Home Posts tagged #death news (Page 4)

ಉಳ್ಳಾಲ : ಶೇಂದಿ ತೆಗೆಯುವ ಸಂದರ್ಭ ತೆಂಗಿನಮರದಿಂದ ಬಿದ್ದು ಸಾವು

ಉಳ್ಳಾಲ : ಕೊಣಾಜೆ ಮುಯರ್ತೆದಾರರ ಸಂಘದ ಮಾಜಿ ನಿರ್ದೇಶಕರೋರ್ವರು ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿನ ಮನೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿ ಸದ್ಯ ಸಂತೋಷ ನಗರ ಕುಟುಂಬ ಸಮೇತರಾಗಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು.

ಬಜರಂಗದಳ ಕಾರ್ಯಕರ್ತ ರೂಪೇಶ್ ಪೂಜಾರಿ ಸಾವು

ರೂಪೇಶ್ ಪೂಜಾರಿ 3 ದಿನಗಳ ಹಿಂದೆ ಹೊಟ್ಟೆನೋವಿನಿಂದ ಮಂಗಳೂರಿನ ವೆನ್ಲೋಕ್ ಆಸ್ಪತ್ರೆಗೆ ದಾಖಲಾಗಿದ್ದರು. ಆದಿತ್ಯವಾರ ಅವರು ತೀರಿಕೊಂಡಿದ್ದು, ಸಮಯಕ್ಕೆ ಸರಿಯಾಗಿ ಆಸ್ಪತ್ರೆಯ ವೈದರು ಚಿಕಿಸ್ತೆ ನೀಡಿಲ್ಲ ನಿರ್ಲಕ್ಷ್ಯ ತೋರಿದರು ಎಂದು ಭಜರಂಗದಳದ ಕಾರ್ಯಕರ್ತರು ಆರೋಪಮಾಡಿದರು. ಅಲ್ಲದೆ ಬಜರಂಗದಳ ಮತ್ತು ವೆನ್ಲೋಕ್ ವೈದರ ನಡುವೆ ಮಾತಿನಚಕಮಕಿ ನಡೆಯಿತ್ತು. ವೈದ ಒರುವರು ಉಡಾಫೆಯ ಮಾತುಗಳನ್ನು ಆಡಿದಾಗ ಕಾರ್ಯಕರ್ತರು ವೈದನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಸೌಪರ್ಣಿಕಾ ನದಿಯಲ್ಲಿ ತೀರ್ಥಸ್ನಾನದ ವೇಳೆ ಕೊಚ್ಚಿಹೋದ ಮಹಿಳೆ : ಶವ ಪತ್ತೆ

ಬೈಂದೂರು : ಕೊಲ್ಲೂರಿಗೆ ಯಾತ್ರಾರ್ಥಿಗಳಾಗಿ ಬಂದು, ಸೌಪರ್ಣಿಕಾ ನದಿಯಲ್ಲಿ ತೀರ್ಥ ಸ್ನಾನ ಮಾಡುವಾಗ ಆಕಸ್ಮಿಕವಾಗಿ ಕಾಲುಜಾರಿ ನದಿಪಾಲಾದ ಮಹಿಳೆಯ ಶವ ಇಂದು ಭಾನುವಾರ ಮಧ್ಯಾನ್ಹ ನಡೆದಿದೆ. ಘಟನಾ ಸ್ಥಳದಿಂದ ಮೂರೂವರೆ ಕಿ. ಮೀ. ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಮುಳುಗು ತಜ್ಞ , ಸಾಹಸಿಗ ಈಶ್ವರ್ ಮಲ್ಪೆ ಅವರು ಸತತ ಪರಿಶ್ರಮದಿಂದ ಹರಿವ ನೀರಿನ ಸೆಳೆತವನ್ನೂ ಜಯಿಸಿ, ಸಾಹಸದಿಂದ ಶವ ಪತ್ತೆಹಚ್ಚಿದ್ದಾರೆ. ಹೌದು ಆದರೆ, ಈಶ್ವರ್ ಅವರು ತಮ್ಮ ಸಂಗಡಿಗರೊಂದಿಗೆ ಛಲ

ಮಂಗಳೂರು ಬಾಲಕಿಯ ಹತ್ಯೆ ಪ್ರಕರಣ – 20 ಮಂದಿ ಪೊಲೀಸರ ವಶಕ್ಕೆ

ಮಂಗಳೂರು ಪರಾರಿಯ ಹೆಂಚಿನ ಕಾರ್ಖಾನೆಯಲ್ಲಿ ಸಮೀಪದ ಮೋರಿಯಲ್ಲಿ 8 ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು  20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ರಾಜ್ ಟೈನ್ಸ್ ಹೆಂಚಿನ ಕಾರ್ಖಾನೆಯ ಕಾರ್ಮಿಕರೊಬ್ಬರ 8 ವರ್ಷದ ಮಗುವನ್ನು ಭಾನುವಾರ ಅಪಹರಿಸಿ ಹತ್ಯೆ ನಡೆಸಿ ಚರಂಡಿಗೆಸೆಯಲಾಗಿತ್ತು. ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದಾಗಿ ಕಾರ್ಮಿಕರೆಲ್ಲರೂ ಅಲ್ಲೇ ವಾಸವಿದ್ದರು ಎನ್ನಲಾಗಿದೆ. ಈ ವೇಳೆ

