ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀರಿನ ಅಭಾವ ತಪ್ಪಿಸಲು ಟ್ಯಾಂಕರ್ ಮಾನಿಟರಿಂಗ್ ಆಪ್ನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು. ತಾಂತ್ರಿಕ ತೊಂದರೆಗಳಾಗದಂತೆ ಪೂರ್ವಭಾವಿಯಾಗಿ ಅಧಿಕಾರಿಗಳಿಗೆ, ಪಿಡಿಓಗಳಿಗೆ ಪ್ರಾತ್ಯಕ್ಷಿಕೆ ಹಾಗೂ ತರಬೇತಿಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಹೇಳಿದರು.
ಮೂಡುಬಿದಿರೆ: ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಗ್ರಾಮದ ಕೋಂಕೆ ಎಂಬಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕೆಟ್ಟು 4 ದಿನಗಳಾಗಿದ್ದು ಸ್ಥಳಿಯ ನಿವಾಸಿಗಳು ಕುಡಿಯಲೂ ನೀರಿಲ್ಲದೆ ತೊಂದರೆ ಅನುಭವಿಸಿದ್ದಾರೆ. ಈ ಭಾಗದಲ್ಲಿ ಬಹಳಷ್ಟು ಕೃಷಿಕರೂ ಇದ್ದು ಕೃಷಿಗೆ ನೀರು ಬಿಡಲೂ ಸಾಧ್ಯವಾಗದೆ ತೊಂದರೆ ಅನುಭವಿಸಿದರೂ ಮೆಸ್ಕಾಂ ಇಲಾಖೆಯ ಎ.ಇ.ಇ., ಎಸ್ .ಒ. ಸಹಿತ ಸಿಬ್ಬಂದಿಗಳು ವಿಷಯ ತಿಳಿದರೂ ಸಹಕರಿಸದೆ ಬಹಳಷ್ಟು ತೊಂದರೆ ನೀಡಿದ್ದಾರೆ. ಕೊನೆಕೊನೆಗೆ