸಲೀಂ (38) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಮೂಲತಃ ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿದ್ದು ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ

ರಜತ ಮಹೋತ್ಸವ ಸಂಭ್ರಮದಲ್ಲಿ ಶ್ರೀ ಮೂಕಾಂಬಿಕಾ ದೇವಳ ಪ್ರೌಢಶಾಲೆ ; ಪ್ರಾಚೀನ ಕಾಲದ ವಸ್ತು ಪ್ರದರ್ಶನ, ಚಿತ್ರಕಲಾ ಪ್ರದರ್ಶನ ಉದ್ಘಾಟನೆ

ಬೈಂದೂರಿನ ಹೊಸೂರಿನ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ರಜತ ಮಹೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.ವಿವಿಧ ವೇಷಭೂಷಣ ಚಂಡೆ ವಾದನ ವಾದ್ಯಗೋಷ್ಠಿ ಮೆರವಣಿಗೆ ಮೆರುಗನ್ನು ಹೆಚ್ಚಿಸಿತು. ಬೈಂದೂರು ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಮರೆಯಲಾಗದ ಪ್ರಾಚೀನ ಕಾಲದ ವಸ್ತು ಸಂಗ್ರಾಲಯವನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಸದಸ್ಯ ರಾಘವೇಂದ್ರ ಪೂಜಾರಿ ಚಿತ್ರಕಲಾ ಪ್ರದರ್ಶನ ಕೇಂದ್ರವನ್ನು ಉದ್ಘಾಟಿಸಿದರು. ಶ್ರೀಮಹಾಲಿಂಗೇಶ್ವರ

ಬೈಂದೂರು: ಗ್ರಾಮ ಲೆಕ್ಕಾಧಿಕಾರಿ ದಾಖಲೆ ಪರಿಶೀಲಿಸದೆ ಆದಾಯ ಪತ್ರ ನೀಡಿದ್ದಾರೆ: ಗ್ರಾಮಸ್ಥರ ಆರೋಪ

ಬೈಂದೂರು: ಇಡೂರು ಕುಂಜ್ಞಾಡಿ ಗ್ರಾಮ ಲೆಕ್ಕಾಧಿಕಾರಿ ದಾಖಲೆ ಪರಿಶೀಲಿಸದೆ ಆದಾಯ ಪತ್ರ ನೀಡಿದ್ದಾರೆ: ಗ್ರಾಮಸ್ಥರ ಆರೋಪಬೈಂದೂರು ಕುಂದಾಪುರ ತಾಲೂಕಿನ ವಂಡ್ಸೆ ಹೋಬಳಿಯ ಇಡೂರು ಕುಂಜ್ಞಾಡಿ ಗ್ರಾಮದ ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಅಂದಿನ ಕುಂದಾಪುರ ತಹಸಿಲ್ದಾರ್ ಕಿರಣ್ ಗೋರಯ್ಯ ಮರುಪರಿಶೀಲಿಸಬೇಕು ಹಾಗೂ ನೀಡಿರುವ ದಾಖಲೆ ಪತ್ರಗಳನ್ನು ಹಿಂಪಡೆಯಬೇಕೆಂದು ಆದೇಶಿಸಿರುತ್ತಾರೆ ಆದರೆ ಕಾಣದ ಕೈಗಳು ಕೆಲಸ ಮಾಡಿ ಸರಕಾರದ ದಿಕ್ಕು ತಪ್ಪಿಸುವ ಕೆಲಸ ಆಗಿದೆ ಎಂದು

ಬೈಂದೂರು: ಕಿರಿಮಂಜೇಶ್ವರದಲ್ಲಿ ಹಾಲು ಸಂಗ್ರಹಣಾ ವಾಹನದ ಉದ್ಘಾಟನೆ

ಬೈಂದೂರಿನ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಒಡೆಯರ ಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ನಡೆಯಿತು. ಭವ್ಯ ಮೆರವಣಿಗೆ ಮೂಲಕ ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.ಕೊಂಬು ಕಹಳೆ ವಾದನ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು. ಮಹಿಳೆಯರು ಸಮವಸ್ತ್ರ ಧರಿಸಿದ್ದರು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಅವರು ಹಾಲು ಸಂಗ್ರಹಣಾ ಸಂಚಾರಿ ವಾಹನವನ್ನು

ಬೈಂದೂರು: ರಾಷ್ಟ್ರೀಯ ದಾಖಲೆ ಗೈದ ಮಣಿಕಂಠ ಹೋಬಳಿದಾರ್ ಅವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ನೇತೃತ್ವದಲ್ಲಿ 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿ 100ಮೀ ಓಟದಲ್ಲಿ ಭಾರತದ ಅತ್ಯಂತ ವೇಗದ ಓಟಗಾರರಾಗಿ ದಾಖಲೆ ಮಾಡಿ ಚಿನ್ನದ ಪದಕ ಪಡೆದ ಮಣಿಕಂಠ ಹೋಬಳಿದಾರ್ ಇವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬೈಂದೂರು ಬಿಜೆಪಿ

