ಕಡಬ :ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಕಡಬ ತಾಲೂಕು ಇದರ ಪದಗ್ರಹಣ ಕಾರ್ಯಕ್ರಮ, ಸುಸಜ್ಜಿತ ನೂತನ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಸ್ಪಂದನ ಸಮುದಾಯ ಸಹಕಾರ ಸಂಘ (ರಿ.) ಕಡಬ ಇದರ ಉದ್ಘಾಟನಾ ಕಾರ್ಯಕ್ರಮವನ್ನು 2023ರ ಡಿಸೆಂಬರ್ 26ರಂದು ಕಡಬದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ. ಶ್ರೀ
ಕಡಬ :ಉಡುಪಿ ಅಜ್ಜರಕಾಡು ಸ್ಟೇಡಿಯಂ ಇಲ್ಲಿ ನಡೆದ 14 ರ ವಯಮಾನದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಅವನಿ ಪಿ. ಬಿ. ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 4*100 ಮೀಟರ್ ರೀಲೆ ಯಲ್ಲಿ ರಿಲೇ ತಂಡದ ವಿದ್ಯಾರ್ಥಿಗಳಾದ ಕುಮಾರಿ ಫಿದಾ , ತೀಕ್ಷಾ,ಅವನಿ , ಧ್ರತಿ ಇವರು ಬೆಳ್ಳಿಯ ಪದಕ ಗಳಿಸಿರುತ್ತಾರೆ. ಸಂಸ್ಥೆಯ ಸಂಚಾಲಕರಾದ ವಂದನೀಯ ಫಾದರ್ ಪೌಲ್
ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರು ಬುಧವಾರ ಸುಬ್ರಹ್ಮಣ್ಯಕ್ಕೆ ಹೋಗಿ ಮಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಸಂಜೆ ಕಡಬದಲ್ಲಿ ಸಾರ್ವಜನಿರಿಂದ ಮನವಿ ಸ್ವೀಕರಿಸಿದರು. ಜಿಲ್ಲಾಧಿಕಾರಿಯವರು ಕಡಬಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದ್ದರೂ ಸುಬ್ರಹ್ಮಣ್ಯದಿಂದ ಹೊರಡುವಾಗ ತಡವಾಗಿರುವುದರಿಂದ ಕಡಬದ ಕಾರ್ಯಕ್ರಮ ರದ್ದು ಗೊಳಿಸಿದ್ದರು. ಜಿಲ್ಲಾಧಿಕಾರಿಯವರ ಕಾರು ಕಡಬಕ್ಕೆ ಆಗಮಿಸುತ್ತಿದ್ದಂತೆ ಸಾರ್ವಜನಿಕರು ಕಾರು ತಡೆದು ನಿಲ್ಲಿಸಿ ಮನವಿ ಸಲ್ಲಿಸಿದರು. ಸಾರ್ವಜನಿಕರ
ಕಡಬ, ನ.07. ತಿಂಗಳ ಹಿಂದೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಕೊಣಾಜೆ ರಸ್ತೆಯಲ್ಲಿ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರದಂದು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕೊಣಾಜೆ ಸಮೀಪದ ಗೇರ್ತಿಲ ನಿವಾಸಿ ಚೋಮ ಎಂದು ಗುರುತಿಸಲಾಗಿದೆ. ಚೋಮ ಅವರು ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು – ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭೀರ ಗಾಯಗೊಂಡಿದ್ದರು. ಬಳಿಕ
ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್.ಡಿ.ಎ. 25 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದೀಗ ಜೆಡಿಎಸ್ ಕೂಡ ಎನ್.ಡಿ.ಎ. ಜೊತೆಯಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳುವ ಮೂಲಕ ವಿಧಾನ ಸಭಾ ಚುನಾವಣೆಯಲ್ಲಿ ಕಳೆದುಕೊಂಡದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು. ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರೊಂದಿಗೆ
