ದೇಶದಲ್ಲಿ ಈಗಾಗಲೇ ಕೇಂದ್ರ ಗೃಹ ಇಲಾಖೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ನಿಷೇಧವನ್ನು ಹೊರಡಿಸಿರುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)ಪ್ರವೀಣ್ ಸೂದ್ ತಿಳಿಸಿದ್ದಾರೆ.ರಾಜ್ಯದಲ್ಲಿ ಪಿಎಫ್ ಐ ಚಟುವಟಿಕೆಗಳನ್ನು ನಡೆಸುವುದಾಗಲಿ, ಆ ಸಂಘಟನೆ ಪರವಾಗಿ ಮಾತನಾಡುವುದಾಗಲೀ ಮಾಡಬಾರದು. ಅಂತಹವರ
ಯಾವುದೇ ಪ್ರಕರಣವಿದ್ದರೂ ಅದರ ಬಗ್ಗೆ ಕೆಲವು ನಾಗರಿಕರಿಗೆ ಮಾಹಿತಿ ಇರುತ್ತದೆ. ಅಂಥವರು ಮುಂದೆ ಬಂದು ಪೆÇಲೀಸರಿಗೆ ಮಾಹಿತಿ ನೀಡಿದರೆ ಪ್ರಕರಣ ಬೇಧಿಸಲು ಸುಲಭವಾಗುತ್ತದೆ. ಮಾಹಿತಿ ನೀಡದಿದ್ದಲ್ಲಿ ಅವರೂ ಇದರಲ್ಲಿ ಭಾಗಿದಾರರೆಂದು ನಾವು ತಿಳಿಯಬೇಕಾಗುತ್ತದೆ ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದರು. ಮಂಗಳೂರಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರಷ್ಟೇ ನಾಗರಿಕರ ಜವಾಬ್ದಾರಿಯೂ ಇದೆ. ಆದ್ದರಿಂದ