Home Posts tagged #congress

ಕಾಂಗ್ರೆಸ್ ಒಳಜಗಳ- ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮಶೇಖರ್ ಕೊಯಿಂಗಾಜೆ ರಾಜೀನಾಮೆ

ಸಂಪಾಜೆ: ಮುಂಬರುವ ಪಂಚಾಯತ್ ಚುನಾವಣೆಗಳ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಪಾಜೆ ವಲಯದಲ್ಲಿ ದೊಡ್ಡ ಆಘಾತ ಎದುರಾಗಿದೆ. ದೀರ್ಘಕಾಲದಿಂದ ವಲಯ ಕಾಂಗ್ರೆಸ್ ಘಟಕವನ್ನು ಮುನ್ನಡೆಸುತ್ತಿದ್ದ ಹಿರಿಯ ನಾಯಕ ಸೋಮಶೇಖರ್ ಕೊಯಿಂಗಾಜೆ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಒಳಚಟುವಟಿಕೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.ಸುಳ್ಯ

ಆಳ್ವಾಸ್ ಫಾರ್ಮಾಸಿ: ಅಭಿವಿನ್ಯಾಸ ಕಾಯ೯ಕ್ರಮ

ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ವಿಶ್ವದಲ್ಲಿ ಔಷಧೋದ್ಯಮ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಔಷಧ ತಯಾರಿಕೆ, ಗುಣಮಟ್ಟದ

ಡಿಸಿ ಮನ್ನಾ ಉಳಿಕೆ ಜಮೀನನ್ನು ದಲಿತರಿಗೆ ಮಂಜೂರು ಮಾಡಿ: ದಲಿತ ಸಂಘಟನೆಯಿಂದ ಶಾಸಕ ಅಶೋಕ್ ರೈ ಗೆ ಮನವಿ

ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಿದರು.ಶಾಸಕರನ್ನು ಭೇಟಿಯಾದ ನಿಯೋಗ ಈ ವಿಚಾರದಲ್ಲಿ ನಾವು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಆದರೆ ಇದುವರೆಗೂ ಯಾವ ಜನಪ್ರತಿನಿಧಿಗಳೂ ನಮ್ಮ ಬೆಂಬಲಕ್ಕೆ ಬಂದಿಲ್ಲ. ಈ ಬಾರಿ ನಿಮ್ಮ ಮೂಲಕ ನಾವು ಮನವಿ ಮಾಡಿ […]

ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಸ್ಥಗಿತ

ಮಸ್ಕತ್:ಮಂಗಳೂರು–ಮಸ್ಕತ್ ನೇರ ವಿಮಾನಯಾನ ಸೇವೆಯನ್ನು ಕಳೆದ ಮೂರು ತಿಂಗಳಿಂದ ವಿಮಾನಯಾನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಅನಿವಾಸಿ ಭಾರತೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಮಾರ್ಗದಲ್ಲಿ ಮೊದಲು ವಾರಕ್ಕೆ ನಾಲ್ಕು ವಿಮಾನಗಳು ನಿಯಮಿತವಾಗಿ ಸಂಚಾರ ಮಾಡುತ್ತಿದ್ದವು. ದಶಕಗಳಿಂದ ನಿರಂತರವಾಗಿ ನಡೆದಿದ್ದ ಈ ಸೇವೆ ಅಚಾನಕ್ ಸ್ಥಗಿತಗೊಂಡಿದ್ದು, ಮಸ್ಕತ್‌ನಲ್ಲಿ ನೆಲೆಸಿರುವ ಕರಾವಳಿ ಪ್ರದೇಶದ ಪ್ರಯಾಣಿಕರಿಗೆ ಸಂಕಷ್ಟ ಉಂಟುಮಾಡಿದೆ. ಗಲ್ಫ್‌ನ

ಮೈಕಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ

ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮವು ಅಕ್ಟೋಬರ್ 5 ರ ಭಾನುವಾರದಂದು ಮಂಗಳೂರಿನ ರೊಸಾರಿಯೋ ಚರ್ಚ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪೌಲ್ ಸಲ್ಡಾನಾ ಅವರು , ಎಜುಕೇರ್ ಎಂಡೋಮೆಂಟ್ ಫಂಡ್‌ನ ದೃಷ್ಟಿಕೋನ, ಉದ್ದೇಶ ಮತ್ತು ಮಹತ್ವದ ಸಾಧನೆಗಳನ್ನು

ಕನ್ನಡ ಜಾಗೃತಿ ಸಮಿತಿ ದ.ಕ. ಜಿಲ್ಲಾ ಸದಸ್ಯರಾಗಿ ರಾಜೇಶ್ ಕಡಲಕೆರೆ ಆಯ್ಕೆ

ಮೂಡುಬಿದಿರೆ : ಬ್ಲಾಕ್ ಕಾಂಗ್ರೆಸ್ ವಕ್ತಾರ, ರಂಗನಟ,ವಾಗ್ಮಿ ರಾಜೇಶ್ ಕಡಲಕೆರೆ ಅವರು ಕನ್ನಡ ಜಾಗೃತಿ ಸಮಿತಿ ದ.ಕ.ಜಿಲ್ಲಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಪ್ರತೀ ಜಿಲ್ಲಾ ಮಟ್ಟದಲ್ಲಿ ಈ ಸಮಿತಿಯನ್ನು ರಚಿಸಿದ್ದು ದ.ಕ.ಜಿಲ್ಲೆಯಿಂದ 5 ಮಂದಿ ಸದಸ್ಯರ ಪೈಕಿ ಮೂಡುಬಿದಿರೆಯಿಂದ ರಾಜೇಶ್ ಕಡಲಕೆರೆ ಅವರನ್ನು ನೇಮಕ ಮಾಡಲಾಗಿದೆ. ಹಲವಾರು ತುಳು,ಕೊಂಕಣಿ