ಕಡಬದ ನೆಲ್ಯಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲ್ಯಾಡಿಯಿಂದ-ಪಡುಬೆಟ್ಟು ತನಕ ಹೋಗುವ ರಸ್ತೆ ಕೆಸರು ತುಂಬಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ಸಂಚರಿಸಲು ಕಷ್ಟ ಅನುಭವಿಸುತ್ತಿದ್ದಾರೆ. ಕಡಬ ತಾಲೂಕಿನ ನೆಲ್ಯಾಡಿ ಗ್ರಾಮ ಪಂಚಾಯತ್ ಗೆ ಒಳಪಟ್ಟ ನೆಲ್ಯಾಡಿಯಿಂದ-ಪಡುಬೆಟ್ಟು ತನಕ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಪಂಚಾಯತ್ ವತಿಯಿಂದ ಮಣ್ಣುಹಾಕಿ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಜನಸಾಮಾನ್ಯರು ಹಾಗೂ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು
ಮೂಡುಬಿದಿರೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಬಾಲಕಿಯರ ವಿಭಾಗದ 1500 ಮತ್ತು 3000 ಕಿ.ಮೀ ಓಟದಲ್ಲಿ ಪುತ್ತೂರು ತಾಲೂಕಿನ ಕಡಬ ಸ.ಪ.ಪೂ.ಕಾಲೇಜಿನ ಚರಿಷ್ಮಾ ಕೂಟ ದಾಖಲೆಯನ್ನು ನಿರ್ಮಿಸಿದ್ದಾರೆ. ಎಡಪದವು ಪ.ಪೂ.ಕಾಲೇಜಿನ ಸೌಮ್ಯ ಕೆ.ಪಿ ಅವರು 2004ರಲ್ಲಿ 5:01.70 ಸೆಕುಂಡು ನಲ್ಲಿ ಕ್ರಮಿಸಿ ಮಾಡಿರುವ ದಾಖಲೆಯನ್ನು ಚರಿಷ್ಮಾ ಅವರು 4:53.9 ಸೆಕುಂಡಿನಲ್ಲಿ ಕ್ರಮಿಸುವ ಮೂಲಕ ಹಾಗೂ 3000 ಓಟದಲ್ಲಿ 10:44.7 ಸೆಕುಂಡಿನಲ್ಲಿ
ಕಡಬ :ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ಪಲ್ಟಿಯಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕೋಡಂದೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಕಡಬ: ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಆನೆ ಹಾಗೂ ಇತರ ಪ್ರಾಣಿಗಳ ಉಪಟಳ ಮಿತಿ ಮೀರುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಗ್ರಹಿಸಿ ಅ.26ರಂದು ಕಡಬದಲ್ಲಿ ಬೃಹತ್ ಮೆರವಣಿಗೆ ನಡೆಸಿ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದು ಐತ್ತೂರು ಮರ್ಧಾಳ ಜಾಗೃತ ರೈತ ಕುಟುಂಬಗಳ ಒಕ್ಕೂಟದ ಅಧ್ಯಕ್ಷ ಅತ್ಯಡ್ಕ ನಾರಾಯಣ ಶೆಟ್ಟಿ ತಿಳಿಸಿದ್ದಾರೆ. ಕಡಬದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಆನೆ ಉಪಟಳದಿಂದ ಬೇಸತ್ತ ರೈತರು ಒಗ್ಗೂಡಿ
ದೇಶದ ರಕ್ಷಣೆಯೊಂದಿಗೆ ನಮ್ಮಲ್ಲರ ರಕ್ಷಣೆ ಮಾಡುವ ಯೋಧರಿಗೆ ಸ್ಮಾರಕ ನಿರ್ಮಾಣ ಮಾಡುವ ಕಾರ್ಯಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿಯವರು ಯೋಧರಿಗೆ ಅತ್ಯತ ಹೆಚ್ಚು ಗೌರವ ನೀಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಸುಳ್ಯ ಕ್ಷೇತ್ರ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಕಡಬದಲ್ಲಿ ನೆಹರು ಯುವ ಕೇಂದ್ರ ಮಂಗಳೂರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಸ,ಪ.ಪೂ.ಕಾಲೇಜು ಕಡಬ ,ತಾಲೂಕು ಯುವಜನ ಒಕ್ಕೂಟ ಕಡಬ, ತಾ.ಪಂ.ಕಡಬ ,ಪಟ್ಟಣ