Home Posts tagged #Election (Page 4)

ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರಿಂದ ಮತ ಯಾಚನೆ

ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಕಂಡ್ಲೂರಿನ ಸುತ್ತಮುತ್ತಲಿನಲ್ಲಿ ಪ್ರದೇಶಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗುರುರಾಜ್ ಗಂಟಿಹೊಳೆಯವರು ಈ ಬಾರಿ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳನ್ನಾಗಿ ಪಕ್ಷದವರು ಟಿಕೆಟ್ ನೀಡಿದ್ದಾರೆ. ಈ ಬಾರಿ ಬಿಜೆಪಿ ಪಕ್ಷವನ್ನು

“5 ವರ್ಷಗಳ ಕ್ಷೇತ್ರದ ಅಭಿವೃದ್ಧಿಯೇ ನನಗೆ ಶ್ರೀರಕ್ಷೆ” : ಉಮಾನಾಥ್ ಕೋಟ್ಯಾನ್

ಮೂಲ್ಕಿ: “ಕಳೆದ 5 ವರ್ಷಗಳ ಹಿಂದೆ ನಾನು ಮೊದಲ ಬಾರಿಗೆ ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದೆ. ಇದಕ್ಕೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಶ್ರಮವೇ ಕಾರಣ. ವಿವಿಧ ಇಲಾಖೆಗಳಿಂದ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶ್ರಮಿಸಿದ್ದೇನೆ. ಹೀಗಾಗಿ ಮತ ಯಾಚನೆಗೆ ಮನೆ ಮನೆಗೆ ಹೋದಾಗ ಬಹಳ ಒಳ್ಳೆಯ ಸ್ಪಂದನೆ ಜನರಿಂದ ಸಿಗುತ್ತಿದೆ. ಮೇ 3ರಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮೂಲ್ಕಿಗೆ ಬರಲಿದ್ದಾರೆ. ಇಲ್ಲಿಯವರೆಗೆ

ಬಿಜೆಪಿ ಪಕ್ಷ ಸೋಲಿನ ಭಯದಿಂದ ಸುಳ್ಳು ಸುದ್ದಿ, ಅಪಪ್ರಚಾರಗಳ ಮೊರೆ ಹೋಗಿದೆ: ಇನಾಯತ್ ಅಲಿ

“ ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಇಂದು ಮುತ್ತೂರು ಗ್ರಾಮ ವ್ಯಾಪ್ತಿಯ ಮನೆ ಮನೆಗೆ ತೆರಳಿ ಕಾಂಗ್ರೆಸ್ ನ ನಾಲ್ಕು ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿ, ಕ್ಷೇತ್ರದ ಪ್ರಗತಿಗಾಗಿ ಕಾಂಗ್ರೆಸ್ ಗೆ ಬೆಂಬಲ ನೀಡುವಂತೆ ಜನರಲ್ಲಿ ಮತಯಾಚಿಸಿದರು.ಚುನಾವಣಾ ಪ್ರಚಾರದ ಭಾಗವಾಗಿ ಇಂದು ಮುತ್ತೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ನೌಶಾದ್ ಮುತ್ತೂರು ಅವರ ನಿವಾಸದಲ್ಲಿ ಸಭೆ ನಡೆಸಿ ಮಾತನಾಡಿ,

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್‌ ಆರ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್‌ ಆರ್‌ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ.ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್‌ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.

ಉಡುಪಿ ಕಾಂಗ್ರೆಸ್ ಪ್ರಚಾರಕ್ಕೆ ಕೈ ಜೋಡಿಸಿದ ಕೃಷ್ಣಮೂರ್ತಿ ಆಚಾರ್ಯ

ಕಾಂಗ್ರೆಸ್‍ಗೆ ತಲೆನೋವಾಗಿದ್ದ ಬಂಡಾಯ ಅಭ್ಯರ್ಥಿ ಇದೀಗ ಕಾಂಗ್ರೆಸ್‍ಗೆ ವಾಪಸ್ ಅಗಿದ್ದಾರೆ. ನಿನ್ನೆ ನಡೆದ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮತ್ತೆ ತನ್ನ ಮನೆಯನ್ನು ಸೇರಿಕೊಂಡಿದ್ದಾರೆ. ಟಿಕೆಟ್ ಸಿಗದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣ ಮೂರ್ತಿ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.ಇದು ಕಾಂಗ್ರೆಸ್ ಗೆ ತಲೆನೋವಾಗಿತ್ತು. ಹಲವು ಬಾರಿ ಸಂದಾನ ಪ್ರಕ್ರಿಯೆ ನಡೆಸಿದರು

ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲ ಇಲ್ಲ : ಕುಕ್ಕೆಯಲ್ಲಿ ಸಚಿವ ಎಸ್.ಅಂಗಾರ

ಸುಬ್ರಹ್ಮಣ್ಯ: ಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ ನಿಗಧಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಕೆಲಸ ಕಾರ್ಯಗಳನ್ನು ಆರಂಭಿಸಲಾಗಿದೆ. ಅಭ್ಯರ್ಥಿ ಆಯ್ಕೆ ಮಾಡಿ ಇನ್ನು ನಿರ್ಧಾರ ಹೈಕಮಾಂಡ್ ಗೆ ಕಳುಹಿಸಬೇಕಿದೆ. ಆದರೆ ಅಭ್ಯರ್ಥಿ ಆಯ್ಕೆಯಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.ಅವರು ರವಿವಾರ ಕುಕ್ಕೆ ಶ್ರೀ

