Home Posts tagged heart attack

ಮಂಗಳೂರು : ತುಳು ರಂಗಭೂಮಿ, ತುಳು ಚಿತ್ರ ನಟ ವಿವೇಕ್ ಮಾಡೂರು ನಿಧನ

ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಅವರನ್ನು ಇಂದು ಬೆಳಿಗ್ಗೆ ಮನೆ ಮಂದಿ ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತ

ಮೂಡುಬಿದಿರೆ: ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ ನಿಧನ

ಮೂಡುಬಿದಿರೆ: ಇಲ್ಲಿನ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಗೌರವಾಧ್ಯಕ್ಷ, ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ (57ವ) ಅವರು ಹೃದಯಾಘಾತಕ್ಕೊಳಗಾಗಿ ಶನಿವಾರ ರಾತ್ರಿ ನಿಧನ ಹೊಂದಿದರು. ಪ್ರಾಂತ್ಯ ಗಾಮದ ವಿಶಾಲ್ ನಗರ ನಿವಾಸಿಯಾಗಿರುವ ಗಣೇಶ್ ರಾವ್ ಅವರು ಮೂಡುಬಿದಿರೆಯಲ್ಲಿ ಹಲವು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ದುಡಿಯುತ್ತಿದ್ದರು. ಅಲ್ಲದೆ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಸ್ಥಾಪಕ ಸದಸ್ಯರಾಗಿದ್ದ ಅವರು 20 ವರ್ಷಗಳ ಕಾಲ ಅಧ್ಯಕ್ಷರಾಗಿ ಹಾಗೂ

ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ

ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ

ಪುತ್ತೂರು : ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಪತ್ನಿ ಮತ್ತು ಮೂವರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗ ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ. 1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬ್ಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್ ರವರು 34

ಉಡುಪಿ: ಹಿರಿಯ ನರರೋಗ ತಜ್ಞ ಡಾ.ರಾಜಾ ನಿಧನ

ಉಡುಪಿ ಆದರ್ಶ ಆಸ್ಪತ್ರೆಯ ವೈದ್ಯ ಹಾಗೂ ಹಿರಿಯ ನರರೋಗ ತಜ್ಞ ಡಾ.ರಾಜಾ ರವಿವಾರ ಹೃದಯಾಘಾತದಿಂದ ನಿಧನರಾದರು. ಮಣಿಪಾಲದ ರಾಜೀವನಗರದ ಮನೆಯಲ್ಲಿ ಬೆಳಗ್ಗೆ ಹೃದಯಾಘಾತಕ್ಕೆ ಒಳಗಾದ ಇವರನ್ನು ಕೂಡಲೇ ಉಡುಪಿ ಆದರ್ಶ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಇವರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.