Home Posts tagged #car accident

ಮಂಗಳೂರು: ಪಂಪ್ವೆಲ್ ಬಳಿ ಭೀಕರ ಅಪಘಾತ

ನಗರದ ಪಂಪ್ವೆಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ತೊಕ್ಕೊಟ್ಟು ನಿವಾಸಿ ಸಮಿತ್ ಶೆಟ್ಟಿ (30) ಮೃತಪಟ್ಟ ಯುವಕ. ಸಮಿತ್ ಶೆಟ್ಟಿ ಕೊಟ್ಟಾರದಲ್ಲಿರುವ ತನ್ನ ರೂಮ್ ನಿಂದ ಇಂದು ಬೆಳಗ್ಗೆ ತೊಕ್ಕೊಟ್ಟಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾ.ಹೆ. 66ರ ಪಂಪ್ವೆಲ್ ಬಳಿ ಈ

ಉಳ್ಳಾಲ: ಕಾರ್, ಬೈಕ್ ಗೆ ಢಿಕ್ಕಿ: ಕೊಲ್ಯ ನಿವಾಸಿ ದಾರುಣ ಸಾವು

ಉಳ್ಳಾಲ: ಒಂದೇ ಧಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ರಾ.ಹೆ66 ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಇಂದು ಮಧ್ಯಾಹ್ನ ಸಂಭವಿಸಿದೆ. ಜೀಪಿನಲ್ಲಿದ್ದ ಯುವಕರು ಗಾಂಜಾ ನಶೆಯಲ್ಲಿದ್ದು, ಅವರ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಿ

ನೆಲ್ಯಾಡಿ: ಕಾರು ಅಪಘಾತ; ಮೂವರಿಗೆ ಗಾಯ

ನೆಲ್ಯಾಡಿ: ಕೊಣಾಲು ಗ್ರಾಮದ ಕೊಲ್ಪೆ ಎಂಬಲ್ಲಿ ಕಾರು ಅಪಘಾತಗೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಅ.30ರಂದು ಬೆಳಿಗ್ಗೆ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ರಸ್ತೆ ಬದಿಯ ಚರಂಡಿಯ ತಡೆಗೋಡೆಗೆ ಡಿಕ್ಕಿಯಾಗಿ, ಡಿಕ್ಕಿ ರಬಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ನೆಲ್ಯಾಡಿ ಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ಪಡೆದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ

ಉಳ್ಳಾಲ: ಜಾನುವಾರುಗಳ ಮೇಲೆ ಹರಿದ ಕಾರು: ಮೂರು ಜಾನುವಾರು ಮೃತ್ಯು, ಓರ್ವನಿಗೆ ಗಾಯ

ಉಳ್ಳಾಲ: ರಸ್ತೆಬದಿ ಮಲಗಿದ್ದ ಜಾನುವಾರುಗಳ ಮೇಲೆ ಕಾರು ಚಲಿಸಿ ಮೂರು ಜಾನುವಾರುಗಳು ಮೃತಪಟ್ಟು, ವೈದ್ಯ ವಿದ್ಯಾರ್ಥಿ ಗಾಯಗೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಹೌಸ್ ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಮೈಸೂರು ಮೂಲದ ಡಾ.ವಿವೇಕ್ ಶಶಿಕುಮಾರ್ ಗಾಯಗೊಂಡವರು. ದೇರಳಕಟ್ಟೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕಾರು ನಸುಕಿನ 3.30 ರ ಸುಮಾರಿಗೆ ಜಾನುವಾರುಗಳಿಗೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಪರಿಣಾಮ ರಸ್ತೆ ಬದಿಯಲ್ಲಿ