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ : ವಿಟ್ಲ ವ್ಯಾಪ್ತಿಯಲ್ಲಿ ತಪಾಸಣಾ ಕೇಂದ್ರಗಳ ಸ್ಥಾಪನೆ

ವಿಟ್ಲ: ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೆÇೀಸ್ಟ್ ಹೊರತಾಗಿ ಬಿಟ್ಟಿರುವ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮುಂದಿನ ಎರಡು ದಿನದಲ್ಲಿ ಪ್ಯಾರಾ ಮಿಲಿಟರಿಯನ್ನು ಕರೆಸಿಕೊಳ್ಳಲಾಗುತ್ತಿದ್ದು, ಅವರಿಂದಲೂ ತಪಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಪಶ್ಚಿಮ ವಲಯ ಐ.ಜಿ. ಡಾ. ಚಂದ್ರಗುಪ್ತ ಹೇಳಿದರು. ಚುನಾವಣಾ ಹಿನ್ನಲೆಯಲ್ಲಿ

ಚುನಾವಣೆ ಜಾಗೃತಿ : ಬಣ್ಣದ ಚಿತ್ರಗಳಿಂದ ಸೆಳೆಯುವ ಮತಗಟ್ಟೆಗಳು

ಬಂಟ್ವಾಳ: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ತಯಾರಿಯನ್ನು ಆರಂಭಿಸಿದೆ. ಇತ್ತ ಚುನಾವಣೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಲು ದ.ಕ. ಜಿಲ್ಲಾಡಳಿತವೂ ಕಾಯೋನ್ಮುಖವಾಗಿದ್ದು ಆಯ್ದ ಮತಗಟ್ಟೆಗಳಲ್ಲಿ(ಶಾಲೆಗಳಲ್ಲಿ) ಬಣ್ಣದ ಚಿತ್ರಗಳನ್ನು ರಚಿಸಿ ಮತದಾರರನ್ನು ಮತಗಟ್ಟೆಗೆ ಸೆಳೆಯಲು ಹೊಸ ಪ್ರಯತ್ನ ನಡೆಸಿದೆ. ಕರಾವಳಿಯ ಜಾನಪದ ಕಲೆಗಳಾದ ಯಕ್ಷಗಾನ, ಕಂಬಳ ಸೇರಿದಂತೆ ಪರಂಪರೆ

ಚುನಾವಣಾ ಎಪೆಕ್ಟ್ : ನವಗುಳಿಗ ದೈವಕ್ಕೆ ಹರಕೆ ತೀರಿಸಲು ಬಂದ ಶಾಸಕ ಹರೀಶ್ ಪೂಂಜಾ

ಮಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ – ದೇವರುಗಳ ಮೊರೆಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜಾ ನವ ಗುಳಿಗ ದೈವಗಳಿಗೆ ಕೋಲ ಸೇವೆಯನ್ನು ನೀಡಿದ್ದಾರೆ. ಹೌದು ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವಗುಳಿಗರಿಗೆ ಕೋಲ ನೀಡುವೆನೆಂದು ಶಾಸಕ ಕಳೆದ ಚುನಾವಣಾ ಪೂರ್ವದಲ್ಲಿ ಹರಕೆ ಹೊತ್ತಿದ್ದರು. ಈ

ಉಡುಪಿ ನಗರದೊಳಗೆ ಸಂಚರಿಸುವ ಆಟೋ ಚಾಲಕರ ಸಮಸ್ಯೆ ಬಗೆ ಹರಿಸದಿದ್ದರೆ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಉಡುಪಿ ಶಾಸಕ ರಘುಪತಿ ಭಟ್ ವಿರುದ್ದ ಅಟೋ ಚಾಲಕರು ತಿರುಗಿ ಬಿದ್ದಿದ್ದಾರೆ. ನಗರದ ಒಳಗಡೆ ಓಡಾಡುವ ಅಟೋಚಾಲಕರ ಮಧ್ಯೆ ಬಿರುಕು ಮೂಡಿಸಿ, ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎನ್ನುವ ಅರೋಪಗಳನ್ನು ಅಟೋ ಚಾಲಕರು ಮಾಡಿದ್ದಾರೆ.ಅಷ್ಟೇ ಅಲ್ಲ ನಗರದೊಳಗಡೆ ಸಂಚರಿಸುವ ಅಟೋ ಚಾಲಕರ ಸಮಸ್ಯೆಗಳನ್ನು ಬಗೆ ಹರಿಸದಿದ್ದಲ್ಲಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆಯನ್ನು ಕೂಡ ಅಟೊ ಚಾಲಕರು ನೀಡಿದ್ದಾರೆ. ನಿಯಮದಂತೆ ನಗರದಲ್ಲಿ ಸಂಚರಿಸುವ ಅಟೋಗಳು ರೋಟೆಶನ್ ಮಾದರಿಯಲ್ಲಿ