Home Posts tagged #kambala (Page 2)

13ನೇ ವರ್ಷದ ಪಣಪಿಲದಲ್ಲಿ ಜಯ-ವಿಜಯ ಜೋಡುಕರೆ ಕಂಬಳ

ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ನಡೆಯಿತು. 2022-23 ನೇ ಸಾಲಿನ ಕೊನೆಯ ಕಂಬಳ ಇದಾಗಿದ್ದು, ಊರಿನ ದೈವಸ್ಥಾನ, ದೇವಸ್ಥಾನಗಳ ಪ್ರಸಾದ ಮತ್ತು ತೀರ್ಥವನ್ನು ಕರೆಗೆ ಹಾಕುವ ಮೂಲಕ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ

ಏ.8ರಂದು ಪಣಪಿಲದಲ್ಲಿ ಜಯ ವಿಜಯ ಜೋಡುಕರೆ ಕಂಬಳ

ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ಹದಿಮೂರನೇ ವರುಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಏಪ್ರಿಲ್ 8ರಂದು ಸಂಜೆ ನಡೆಯಲಿದೆ ಎಂದು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಅಶ್ವತ್ಥ್ ಪಣಪಿಲ ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 4 ಎಕರೆ ಜಾಗದಲ್ಲಿ ಕಂಬಳ ನಡೆಯಲಿದ್ದು, ನೂತನವಾಗಿ 133.5 ಮೀ ಉದ್ದದ ಕರೆ ನಿರ್ಮಾಣಗೊಂಡಿದೆ. ಕೋಣಗಳನ್ನು ಕಟ್ಟಲು ತಂಪಾದ ಜಾಗ, ಉತ್ತಮ ನೀರಿನ ವ್ಯವಸ್ಥೆ,

ಮಾ.25ರಂದು ಮೋರ್ಲ ಬೋಳದಲ್ಲಿ ಪ್ರಥಮ ವರ್ಷದ ನರಿಂಗಾನ ಕಂಬಳ

ಉಳ್ಳಾಲ: ಇಲ್ಲಿನ ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಸರಕಾರಿ ಕಂಬಳ ಆಯೋಜನೆ ಮಾಡಲಾಗಿದ್ದು ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ಲವಕುಶ ಜೋಡುಕರೆ ಹೆಸರಿನಲ್ಲಿ ನರಿಂಗಾನ ಕಂಬಳ ಮಾ. 25ರಂದು ಹೊನಲು ಬೆಳಕಿನಲ್ಲಿ ನಡೆಯಲಿದ್ದು ಬೆಳಗ್ಗೆ 10.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ತುಳುನಾಡಿನ ಧಾರ್ಮಿಕ ವಿಧಿಗಳೊಂದಿಗೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.ಕಂಬಳ ಕರೆಯ ಬಳಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಮಾ. 25ರಂದು

ಮಾ.4 ರಂದು ಮೂಡೂರು ಪಡೂರು ಕಂಬಳ

ಬಂಟ್ವಾಳ: ತಾಲೂಕಿನ ನಾವೂರ ಗ್ರಾಮದ ಕೂಡಿಬೈಲು ಎಂಬಲ್ಲಿ 12 ನೇ ವರ್ಷದ ಮೂಡೂರು-ಪಡೂರು “ಬಂಟ್ವಾಳ ಕಂಬಳ” ವು ಮಾ.4 ರಂದು ವೈಭವಯುತವಾಗಿ ನಡೆಯಲಿದೆ ಎಂದು ಮಾಜಿ ಸಚಿವ, ಕಂಬಳ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದ್ದಾರೆ. ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಬಳದ ಯಶಸ್ವಿಗೆ ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ ಎಂದರು. ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ವತಿಯಿಂದ ಧರ್ಮಸ್ಥಳದ

ಇಂದು ಕಾಂತಾಬಾರೆ ಬೂದಾಬಾರೆ ಜೋಡುಕರೆ ಕಂಬಳ

ಕಿನ್ನಿಗೋಳಿ: ಕಂಬಳವು ಕರಾವಳಿ ಭಾಗದ ಒಂದು ಅಚ್ಚುಮೆಚ್ಚಿನ ಜಾನಪದ ಕ್ರೀಡೆಯಾಗಿದ್ದು ಇದು ಜನರ ಜೀವನದ ಅಂಗವಾಗಿದೆ. ನಮ್ಮ ತುಳುನಾಡಿನ ಕೃಷಿ ಮತ್ತು ಸಾಂಸ್ಕೃತಿಕ ಬದುಕಿನ ಅವಿಭಾಜ್ಯ ಭಾಗವಾಗಿದ್ದು ಕಂಬಳದಿಂದ ನಮ್ಮ ಸಂಸ್ಕೃತಿ ಉಳಿಯುವುದರ ಜತೆಗೆ ಪ್ರಾಣಿ ಪ್ರೀತಿಯೂ ಹೆಚ್ಚಾಗುತ್ತದೆ. ಎಂದು ಆಧ್ಯಾತ್ಮ ಗುರು, ಅಂತಾರಾಷ್ಟ್ರೀಯ ವಾಸ್ತುತಜ್ಞ, ವೈಜ್ಞಾನಿಕ ಜ್ಯೋತಿಷಿ ಶ್ರೀಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಹೇಳಿದರು. ಅವರು ಕಿನ್ನಿಗೋಳಿ ಸಮೀಪದ ಐಕಳದಲ್ಲಿ ನಡೆಯುವ

