ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಮಾ.30ರಂದು ರಾತ್ರಿ ಬೈಕ್ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸಾವರ, ಗೋಳಿತ್ತೊಟ್ಟು ಗ್ರಾಮದ ಸಣ್ಣಂಪಾಡಿ ನಿವಾಸಿ ವಿನಯ್(26ವ.)ಅವರು ಚಿಕಿತ್ಸೆಗೆ ಸ್ಪಂದಿಸದೆ ಮಾ.31ರ ಮಧ್ಯಾಹ್ನದ ವೇಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿದ್ದ
ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಅತೀ ವೇಗದಿಂದ ಬಂದ ಟೆಂಪೋವೊಂದು ದ್ವಿಚಕ್ರ ಸವಾರನಿಗೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಾಯಗೊಂಡ ಘಟನೆ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ಮಂಗಳೂರಿನ ಕುಂಟಲ್ಪಾಡಿಪದವು ನಿವಾಸಿ ಸಚಿನ್ (29) ಮೃತ ದ್ವಿಚಕ್ರ ಸವಾರ. ಈತನೊಂದಿಗೆ ಪ್ರಯಾಣಿಸುತ್ತಿದ್ದ ಬೆಳ್ತಂಗಡಿಯ ಅಂಕೀತ್ ಗಾಯಗೊಂಡಿದ್ದು, ಈತನನ್ನು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.