ಮಂಗಳೂರು: ಅಪ್ರಾಪ್ತ ಬಾಲಕಿಯ ಶವ ಚರಂಡಿಯಲ್ಲಿ ಪತ್ತೆ

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೊಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ

ಕಡಬ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು

ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ

ತೊಕ್ಕೊಟ್ಟು ಫ್ಲೈಓವರ್‌ನಿಂದ ಕೆಳಬಿದ್ದ ಬುಲೆಟ್ ಸವಾರ ಸಾವು

ಉಳ್ಳಾಲ: ಫ್ಲೈಓವರ್‌ನಿಂದ ಕೆಳಕ್ಕೆ ಬಿದ್ದು ಬುಲೆಟ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ. ಕುಂಪಲ ನಿವಾಸಿ ಸುಬ್ರಹ್ಮಣ್ಯ (50) ಸಾವನ್ನಪ್ಪಿದವರು. ಮಂಗಳೂರು ಕಡೆಯಿಂದ ಕುಂಪಲ ಕಡೆಗೆ ಬುಲೆಟ್ ವಾಹನದಲ್ಲಿ ಬರುವ ಸಂದರ್ಭ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಬುಲೆಟ್ ಫ್ಲೈಓವರ್ ಗೆ ಢಿಕ್ಕಿ ಹೊಡೆದಿದ್ದು, ಸವಾರ ಸೇತುವೆಯಿಂದ ಕೆಳಗೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯ

ಮೂಡುಬಿದಿರೆ: ಹಳೆ ಕಾರಿನೊಳಗಡೆ ಶವ ಪತ್ತೆ

ಮೂಡುಬಿದಿರೆ: 2೦ ದಿನಗಳ ಹಿಂದೆ ನಾಪತ್ತೆಯಾಗಿದ್ದ ವೃದ್ಧರೊಬ್ಬರ ಶವವು ಜ್ಯೋತಿನಗರ ಗಾಂಧಿಪಾರ್ಕ್ ಬಳಿ ನಿಲ್ಲಿಸಲಾಗಿದ್ದ ಹಳೆ ಕಾರಿನೊಳಗಡೆ ಬುಧವಾರ ಮಧ್ಯಾಹ್ನ ಪತ್ತೆಯಾಗಿದೆ. ಪುರಸಭೆ ವ್ಯಾಪ್ತಿಯ ಕರಿಂಜೆ ಗ್ರಾಮ ನಿವಾಸಿ ಶ್ರೀಧರ ಶೆಟ್ಟಿ(73) ಸೆಪ್ಟೆಂಬರ್ 29ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಶ್ರೀಧರ ಶೆಟ್ಟಿ ಅವರ ಮಗ ರೋಹಿತ್ ಶೆಟ್ಟಿ ಅವರು ಅಕ್ಟೋಬರ್ 6ರಂದು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬುಧವಾರ ಜ್ಯೋತಿನಗರ ಮೆಸ್ಕಾಂ ಪರಿಸರದಲ್ಲಿ

ವಿಟ್ಲದ ಇಡ್ಕಿದು ಎಂಬಲ್ಲಿ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು

ವಿಟ್ಲ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ   ನಿಡ್ಪಳ್ಳಿ ಗ್ರಾಮದ ವಾಲ್ತಾಜೆ ನಾರಾಯಣ ನಾಯ್ಕ್ ರವರ ಪುತ್ರ, ರಿಬ್ಕೋ ಟ್ರೇಡಿಂಗ್ ಕಂಪೆನಿಯ ನೌಕರ ಸುರೇಶ್ ನಾಯ್ಕ್ ಮೃತ ದುರ್ದೈವಿ. ಬೆಳಿಗ್ಗೆ ಸ್ಥಳೀಯ ನಿವಾಸಿಯೋರ್ವರು ಆಟೋ ರಿಕ್ಷಾವೊಂದರಲ್ಲಿ ಮಿತ್ತೂರಿಗೆ ಹಾಲು

ಕಾರು ಮತ್ತು ಆಟೋ ನಡುವೆ ಪರಸ್ಪರ ಡಿಕ್ಕಿ ಆಟೊ ಚಾಲಕ ಸ್ಥಳದಲ್ಲೇ ಸಾವು

ಹಾಸನ : ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯಲ್ಲಿ ಇಂದು ಕಾರು ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿದು. ಇದರಿಂದಾಗಿ ಆಟೋ ಚಾಲಕ ಐಚನಹಳ್ಳಿಯ ನಾಗಯ್ಯ (ನಾಗ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕನ ಅತಿಯಾದ ವೇಗವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು , ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಇತರರು ಕೂಡ ಗಾಯಗೊಂಡಿರುವ ಘಟನೆ ನಡೆದಿದೆ. ಹೊಳೆನರಸೀಪುರ ಆನಂತರ