ಸುರತ್ಕಲ್‌ ನ ತಡಂಬೈಲ್‌ನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರು

ಸುರತ್ಕಲ್ ತಡಂಬೈಲ್‌ನಲ್ಲಿ ರವಿವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು  ಪ್ರಾಣಾಪಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಕಾರಿನಲ್ಲಿ ಇಬ್ಬರು ಯುವಕರು ಮತ್ತು ಓರ್ವ ಯುವತಿ ಇದ್ದರು ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಸಮೀಪದ ವೆಂಕಟರಮಣ ರಾವ್ ಅವರ ಮಾಲಕತ್ವದ ಕಟ್ಟಡವೊಂದಕ್ಕೆ ಹಾನಿಯಾಗಿದೆ. ಕಟ್ಟಡದ ಶೆಟರ್,ಮೇಲ್ಛಾವಣಿ ಹಾನಿಗೊಂಡಿದ್ದು ಎರಡು ಲಕ್ಷ ರೂ. ನಷ್ಟವಾಗಿದೆ.ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಏರ್ ಬಲೂನ್ ಇದ್ದುದರಿಂದ

ಉಳ್ಳಾಲ : ಓಮ್ನಿ ಅಪಘಾತ: ವೃದ್ಧೆ ಸಾವು, ಮೂವರಿಗೆ ಗಂಭೀರ ಗಾಯ

ಉಳ್ಳಾಲ:ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಓಮ್ನಿ‌ ಕಾರು ಢಿಕ್ಕಿ ಹೊಡೆದ ಪರಿಣಾಮ 85ರ ವೃದ್ಧೆಯೋರ್ವರ ದೇಹ ಛಿದ್ರಗೊಂಡು ಸಾವನ್ನಪ್ಪಿದ ಘಟನೆ ರಾ.ಹೆ 66 ರ ಉಚ್ಚಿಲ ಎಂಬಲ್ಲಿ ಇಂದು ಮುಂಜಾನೆ ನಸುಕಿನ ಜಾವ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ,ಕುಂಜತ್ತೂರು ನಿವಾಸಿ ಬಿ.ಫಾತಿಮಾ(85)ಮೃತ ಪಟ್ಟ ವೃದ್ಧೆ.ಫಾತಿಮಾ ಅವರು ತನ್ನ ಮಗ ಮೂಸ(50) ಮೊಮ್ಮಗ ಮಸ್ತಫಾ(24) ಜೊತೆ ನಿನ್ನೆ ಮಂಗಳೂರಿನ ಅಡ್ಡೂರಿಗೆ ತೆರಳಿ ಸಂಬಂಧಿಕರೋರ್ವರ

ಕಾರು ಮತ್ತು ಆಟೋ ನಡುವೆ ಪರಸ್ಪರ ಡಿಕ್ಕಿ ಆಟೊ ಚಾಲಕ ಸ್ಥಳದಲ್ಲೇ ಸಾವು

ಹಾಸನ : ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯಲ್ಲಿ ಇಂದು ಕಾರು ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿದು. ಇದರಿಂದಾಗಿ ಆಟೋ ಚಾಲಕ ಐಚನಹಳ್ಳಿಯ ನಾಗಯ್ಯ (ನಾಗ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕನ ಅತಿಯಾದ ವೇಗವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು , ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಇತರರು ಕೂಡ ಗಾಯಗೊಂಡಿರುವ ಘಟನೆ ನಡೆದಿದೆ. ಹೊಳೆನರಸೀಪುರ ಆನಂತರ

ಕಾಪುವಿನಲ್ಲಿ ಮೋರಿಗೆ ಢಿಕ್ಕಿಯಾದ ಕಾರು: ಒರ್ವನ ಸ್ಥಿತಿ ಗಂಭೀರ

ಕಾಪುವಿನ ಕೊಪ್ಪಲಂಗಡಿಯಲ್ಲಿ ಕಳೆದ ತಡರಾತ್ರಿ ನಡೆದ ಕಾರು ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿದ್ದು ಒರ್ವನ ಸ್ಥಿತಿ ಗಂಭೀರ ವಾಗಿದೆ ಎನ್ನಲಾಗಿದೆ. ಬೆಂಗಳೂರು ನೋಂದಾಣಿ ಸಂಖ್ಯೆಯ ಮಾರುತಿ ಕಾರಿನಲ್ಲಿ ಉಡುಪಿ ಮೂಲದವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಕೊಪ್ಪಲಂಗಡಿಯಲ್ಲಿ ಕಾರು ಮೋರಿಯೊಂದರ ತಡೆಗೋಡೆಗೆ ಡಿಕ್ಕಿಯಾಗಿ ಮೋರಿಗೆ ಬಿದ್ದ ಕಾರು