ಕುಂದಾಪುರ: ಮೊವಾಡಿ ಸೇತುವೆ ಬಳಿ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. ಇಲ್ಲಿನ ತ್ರಾಸಿ ಸಮೀಪದ ಹೋಲಿಕ್ರಾಸ್ ನಿವಾಸಿ ಮಹೇಂದ್ರ (24) ಮೃತ ಯುವಕ. ಭಾನುವಾರ ಸಂಜೆ ಮೊವಾಡಿಯ ಸೌಪರ್ಣಿಕಾ ನದಿ ತೀರಕ್ಕೆ
ಉಡುಪಿ: ಕೆಲವು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ, ಲೆಕ್ಕಪರಿಶೋಧಕನ ಶವವು, ಮನೆಯ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ. ಅಗ್ನಿಶಾಮಕ ದಳದ ಸಹಾಯದಿಂದ ಕಳೇಬರವನ್ನು ಮೇಲೆತ್ತಲಾಗಿದೆ. ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಹೇಳಲಾಗುತ್ತಿದೆ. ಕಳೇಬರವನ್ನು ವೈದ್ಯಕೀಯ ಪರೀಕ್ಷೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ನೆರವಾದರು.
ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ ಆರ್ಥಿಕ ನಷ್ಟದಿಂದಾಗಿ ದಂಪತಿ ಆತ್ಮಹತ್ಯೆ ಮಾಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಕಳೆದ 2 ತಿಂಗಳಿಂದ ಕೆಲಸವಿಲ್ಲದೇ ಮನೆಯಲ್ಲಿ ಇದ್ದ ದಂಪತಿ ತೀರಾ ಹಣಕಾಸಿನ ಮುಗ್ಗಟ್ಟಿಗೆ ಬಿದ್ದು, ಆತ್ಮಹತ್ಯೆಗೆ ಶರಣಾರಾಗಿದ್ದಾರೆ. ಈ ಘಟನೆ ಪತಿಯು ಕಲಾವಿದರು ಆಗಿದ್ದು, ಇದೀಗ ಅವರ ಸಾವು ಕಲಾವಿದರಿಗೆ ತಲ್ಲಣಗೊಳ್ಳಿಸಿದೆ. ಪಿಂಟೋಸ್ ಲೇನ್ ನಿವಾಸಿ 55 ವರ್ಷದ ಸುರೇಶ್ ಮತ್ತು ವಾಣಿಶ್ರೀ ಮೃತಪಟ್ಟವರು. ಸುರೇಶ್ ಅವರ ಮೃತದೇಹ ಬಾವಿಯಲ್ಲಿ