Home Posts tagged #congress (Page 5)

ಕಾಂಗ್ರೆಸ್ ಸೇರಲು ತಾಲೂಕು, ಜಿಲ್ಲೆಯ ಜನ ಉತ್ಸುಕರಾಗಿದ್ದಾರೆ :ಜಗದೀಶ್ ಶೆಟ್ಟರ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಕಾಂಗ್ರೆಸ್ 12 ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ. ಸದ್ಯದ ಪರಿಸ್ಥಿತಿ ನೋಡಿದ್ರೆ 15ಕ್ಕಿಂತ ಹೆಚ್ಚು ಸ್ಥಾನ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಸೇರಲು

ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಣಿಪುರದ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಮಣಿಪುರದ ಮಹಿಳೆಯರ ಮೇಲಿನ ದೌರ್ಜನ್ಯ, ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ದ ಹಾಗೂ ಜನರಿಗೆ ರಕ್ಷಣೆ ನೀಡಲು ಆಗ್ರಹಿಸಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಮಹಾನಗರ ಪಾಲಿಕೆಯ ಎದುರಿನ ಲಾಲ್‍ಬಾಗ್ ಮಹಾತ್ಮಾ ಗಾಂಧಿ ಪ್ರತಿಮೆಯ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾತನಾಡಿ, ಮಣಿಪುರದಲ್ಲಿ ಗಲಭೆ ಆರಂಭವಾಗಿ 3 ತಿಂಗಳಾದರೂ ಬಿಜೆಪಿಯ

ಜುಲೈ 31ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನ, ಪಾರ್ಲಿಮೆಂಟ್‍ಲ್ಲಿ ಅಸಹಕಾರ, ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜುಲೈ 31ರಂದು ನಗರದ ಲಾಲ್‍ಬಾಗ್‍ನ ಗಾಂಧಿಪ್ರತಿಮೆ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮಣಿಪುರ ಬಗ್ಗೆ ಲೋಕಸಭೆಯಲ್ಲಿ ವಿಪಕ್ಷಗಳಿಗೆ

ಸುರತ್ಕಲ್ :- ದೇಶವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ ಡಾ. ಭರತ್ ಶೆಟ್ಟಿ ವೈ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಬಿಲದಲ್ಲಿ ಅಡಗಿ ಕುಳಿತಿದ್ದ ದುಷ್ಟ ಶಕ್ತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ . ಇದಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ, ಹಾಗೂ ಅದರ ಆಡಳಿತದ ಮೇಲೆ ಯಾವುದೇ ಹೆದರಿಕೆ ಇಲ್ಲದಿರುವುದೇ ಕಾರಣ ಎಂದು ಡಾ. ಭರತ್ ಶೆಟ್ಟಿ ಹೇಳಿದ್ದಾರ ಬಿಜೆಪಿ ಅಧಿಕಾರದಲ್ಲಿದ್ದಾಗ ಉಗ್ರರ ಚಟುವಟಿಕೆಗಳನ್ನ ಸಂಪೂರ್ಣ ಮಟ್ಟ ಹಾಕಲಾಗಿತ್ತು. ಇದೀಗ ರಾಜಾರೋಷವಾಗಿ ಬಾಂಬುಗಳ ತಯಾರಿಕೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಬೆಂಗಳೂರಿನಲ್ಲಿ

ಕಾಂಗ್ರೆಸ್ ಯಾವತ್ತೂ ದ್ವೇಷ ರಾಜಕೀಯ ಮಾಡಿಲ್ಲ : ಮಾಜಿ ಸಚಿವ ರಮಾನಾಥ್ ರೈ

ಜಿಲ್ಲೆಯಲ್ಲಿ ಒಂದು ವರ್ಗದ ಹತ್ಯೆ ಆಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗಿದೆ ಅಷ್ಟೇ. ಈ ಹತ್ಯೆಯಲ್ಲಿ ಭಾಗಿಯಾಗಿದವರು ಒಬ್ಬರು ಕೂಡಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ಕಾಂಗ್ರೆಸ್ ಪಕ್ಷ ಆಡಳಿತಕ್ಕೆ