ಪಾನಮತ್ತ ತೀರ್ಪುಗಾರರು ಕಂಬಳದಲ್ಲಿ ಭಾಗವಹಿಸುವಂತಿಲ್ಲ || Kambala

ಮೂಡುಬಿದಿರೆ: ತೀರ್ಪುಗಾರರು ಮಧ್ಯಪಾನ ಮಾಡಿ ಕಂಬಳದಲ್ಲಿ ಭಾಗವಹಿಸುವಂತಿಲ್ಲ. ಯಾವುದೇ ಕಾರಣಕ್ಕೂ ಅಶಿಸ್ತು ಪ್ರದರ್ಶಿಸಿದಲ್ಲಿ ಅಂತಹ ತೀರ್ಪುಗಾರರನ್ನು ಮುಂದಿನ ಕಂಬಳಗಳಿಗೆ ಅಮಾನತುಗೊಳಿಸುವುದೆಂದು ಜಿಲ್ಲಾ ಕಂಬಳ ಸಮಿತಿಯ ತುರ್ತು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಕಂಬಳ ಸಮಿತಿಯ ಆಶ್ರಯದಲ್ಲಿ ಬುಧವಾರ ಸಂಜೆ ಒಂಟಿಕಟ್ಟೆ ಕಡಲಕೆರೆ ನಿಸರ್ಗಧಾಮದ ಬಳಿ ಇರುವ ಸೃಷ್ಠಿ ಗಾರ್ಡನ್ ನ ಹಾಲ್ ನಲ್ಲಿ ಕೋಣಗಳ ಯಜಮಾನರಿಗೆ ನಡೆದ ತುರ್ತುಸಭೆಯಲ್ಲಿ ಮೇಲಿನ ತೀರ್ಮಾನವನ್ನು

ವಿದೇಶಗಳಲ್ಲಿಯೂ ಕಂಬಳ ನಡೆಯುವ ದಿನಗಳು ಬರಲಿದೆ – ಬೊಮ್ಮಯಿ

ಶಾಸಕ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮ, ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುತ್ತಿರುವ 20 ನೇ ವರ್ಷದ ಮೂಡುಬಿದಿರೆಯ ಪ್ರತಿಷ್ಠಿತ ಹೊನಲು ಬೆಳಕಿನ ಕೋಟಿ-ಚೆನ್ನಯ ಕಂಬಳದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಬ್ಬಯಿ ಯವರು ಭಾಗವಹಿಸಿ ಸುಶಾಸನ ದಿನಾಚರಣೆಯ ಅಂಗವಾಗಿ ವಾಜಿಪೇಯಿ ಅವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು. ಗ್ರಾಮೀಣ ಸೊಗಡಿನ ಸಂಸ್ಕೃತಿಯನ್ನು ಬಿಂಬಿಸುವ ಕಂಬಳವು ಕ್ರೀಡೆ ಮಾತ್ರ ಅಲ್ಲ ಅದು

ಇಂದು ಹೋಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

ಮೂಡುಬಿದಿರೆ : ಮಹಿಷಮರ್ಧಿನಿ ಕಂಬಳ ಸಮಿತಿ ಇದರ ವತಿಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಹೋಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಶನಿವಾರ ಬೆಳಿಗ್ಗೆ ಆರಂಭಗೊಂಡಿತು. ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಂಬಳವನ್ನು ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಕಂಬಳದ ಕರೆಯಲ್ಲಿ ದೀಪ ಬೆಳಗಿಸಿ, ತೆಂಗಿನ ಕಾಯಿ ಹೊಡೆಯುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಆಧುನಿಕ ಕಾಲದಲ್ಲಿರುವ ನಾವು ಈ

ಜೋಡುಕರೆ ಕಂಬಳ ಸಮಿತಿಯ ತಕರಾರು ಅರ್ಜಿ ವಿಚಾರಣೆ ಪೂರ್ಣ

ಪುತ್ತೂರು: ಕಂಬಳ ಕೂಟವನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರಾಣಿದಯಾ ಸಂಘದವರು ಸಲ್ಲಿಸಿರುವ ಅರ್ಜಿ ಮತ್ತು ಪ್ರಾಣಿದಯಾ ಸಂಘದವರ ಅರ್ಜಿಗೆ ಪ್ರತಿಯಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಮತ್ತಿತರರು ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ತೀರ್ಪು ಕಾಯ್ದಿರಿಸಿದೆ. ಕಂಬಳ ಕೂಟದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ. ಆದ್ದರಿಂದ

ಇತಿಹಾಸ ಪ್ರಸಿದ್ಧ ನಾವುಂದ ಕಂಬಳ ಮಹೋತ್ಸವ

ಇತಿಹಾಸ ಪ್ರಸಿದ್ಧ ಸಾಂಪ್ರದಾಯಿಕ ನಾವುಂದ ಕಂಬಳ ಮಹೋತ್ಸವವು ಸಂಭ್ರಮದಲ್ಲಿ ನಡೆಯಲಿರುವುದು. ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಗುತ್ತದೆ ವಿಶಾಲವಾದ ಈ ಕಂಬಳ ಗದ್ದೆಯನ್ನು ತೋರಣಗಳಿಂದ ಅಲಂಕಾರಿಸಲಾಗುತ್ತದೆ . ಹಲವಾರು ವರ್ಷಗಳಿಂದ ಕಂಬಳವನ್ನು ಉಳಿಸಿ ಬೆಳೆಸಿಕೊಂಡು ಬಂದಿರುವ ವೆಂಕಟರಮಣ ಗಾಣಿಗ ನಾವುಂದ ಅವರ ಕೋಣಗಳನ್ನು ಗದ್ದೆಗೆ ಇಳಿಸುವ ಮೂಲಕ ಕಂಬಳಕ್ಕೆ ಹಸಿರು ನಿಶಾನೆ ಸಿಕ್ಕಂತಾಗುತ್ತದೆ.ಈ ಬಾರಿ ಸೆನ್ಸಾರ್ ಮೂಲಕ ಕೋಣದ