ಬೈಂದೂರು: ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಸಂಭ್ರಮ

ಬೈಂದೂರು ಪೊಲೀಸ್ ಠಾಣೆಯಲ್ಲಿ ಗಣಹೋಮ, ನಾಗದೇವರ ಪೂಜೆ, ಆಯುಧ ಪೂಜೆ ಹಾಗೂ ವಾಹನ ಪೂಜಾ ಕೈಂಕರ್ಯಗಳು ವಿಶೇಷ ಹೂವಿನ ಅಲಂಕಾರದೊಂದಿಗೆ ಅತ್ಯಂತ ವಿಶಿಷ್ಠವಾಗಿ ಆಚರಿಸಲಾಯಿತು. ಸಮವಸ್ತ್ರಧಾರಿ ಇಲಾಖೆಯ ಸಿಬ್ಬಂದಿಗಳು ಪೂಜೆಯ ಅಂಗವಾಗಿ ಅಪ್ಪಟ ಭಾರತೀಯ ಶೈಲಿಯ ಉಡುಗೆಯನ್ನು ತೊಟ್ಟು ಗಮನ ಸೆಳೆದರು. ಠಾಣೆ ಸಿಬ್ಬಂದಿಗಳು ಭಾವೈಕ್ಯತೆ ಮೂಡಿಸುವ ಹಾಗೂ ಪರಸ್ಪರ ವಿಶ್ವಾಸ ಹೆಚ್ಚಿಸುವ ಕಲ್ಪನೆಯಲ್ಲಿ ಸಿಬ್ಬಂದಿಗಳು ಒಂದೇ ರೀತಿಯ ಸಮವಸ್ತ್ರ ಧರಿಸಿದರು. ಠಾಣೆಯ ವೃತ್ತ

ಬೈಂದೂರು: ದೇಶ ಕಾಯುವ ವೀರ ಯೋಧರಿಗೆ ವಿದ್ಯಾರ್ಥಿಗಳಿಂದ ದೀಪಾವಳಿ ಹಬ್ಬದ ಶುಭಾಶಯ ಪತ್ರ

ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆ ಅಡಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸೈನಿಕರಿಗೆ ದೀಪಾವಳಿ ಶುಭಾಶಯ ಕೋರುವ ಅವಕಾಶ ಒಂದನ್ನು ಆಯೋಜಿಸಿದ್ದು, ಸಾವಿರಾರು ವಿದ್ಯಾರ್ಥಿಗಳು ದೇಶ ಕಾಯುವ ಯೋಧರಿಗೆ ದೀಪಾವಳಿ ಶುಭಾಶಯ ಪತ್ರ ಬರೆಯಲು ಉತ್ಸಾಹದಿಂದ ಪಾಲ್ಗೊಂಡಿದ್ದು ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನೂರಾರು ವಿದ್ಯಾರ್ಥಿಗಳ ಪತ್ರವು ಸಮೃದ್ಧ ಬೈಂದೂರು ತಂಡವನ್ನು ತಲುಪಿದ್ದು, ಕೆಲವು ಶಾಲೆಗಳಲ್ಲಿ ಶಿಕ್ಷಕರು ಉತ್ತಮವಾಗಿ ತೊಡಗಿಸಿಕೊಂಡು

ಬೈಂದೂರು: ಸೇನಾಪುರ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಕುಂದಾಪುರದ ಸೇನಾಪುರ ಸತತ 5 ಬಾರಿ ಸೇನಾಪುರ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಸೇನಾಪುರ ಭಾಗದ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ಪ್ರತಿಭಟನೆ ನಡೆಯಿತು. ಶಾಸಕ ಗುರುರಾಜ್ ಗಂಟಿಹೊಳೆ ಅವರು, ಕೊಂಕಣ ರೈಲ್ವೆ ಹೋರಾಟ ಸಮಿತಿ ಮನವಿಯನ್ನು ಸ್ವೀಕರಿಸಿ ಮಾತನಾಡಿ, ಕರಾವಳಿ ಭಾಗದ ಜನರ ಜೀವನದ ಕೊಂಡಿ ಆಗಿರುವ ಕೊಂಕಣ ರೈಲು ಸೇವೆ ಎನ್ನುವುದು ಸ್ಥಳೀಯ ಜನರಿಗೆ ಮರೀಚಿಕೆಯಾಗಿದ್ದು ಸೇನಾಪುರ ರೈಲು ನಿಲ್ದಾಣದಲ್ಲಿ ಮುಂಬಯಿ ಮತ್ತು

ಬೈಂದೂರು: ಅದ್ದೂರಿಯಾಗಿ ನಡೆದ ಹುಲಿ ಕೊಲ್ಲುವ ವಿಶೇಷ ಕಾರ್ಯಕ್ರಮ

ಇತಿಹಾಸ ಪ್ರಸಿದ್ಧ ಬೈಂದೂರು ಬಂಕೇಶ್ವರಾ ಶ್ರೀ ಮಹಾಕಾಳಿ ಅಮ್ಮನವರ ದೇವಸ್ಥಾನದಲ್ಲಿ ಐತಿಹಾಸಿಕ ಹುಲಿ ಕೊಲ್ಲುವ ಕಾರ್ಯಕ್ರಮ ನಡೆಯಿತು. ಬೈಂದೂರಿನ ಸುತ್ತಮುತ್ತಲಿನ ಜನರು ಮಹಾಕಾಳಿ ಅಮ್ಮನವರಿಗೆ ನವರಾತ್ರಿಯ ಸಂದರ್ಭದಲ್ಲಿ ಸೇವೆ ಹಾಗೂ ಹರಕೆಯ ರೂಪದಲ್ಲಿ ಹುಲಿ ವೇಷ ತೊಟ್ಟು ಕುಣಿಯುವ ಪರಿ ಹಿಂದಿನಿಂದ ನಡೆದುಕೊಂದು ಬಂದಿದೆ. ಮಕ್ಕಳು ದೊಡ್ಡವರು ಭೇದವಿಲ್ಲದೇ ದೇವರ ಹರಕ್ಕೆಯನ್ನು ಸಲ್ಲಿಸಿದರು. ಬಳಿಕ ನವರಾತ್ರಿಯ ಕೊನೆಯ ದಿನವಾದ ವಿಜಯ ದಶಮಿಯಂದು ದೇವಿಯನ್ನು ಹುಲಿಯ