Mangaluru : ರಾಹುಲ್ ಗಾಂಧಿ ವಿರುದ್ಧ ದ್ವೇಷ ರಾಜಕಾರಣ ಆರೋಪ – ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಯುತ್ತಿದೆ. ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ನಗರದ ಪುರಭವನದ ಎದುರಿನ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮಾಜಿ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡುವ ಮೂಲಕ

ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರಾವ್ || Minister Dinesh Gundurao visited Dharamsthala

ದ.ಕ ಜಿಲ್ಲಾ ಪ್ರವಾಸ ಕೈಗೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಆಶೀರ್ವಾದ ಪಡೆದುಕೊಂಡರು.ಸಚಿವರ ಜೊತೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕೂಡಾ ಇದ್ದರು.

ಈ ಬಜೆಟ್ ಎಲ್ಲಾ ವರ್ಗದ ಜನರ ಪರವಾದ ಬಜೆಟ್ : ರಮನಾಥ ರೈ

BEST KARNATAKA BUDGET HAS EVER SEEN: RAMANATHA RAI ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್. ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ. ಈ ಬಜೆಟ್ ಎಲ್ಲಾ

ಸುಳ್ಯದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ – ದೈವಗಳ ಮೊರೆ ಹೋದ ಕಾಂಗ್ರೆಸ್ ಮುಖಂಡರು

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿದ ಆರೋಪದಲ್ಲಿ ಪಕ್ಷದಿಂದ ಉಚ್ಚಾಲಿಸಲ್ಪಟ್ಟ ಕಾಂಗ್ರೆಸ್ ಮುಖಂಡರು ಇದೀಗ ದೈವದ ಮೊರೆ ಹೋಗಿದ್ದಾರೆ. ಪ್ರಸಿದ್ದ ಕಾರಣಿಕ ಕ್ಷೇತ್ರ ಕೋಡಿಂಬಾಳ ಗ್ರಾಮದ ಮಜ್ಜಾರು ರಾಜನ್ ದೈವದ ಸಾನಿಧ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಬಳ್ಳೇರಿ, ಸುಧೀರ್ ದೇವಾಡಿಗ, ಉಷಾ ಆಂಚನ್ ನೆಲ್ಯಾಡಿ, ಆಶಾ ಲಕ್ಷ್ಮಣ್ ಗುಂಡ್ಯ ಅವರುಗಳು ದೈವಗಳ ಎದುರು ಪ್ರಾರ್ಥಿಸಿಕೊಂಡಿದ್ದಾರೆ.

ಬಿಜೆಪಿಯಲ್ಲಿ ಮನೆಯೊಂದು 10 ಬಾಗಿಲು ಎಂಬಂತಾಗಿದೆ : ಮಂಗಳೂರಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಟೀಕೆ

ಬಿಜೆಪಿಯಲ್ಲಿ ಮನೆಯೊಂದು ಬಾಗಿಲು ಹತ್ತು ಎಂಬಂತಾಗಿದೆ. ಯಾರು ಏನು ಮಾತನಾಡುತ್ತಾರೆಂದು ಗೊತ್ತಾಗುತ್ತಿಲ್ಲ. ರಾಜ್ಯ ಬಿಜೆಪಿಯ ಪರಿಸ್ಥಿತಿಯನ್ನು ನಿಯಂತ್ರಿಸಲು 56 ಇಂಚಿನ ಎದೆಯವರಿಗೂ ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬಿಜೆಪಿಯಲ್ಲಿ ಉದ್ಭವಿಸಿರುವ ಗೊಂದಲಗಳನ್ನು ನಿವಾರಿಸಲು ಕೇಂದ್ರದ ವರಿಷ್ಠರಿಗೂ ಸಾಧ್ಯವಾಗದ