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಮಾಲಿಕತ್ವದ ಜೂಜು ಮನೆಗಳು,ಜಾರಿ ನಿರ್ದೇಶನಾಲಯದಿಂದ ಸಮಗ್ರ ದಾಳಿ

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ವೀರೇಂದ್ರ ಮಾಲಿಕತ್ವದ ಮನೆ, ಕಚೇರಿ, ಜೂಜು ಅಡ್ಡೆಗಳು ಸೇರಿ ಇಡಿ- ಜಾರಿ ನಿರ್ದೇಶನಾಲಯವು 30 ಕಡೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.ಶಾಸಕ ವೀರೇಂದ್ರ ಮತ್ತು ಅವರ ಸಹೋದರ ಬೆಟ್ಟಿಂಗ್ ಜಾಲ ನಡೆಸುತ್ತಿರುವುದಾಗಿ ಹೇಳಲಾಗಿದೆ. ಗೋವಾದಲ್ಲಿ ಕ್ಯಾಸಿನೋ ಹೊಂದಿರುವುದಾಗಿಯೂ, ಕ್ಯಾಸಿನೋಗಳ ಪಾಲುದಾರಿಕೆ ಹೊಂದಿರುವುದಾಗಿಯೂ, ಜೂಜು ಅಡ್ಡೆಗಳ ಮಾಲಕತ್ವ ಹೊಂದಿರುವುದಾಗಿಯೂ ಹೇಳಲಾಗುತ್ತಿದೆ. ಜಾರಿ

ಕರಾವಳಿ ಪ್ರವಾಸೋದ್ಯಮ ಕುರಿತ ಜಿಲ್ಲಾ ಜನ ಪ್ರತಿನಿಧಿಗಳ ಸಭೆ

ಕರಾವಳಿ ಪ್ರವಾಸೋದ್ಯಮ ಕುರಿತಾಗಿ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ, ಸಭಾಧ್ಯಕ್ಷರು, ಸಚಿವರ ಉಪಸ್ಥಿತಿಯಲ್ಲಿ ನಡೆದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉಪಮುಖ್ಯಮಂತ್ರಿ ಶ್ರೀ

ನಟಿಗೆ ಶಾಸಕರೊಬ್ಬರಿಂದ ಕೆಟ್ಟ ಸಂದೇಶ ಮಲಯಾಳಂ ನಟಿ ರಿನಿ ಜಾರ್ಜ್ ದೂರುಕಾಂಗ್ರೆಸ್ಸನ್ನು ಗುರಿ ಮಾಡಿ ದೂರಿದ ಬಿಜೆಪಿ

ಶಾಸಕರೊಬ್ಬರು ತನಗೆ ಪೋಲಿ ಸಂದೇಶ ಕಳುಹಿಸಿದ್ದಾರೆಂದು ಮಲಯಾಳಂ ನಟಿ ರಿನಿ ಜಾರ್ಜ್ ಅವರು ಆನ್‍ಲೈನ್ ಸಂದರ್ಶನದಲ್ಲಿ ಮಾಡಿರುವ ಆರೋಪ ವೈರಲ್ ಆಗಿದೆ; ಬಿಜೆಪಿಯು ಕಾಂಗ್ರೆಸ್‍ನತ್ತ ಬೊಟ್ಟು ಮಾಡಿದೆ.ರಿನಿ ಜಾರ್ಜ್ ಅವರ ವೈರಲ್ ಆಗಿರುವ ಆನ್‍ಲೈನ್ ಇಂಟರ್‍ವ್ಯೂ ಪ್ರಕಾರ ಆ ಶಾಸಕ, ತಾರಾ ಹೋಟೆಲಿನಲ್ಲಿ ರೂಮ್ ಕಾದಿರಿಸಿ ಕಾಯುವೆ, ಬರಬೇಕು ಎಂದು ಹೇಳಿರುವುದಾಗಿಯೂ ವಿವರಿಸಲಾಗಿದೆ. ರಿನಿ ಜಾರ್ಜ್ ಆ ಶಾಸಕರ ಹೆಸರು ಇಲ್ಲವೇ ಯಾವ ಪಕ್ಷಕ್ಕೆ ಸೇರಿದವರು ಎಂದು ಹೇಳಲು

ಕಾಪು ಕಾಂಗ್ರೆಸ್ ವತಿಯಿಂದ ರಾಜೀವ್ ಗಾಂಧಿ ಮತ್ತು ದೇವರಾಜ ಅರಸು ಜಯಂತಿ ಆಚರಣೆ

ಕಾಪು ಪ್ರದೇಶದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಭಾರತದ ಪೂರ್ವ ಪ್ರಧಾನಮಂತ್ರಿ, “ಭಾರತದ ಆಧುನಿಕ ವಿಕಸನ ಶಿಲ್ಪಿ” ಎಂದು ಕರೆಯಲ್ಪಡುವ ರಾಜೀವ್ ಗಾಂಧಿ ಹಾಗೂ ಕರ್ನಾಟಕದ ದಿಗ್ಗಜ ನಾಯಕ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಹುಟ್ಟುಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, “ರಾಜೀವ್ ಗಾಂಧಿ ಅವರು ಭಾರತದ ತಂತ್ರಜ್ಞಾನ ಕ್ರಾಂತಿಯ ಮುಂಚೂಣಿಗರಾಗಿದ್ದು,